Advertisement
Opinion

#Healthyfood | ಮಾನವ ಆಹಾರದಲ್ಲಿ ತರಕಾರಿ ಹಾಗೂ ಹಣ್ಣುಗಳ ಪಾತ್ರ ಬಹುಮುಖ್ಯ |

Share

ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಮಾತಿನಂತೆ ನಾವು ತೆಗೆದುಕೊಳ್ಳಬೇಕಾದ ಆಹಾರ ಕ್ರಮದಲ್ಲಿ ನಮಗೆ ಹೆಚ್ಚಿನ ಕಾಳಜಿ ಇರಬೇಕು. ಹೊಟ್ಟೆ ತುಂಬಿಸಲು ಏನಾದರೊಂದನ್ನು ಸೇವಿಸಿದರಾಯಿತು ಎಂಬ ನಿರ್ಲಕ್ಷ್ಯವೇ ರೋಗಕ್ಕೆ ಆಹ್ವಾನವನ್ನು ನೀಡುತ್ತದೆ. ಆದರೆ ಸಣ್ಣ ವಯಸ್ಸಿನಿಂದಲೇ ಸಾಧ್ಯವಾದಷ್ಟು ಹೆಚ್ಚಿನ ಪ್ರಮಾಣದಲ್ಲಿ ಪೌಷ್ಠಿಕ ಆಹಾರಗಳ ಸೇವನೆಗೆ ಒತ್ತು ನೀಡಬೇಕು.

ಆಹಾರಗಳು ನಮ್ಮ ಶರೀರವನ್ನು ಪೋಷಣೆ ಮಾದುವುದಲ್ಲದೆ ನಮ್ಮ ದೈನಂದಿನ ಚಟುವಟಿಕೆಗಳಿಗೆ ಉತ್ತೇಜನಕೊಡುತ್ತದೆಂದು ಎಲ್ಲರಿಗೂ ತಿಳಿದ ವಿಷಯ. ಆದರೆ ಅದೇ ಆಹಾರದಿಂದ ಕೆಲವು ಕಾಯಿಲೆಗಳನ್ನು – ಅಂದರೆ ಅಧಿಕ ರಕ್ತದೊತ್ತಡ, ಅಸ್ತಮಾ, ಚರ್ಮ ತುರಿಕೆ ಮತ್ತು ಮೂತ್ರಕೋಶ ಸೋಂಕು – ಇಂತಹ ಕಾಯಿಲೆಗಳನ್ನು ತಡೆಗಟ್ಟಬಹುದು. ಕೆಲವೊಂದು ಹಣ್ಣುಗಳು ಹಾಗೂ ತರಕಾರಿಗಳನ್ನು ಇಲ್ಲಿ ಪಟ್ಟಿ ಮಾಡಲಾಗಿದೆ. ನಿಮ್ಮನ್ನು ಆರೋಗ್ಯಕರವಾಗಿಸಲು ಅಗತ್ಯವಾಗಿರುವ ಪೋಷಕಾಂಶಗಳು ಇವುಗಳು ಒಳಗೊಂಡಿವೆ. ದಿನವೂ ಈ ಆಹಾರಗಳನ್ನು ನಿಮಗೆ ಸೇವಿಸಬಹುದು.

ಸೇಬಿನಲ್ಲಿ ಫ್ಲಾವನೋಯ್ಡ್‌ಗಳು (ಆಂಟಿ-ಆಕ್ಸಿಡೆಂಟ್‌ಗಳು) ಅಧಿಕವಾಗಿರುತ್ತವೆ. ಇವುಗಳು ಅಸ್ತಮಾ ಮತ್ತು ಮಧುಮೇಹವನ್ನು ನಿವಾರಿಸಲು ಪರಿಣಾಮಕಾರಿಯಾಗಿ ಕೆಲಸ ಮಾಡುತ್ತವೆ. ಇದರ ಜೊತೆಗೆ ಸೇಬುಗಳು ನಮ್ಮ ಹಲ್ಲುಗಳಿಗೆ ಬಿಳುಪನ್ನು ಸಹ ನೀಡುತ್ತವೆ ಮತ್ತು ಮೌತ್ ಫ್ರೆಶ್‌ನರ್ ಆಗಿ ಸಹ ಕಾರ್ಯ ನಿರ್ವಹಿಸುತ್ತವೆ. ಇದು ಸಹ ಮಧುಮೇಹದ ವಿರುದ್ಧ ಕೂಡ ಹೋರಾಡುತ್ತದೆ.

ಕೊತ್ತಂಬರಿಯಲ್ಲಿರುವ ಆರು ಪ್ರಮುಖ ಆಮ್ಲಗಳಲ್ಲಿ ಲಿನೋಲಿಕ್ ಆಸಿಡ್ ಎಂಬ ಆಮ್ಲವೂ ಇದೆ. ಇದು ರಕ್ತದಲ್ಲಿರುವ ಕೆಟ್ಟ ಕೊಲೆಸ್ಟ್ರಾಲ್ ಗಳನ್ನು ಕಡಿಮೆ ಮಾಡಲು ಪ್ರಮುಖವಾಗಿದೆ. ಇದರೊಂದಿಗೆ ಓಲಿಕ್ ಆಮ್ಲ, ಪಾಮಿಟಿಕ್ ಆಮ್ಲ, ಸ್ಟಿಯಾರಿಕ್ ಅಮ್ಲ ಮತ್ತು ವಿಟಮಿನ್ ಸಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕೆಡಿಮೆಗೊಳಿಸಲು ನೆರವಾಗುತ್ತವೆ.

ಹೂಕೋಸು ಹಾಗೂ ಇತರ ಕ್ಯಾಬೇಜು ವರ್ಗಕ್ಕೆ ಸೇರಿದ ತರಕಾರಿಗಳು ರಕ್ತದೊತ್ತಡವನ್ನು ಹಾಗೂ ಮೂತ್ರಪಿ೦ಡಗಳ ಕಾರ್ಯನಿರ್ವಹಣೆಯನ್ನು ಸುಧಾರಿಸಬಲ್ಲವು. ವಿಜ್ಞಾನಿಗಳು ಹಾಗೂ ಸ೦ಶೋಧನಾ ಅಧ್ಯಯನಗಳು ಹೇಳಿರುವ ಪ್ರಕಾರ, DNA methylation ಅನ್ನು ಸುಧಾರಿಸುವಲ್ಲಿ sulforaphane ನ ಪ್ರಯೋಜನಗಳು ಅಡಗಿವೆ. ಇದ೦ತೂ ಜೀವಕೋಶಗಳ ಸಹಜವಾದ ಕಾರ್ಯನಿರ್ವಹಣೆಗೆ ಹಾಗೂ ಸಮರ್ಪಕ gene ಅಭಿವ್ಯಕ್ತಿಗೆ, ವಿಶೇಷವಾಗಿ endothelium ಎ೦ದು ಕರೆಯಲ್ಪಡುವ, ಸುಲಭವಾಗಿ ಹಾನಿಗೊಳಪಡುವ ರಕ್ತನಾಳಗಳ ಒಳಮೇಲ್ಮೈಗಳ ವಿಚಾರದಲ್ಲ೦ತೂ ಇದು ಬಹು ಅವಶ್ಯವಾದುದಾಗಿದೆ.

ಹೀಗಾಗಿ ಹೂಕೋಸನ್ನು ನಿಮ್ಮ ಆಹಾರಕ್ರಮಕ್ಕೆ ಸೇರಿಸಿಕೊ೦ಡಲ್ಲಿ, ಅದು ನಿಮ್ಮ ಹೃದಯದ ಸ್ವಾಸ್ಥ್ಯಕ್ಕೆ ಪೂರಕವಾಗಿರಬಲ್ಲದು.
ಮಾವಿನ ಹಣ್ಣಿನಲ್ಲಿರುವ ಜಿಯಾಕ್ಸಾಂತಿನ್ ಮತ್ತು ಲೂಟೇನ್ ಎಂಬ ಆಂಟಿಆಕ್ಸಿಡೆಂಟ್‌ಗಳು ಮಧುಮೇಹ ಮತ್ತು ಕೆಲವೊಂದು ನಿರ್ದಿಷ್ಟ ಬಗೆಯ ಕಣ್ಣಿನ ಡಿಸಾರ್ಡರ್‌ಗಳನ್ನು ನಿವಾರಿಸಲು ಸಹಾಯ ಮಾಡುತ್ತವೆ.

ಬ್ರೊಕೊಲಿಯಲ್ಲಿ ವಿಟಮಿನ್‌ಗಳು, ಖನಿಜಗಳು, ನಾರಿನಾಂಶ ಮತ್ತು ಆಂಟಿಆಕ್ಸಿಡೆಂಟ್‌ಗಳು ಅಧಿಕ ಪ್ರಮಾಣದಲ್ಲಿರುತ್ತವೆ. ಇವುಗಳಿಂದ ಮುಕ್ತ ಮೂಲ ಸ್ವರೂಪಗಳಿಗಾಗುವ ಅಪಾಯವನ್ನು ತಡೆಗಟ್ಟಬಹುದು. ಇದು ರಕ್ತದಲ್ಲಿನ ಸಕ್ಕರೆ ಅಂಶವನ್ನು ಕಡಿಮೆಗೊಳಿಸಲು ಒಂದು ಅತ್ಯಂತ ವಿಶಿಷ್ಟವಾದ ಆಹಾರ.

ಬರಹ :
Dr.Mahantesh Jogi, Assistant Professor of Horticulture,  8105453873
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

4 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

5 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

5 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

13 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

17 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

17 hours ago