ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.
ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…