MIRROR FOCUS

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ನಂತರ ತರಕಾರಿ ಸರದಿ | ಶತಕ ಬಾರಿಸಿದ ಟೊಮ್ಯಾಟೋ, ಬೀನ್ಸ್ ದ್ವಿಶತಕ, ಬೆಳ್ಳುಳ್ಳಿ ತ್ರಿಶತಕ..! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ. 

Advertisement
Advertisement

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.

ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ‌ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

6 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

8 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

13 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

14 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

19 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

21 hours ago