#Healthyfood | ಮಾನವ ಆಹಾರದಲ್ಲಿ ತರಕಾರಿ ಹಾಗೂ ಹಣ್ಣುಗಳ ಪಾತ್ರ ಬಹುಮುಖ್ಯ |

October 4, 2023
2:24 PM
ಆಹಾರಗಳು ನಮ್ಮ ಶರೀರವನ್ನು ಪೋಷಣೆ ಮಾದುವುದಲ್ಲದೆ ನಮ್ಮ ದೈನಂದಿನ ಚಟುವಟಿಕೆಗಳಿಗೆ ಉತ್ತೇಜನಕೊಡುತ್ತದೆಂದು ಎಲ್ಲರಿಗೂ ತಿಳಿದ ವಿಷಯ. ಆದರೆ ಅದೇ ಆಹಾರದಿಂದ ಕೆಲವು ಕಾಯಿಲೆಗಳನ್ನು - ಅಂದರೆ ಅಧಿಕ ರಕ್ತದೊತ್ತಡ, ಅಸ್ತಮಾ, ಚರ್ಮ ತುರಿಕೆ ಮತ್ತು ಮೂತ್ರಕೋಶ ಸೋಂಕು - ಇಂತಹ ಕಾಯಿಲೆಗಳನ್ನು ತಡೆಗಟ್ಟಬಹುದು.

ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಮಾತಿನಂತೆ ನಾವು ತೆಗೆದುಕೊಳ್ಳಬೇಕಾದ ಆಹಾರ ಕ್ರಮದಲ್ಲಿ ನಮಗೆ ಹೆಚ್ಚಿನ ಕಾಳಜಿ ಇರಬೇಕು. ಹೊಟ್ಟೆ ತುಂಬಿಸಲು ಏನಾದರೊಂದನ್ನು ಸೇವಿಸಿದರಾಯಿತು ಎಂಬ ನಿರ್ಲಕ್ಷ್ಯವೇ ರೋಗಕ್ಕೆ ಆಹ್ವಾನವನ್ನು ನೀಡುತ್ತದೆ. ಆದರೆ ಸಣ್ಣ ವಯಸ್ಸಿನಿಂದಲೇ ಸಾಧ್ಯವಾದಷ್ಟು ಹೆಚ್ಚಿನ ಪ್ರಮಾಣದಲ್ಲಿ ಪೌಷ್ಠಿಕ ಆಹಾರಗಳ ಸೇವನೆಗೆ ಒತ್ತು ನೀಡಬೇಕು.

ಆಹಾರಗಳು ನಮ್ಮ ಶರೀರವನ್ನು ಪೋಷಣೆ ಮಾದುವುದಲ್ಲದೆ ನಮ್ಮ ದೈನಂದಿನ ಚಟುವಟಿಕೆಗಳಿಗೆ ಉತ್ತೇಜನಕೊಡುತ್ತದೆಂದು ಎಲ್ಲರಿಗೂ ತಿಳಿದ ವಿಷಯ. ಆದರೆ ಅದೇ ಆಹಾರದಿಂದ ಕೆಲವು ಕಾಯಿಲೆಗಳನ್ನು – ಅಂದರೆ ಅಧಿಕ ರಕ್ತದೊತ್ತಡ, ಅಸ್ತಮಾ, ಚರ್ಮ ತುರಿಕೆ ಮತ್ತು ಮೂತ್ರಕೋಶ ಸೋಂಕು – ಇಂತಹ ಕಾಯಿಲೆಗಳನ್ನು ತಡೆಗಟ್ಟಬಹುದು. ಕೆಲವೊಂದು ಹಣ್ಣುಗಳು ಹಾಗೂ ತರಕಾರಿಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ. ನಿಮ್ಮನ್ನು ಆರೋಗ್ಯಕರವಾಗಿಸಲು ಅಗತ್ಯವಾಗಿರುವ ಪೋಷಕಾಂಶಗಳು ಇವುಗಳು ಒಳಗೊಂಡಿವೆ. ದಿನವೂ ಈ ಆಹಾರಗಳನ್ನು ನಿಮಗೆ ಸೇವಿಸಬಹುದು.

ಸೇಬಿನಲ್ಲಿ ಫ್ಲಾವನೋಯ್ಡ್‌ಗಳು (ಆಂಟಿ-ಆಕ್ಸಿಡೆಂಟ್‌ಗಳು) ಅಧಿಕವಾಗಿರುತ್ತವೆ. ಇವುಗಳು ಅಸ್ತಮಾ ಮತ್ತು ಮಧುಮೇಹವನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ. ಇದರ ಜೊತೆಗೆ ಸೇಬುಗಳು ನಮ್ಮ ಹಲ್ಲುಗಳಿಗೆ ಬಿಳುಪನ್ನು ಸಹ ನೀಡುತ್ತವೆ ಮತ್ತು ಮೌತ್ ಫ್ರೆಶ್‌ನರ್ ಆಗಿ ಸಹ ಕಾರ್ಯ ನಿರ್ವಹಿಸುತ್ತವೆ. ಇದು ಸಹ ಮಧುಮೇಹದ ವಿರುದ್ಧ ಕೂಡ ಹೋರಾಡುತ್ತದೆ.

ಕೊತ್ತಂಬರಿಯಲ್ಲಿರುವ ಆರು ಪ್ರಮುಖ ಆಮ್ಲಗಳಲ್ಲಿ ಲಿನೋಲಿಕ್ ಆಸಿಡ್ ಎಂಬ ಆಮ್ಲವೂ ಇದೆ. ಇದು ರಕ್ತದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಗಳನ್ನು ಕಡಿಮೆ ಮಾಡಲು ಪ್ರಮುಖವಾಗಿದೆ. ಇದರೊಂದಿಗೆ ಓಲಿಕ್ ಆಮ್ಲ, ಪಾಮಿಟಿಕ್ ಆಮ್ಲ, ಸ್ಟಿಯಾರಿಕ್ ಅಮ್ಲ ಮತ್ತು ವಿಟಮಿನ್ ಸಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕೆಡಿಮೆಗೊಳಿಸಲು ನೆರವಾಗುತ್ತವೆ.

ಹೂಕೋಸು ಹಾಗೂ ಇತರ ಕ್ಯಾಬೇಜು ವರ್ಗಕ್ಕೆ ಸೇರಿದ ತರಕಾರಿಗಳು ರಕ್ತದೊತ್ತಡವನ್ನು ಹಾಗೂ ಮೂತ್ರಪಿ೦ಡಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಬಲ್ಲವು. ವಿಜ್ಞಾನಿಗಳು ಹಾಗೂ ಸ೦ಶೋಧನಾ ಅಧ್ಯಯನಗಳು ಹೇಳಿರುವ ಪ್ರಕಾರ, DNA methylation ಅನ್ನು ಸುಧಾರಿಸುವಲ್ಲಿ sulforaphane ನ ಪ್ರಯೋಜನಗಳು ಅಡಗಿವೆ. ಇದ೦ತೂ ಜೀವಕೋಶಗಳ ಸಹಜವಾದ ಕಾರ್ಯನಿರ್ವಹಣೆಗೆ ಹಾಗೂ ಸಮರ್ಪಕ gene ಅಭಿವ್ಯಕ್ತಿಗೆ, ವಿಶೇಷವಾಗಿ endothelium ಎ೦ದು ಕರೆಯಲ್ಪಡುವ, ಸುಲಭವಾಗಿ ಹಾನಿಗೊಳಪಡುವ ರಕ್ತನಾಳಗಳ ಒಳಮೇಲ್ಮೈಗಳ ವಿಚಾರದಲ್ಲ೦ತೂ ಇದು ಬಹು ಅವಶ್ಯವಾದುದಾಗಿದೆ.

ಹೀಗಾಗಿ ಹೂಕೋಸನ್ನು ನಿಮ್ಮ ಆಹಾರಕ್ರಮಕ್ಕೆ ಸೇರಿಸಿಕೊ೦ಡಲ್ಲಿ, ಅದು ನಿಮ್ಮ ಹೃದಯದ ಸ್ವಾಸ್ಥ್ಯಕ್ಕೆ ಪೂರಕವಾಗಿರಬಲ್ಲದು.
ಮಾವಿನ ಹಣ್ಣಿನಲ್ಲಿರುವ ಜಿಯಾಕ್ಸಾಂತಿನ್ ಮತ್ತು ಲೂಟೇನ್ ಎಂಬ ಆಂಟಿಆಕ್ಸಿಡೆಂಟ್‌ಗಳು ಮಧುಮೇಹ ಮತ್ತು ಕೆಲವೊಂದು ನಿರ್ದಿಷ್ಟ ಬಗೆಯ ಕಣ್ಣಿನ ಡಿಸಾರ್ಡರ್‌ಗಳನ್ನು ನಿವಾರಿಸಲು ಸಹಾಯ ಮಾಡುತ್ತವೆ.

ಬ್ರೊಕೊಲಿಯಲ್ಲಿ ವಿಟಮಿನ್‌ಗಳು, ಖನಿಜಗಳು, ನಾರಿನಾಂಶ ಮತ್ತು ಆಂಟಿಆಕ್ಸಿಡೆಂಟ್‌ಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇವುಗಳಿಂದ ಮುಕ್ತ ಮೂಲ ಸ್ವರೂಪಗಳಿಗಾಗುವ ಅಪಾಯವನ್ನು ತಡೆಗಟ್ಟಬಹುದು. ಇದು ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆಗೊಳಿಸಲು ಒಂದು ಅತ್ಯಂತ ವಿಶಿಷ್ಟವಾದ ಆಹಾರ.

ಬರಹ :
Dr.Mahantesh Jogi, Assistant Professor of Horticulture,  8105453873
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೊ ಎಫೆಕ್ಟ್‌ – ಮುಂದಿನ ವರ್ಷ ಮತ್ಸ್ಯೋದ್ಯಮಕ್ಕೆ ಸಂಕಷ್ಟ?
July 12, 2026
8:39 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಇದ್ದಕ್ಕಿದ್ದಂತೆ ದುರ್ಬಲವಾಗಿದ್ದೇಕೆ..? ಇಲ್ಲಿದೆ ವೈಜ್ಞಾನಿಕ ಕಾರಣ
July 12, 2026
4:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror