ಕಳೆದ ಕೆಲವು ದಿನಗಳಿಂದ ಬೆಲೆ ಏರಿಕೆಯ(Price Hike) ಪರ್ವ ಆರಂಭವಾಗಿದೆ. ಪೆಟ್ರೋಲ್(Petrol), ಡಿಸೇಲ್(Descale) ಬಳಿಕ ರಾಜ್ಯದ ಜನತೆಗೆ ಈಗ ದಿನನಿತ್ಯ ಬಳಕೆಯ ತರಕಾರಿಗಳ ಬೆಲೆ ದಿಢೀರನೆ (Vegetable Price Hike) ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಟೊಮ್ಯಾಟೋ(Tomato) ರೇಟ್ ಶತಕ ದಾಟಿದ್ರೆ, ಬೀನ್ಸ್(Beans) ಬೆಲೆ ಇನ್ನೂರು ರೂಪಾಯಿ ದಾಟಿದೆ. ಕಳೆದ ವಾರಕ್ಕಿಂತ ಈ ವಾರ ಬಹುತೇಕ ತರಕಾರಿ(Vegetable) ದರ ದುಪ್ಪಟ್ಟು, ಮೂರು ಪಟ್ಟು ಜಾಸ್ತಿಯಾಗಿದೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾದ ಬೆನ್ನಲ್ಲೇ ನಗರದ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ. ಟೊಮ್ಯಾಟೋ ನೂರರ ಗಡಿ ದಾಟಿದ್ರೆ, ಬೀನ್ಸ್ ಇನ್ನೂರು ಹಾಗೂ ಬೆಳ್ಳುಳ್ಳಿ ಮುನ್ನೂರು ರೂಪಾಯಿ ದಾಟಿದೆ. ಬೆಂಗಳೂರಿನ ಕೆಆರ್ ಮಾರುಕಟ್ಟೆ, ಮಲ್ಲೇಶ್ವರ, ಗಾಂಧಿ ಬಜಾರ್, ಹೆಬ್ಬಾಳ ಮಾರುಕಟ್ಟೆ ಸೇರಿದಂತೆ ಎಲ್ಲಾ ಕಡೆಗಳಲ್ಲೂ ತರಕಾರಿ ಬಲು ತುಟ್ಟಿಯಾಗಿದೆ. ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ.
ರಾಜ್ಯದಲ್ಲಿ ಕುಸಿತ ಕಂಡ ಟೊಮ್ಯಾಟೊ ಇಳುವರಿ : ರಾಜ್ಯದಲ್ಲಿ ಟೊಮ್ಯಾಟೋ ಉತ್ಪಾದನೆ ಕುಸಿತ ಕಂಡ ಹಿನ್ನೆಲೆ ಬೆಲೆ ಏರಿಕೆಯಾಗಿದೆ ಅನ್ನೋದು ವರ್ತಕರ ಮಾತು. ಮಂಡ್ಯ, ಕೋಲಾರ, ಕನಕಪುರ, ಕಡೂರು, ಮದ್ದೂರು ಕಡೆಗಳಲ್ಲಿ ಟೊಮ್ಯಾಟೋ ಇಳುವರಿ ಕುಸಿತವಾಗಿದೆ. ಸದ್ಯ ಮಹಾರಾಷ್ಟ್ರದಿಂದ ಆಮದಾಗುವ ಟೊಮ್ಯಾಟೋ ನೆಚ್ಚಿಕೊಂಡಿವೆ ಬೆಂಗಳೂರಿನ ಮಾರುಕಟ್ಟೆಗಳು. ಟೊಮ್ಯಾಟೋ ಜೊತೆಗೆ ಬೀನ್ಸ್, ಬೆಳ್ಳುಳ್ಳಿ ಸೇರಿದಂತೆ ಇತರೆ ತರಕಾರಿ ದರವೂ ತುಟ್ಟಿಯಾಗಿದೆ. ಮುಂದಿನ ಒಂದು ತಿಂಗಳ ಕಾಲ ದರ ಇದೇ ರೀತಿ ಏರಿಕೆಯಾಗಲಿದೆ ಎನ್ನುವುದು ಮಾರುಕಟ್ಟೆ ವರದಿ.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…