Advertisement
MIRROR FOCUS

ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ನಂತರ ತರಕಾರಿ ಸರದಿ | ಶತಕ ಬಾರಿಸಿದ ಟೊಮ್ಯಾಟೋ, ಬೀನ್ಸ್ ದ್ವಿಶತಕ, ಬೆಳ್ಳುಳ್ಳಿ ತ್ರಿಶತಕ..! |

Share

ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ. 

Advertisement
Advertisement
Advertisement
Advertisement

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.

Advertisement

ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ‌ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.

  • ಅಂತರ್ಜಾಲ ಮಾಹಿತಿ
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

2 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

2 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

3 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

3 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

3 days ago

ಬೆಂಗಳೂರಲ್ಲಿ ದಾಖಲೆ ತಾಪಮಾನ | ಬೇಸಿಗೆಯಲ್ಲಿ ಈ ಬಾರಿ ಉಷ್ಣಾಂಶ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…

3 days ago