ಸುದ್ದಿಗಳು

#Drought | ಬರದ ಛಾಯೆ |ಊರಿಗೆ ಊರೇ ಖಾಲಿ | ಮನೆ ಕಾಯುತ್ತಿದ್ದಾರೆ ಹಿರಿ ಜೀವಗಳು| ಮಳೆನೂ ಇಲ್ಲ, ಗುಳೆ ಹೋದವರು ಬಂದಿಲ್ಲ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಡೀ ಊರಿಗೆ ಊರೇ ಖಾಲಿ ಖಾಲಿಯಾಗಿದೆ. ಊರಿಡೀ ಹುಡಿಕಿದ್ರೂ ಕಾನ ಸಿಗೋಗು ಅಲ್ಲಿ ಇಲ್ಲಿ ನಿಧಾನಕ್ಕೆ ಓಡಾಡುವ ಹಿರಿ ಜೀವಗಳು ಮಾತ್ರ. ಊರು ಕೇರಿ ಗಲಾಟೆ ಎಬ್ಬಿಸುತ್ತಾ ಓಡಾಡುವ ಮಕ್ಕಳು, ಅದು ಇದು ಕೆಲಸದಲ್ಲಿ ನಿರತಾರಾಗಿರುವ ಮಹಿಳೆಯರು, ರಸ್ತೆಯಲ್ಲಿ ಅಡ್ಡಾಡುವ ಪುರುಷರು ಯಾರೂ ಇಲ್ಲಿ ಕಾಣ ಸಿಗುವುದಿಲ್ಲ. ಹೆಚ್ಚಿನ ಮನೆಗಳಿಗೆ ಬೀಗ ಜಡಿಯಲಾಗಿದೆ. ಇದು ಮುಂಗಾರು #Mansoon ಬಾರದ ಹಿನ್ನೆಲೆ ಆವರಿಸಿಕೊಂಡ ಬರ #Drought ದ ಛಾಯೆಯ ಚಿತ್ರಣ

Advertisement
Advertisement

ಬರಪೀಡಿತ ಜಿಲ್ಲೆ ಅಂತಾನೇ ಹಣೆಪಟ್ಟಿ ಕಟ್ಟಿಕೊಂಡಿರೋ ಜಿಲ್ಲೆಗಳ್ಲಿ ಬಾಗಕೋಟೆ ಕೂಡ. ಈ ಜಿಲ್ಲೆಯಾದ್ಯಂತ ಬಿರು ಬಿಸಿಲಿಗೆ ಒಣಗಿ ಬಾಯಿಬಟ್ಟಿರೋ ಹೊಲ, ಕೆರೆಗಳು.. ಉದ್ಯೋಗ ಅರಿಸಿ ಗುಳೆಹೋಗಿ ಖಾಲಿ ಹೊಡೆಯುತ್ತಿರೋ ತಾಂಡಾಗಳು. ರಣ ರಣ ಬಿಸಿಲಿನಲ್ಲಿ ಬದುಕನ್ನರಿಸಿ ಹೊರ ಹೋಗಲಾಗದೆ ಆಕಾದತ್ತ ಮುಖ ಮಾಡಿ ಮಳೆಗಾಗಿ ಕಾಯುತ್ತಿರುವ ಹಿರಿ ಜೀವಗಳು..

ಕಿತ್ತೂರು ಕರ್ನಾಟಕ ಭಾಗದಲ್ಲಿ ಮುಂಗಾರು ಕೈ ಕೊಟ್ಟಿದೆ. ಇದರಿಂದ ಕೂಲಿ ಕೆಲಸ ಸಿಗದ ಕಾರಣ ಇಡೀ ಊರಿಗೆ ಊರೇ ಗುಳೆ ಹೋಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮ ಖಾಲಿ ಖಾಲಿ ಹೊಡೆಯುತ್ತಿದೆ. ಲಿಂಗಾಪುರದ ಬೋರ್ವೆಲ್ಗಳಲ್ಲಿ ಇದ್ದ ಅಲ್ಪಸ್ವಲ್ಪ ನೀರು ಬತ್ತಿ ಹೋಗುತ್ತಿವೆ. ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಹತ್ತಿರ ಯಾವುದೇ ಕೈಗಾರಿಕೆಗಳು ಸಹ ಇಲ್ಲ. ನರೇಗಾ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಸಿಕ್ಕರೂ ಸರಿಯಾದ ಸಮಯಕ್ಕೆ ಕೂಲಿ ಕೈಸೇರಲ್ಲ. ಇದರಿಂದ ಗ್ರಾಮದ ಶೇಕಡಾ 80ರಷ್ಟು ಮನೆಗಳಿಗೆ ಬೀಗಮುದ್ರೆ ಬಿದ್ದಿದೆ.

ಲಿಂಗಾಪುರ ಗ್ರಾಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಮನೆಗಳಿವೆ. ಶೇಕಡಾ 80 ರಷ್ಟು ಕುಟುಂಬಗಳು ಮನೆಗಳಿಗೆ ಬೀಗ ಹಾಕಿ ಕೂಲಿ ಕೆಲಸಕ್ಕಾಗಿ ಮಂಗಳೂರು, ಗೋವಾಕೆ ಹೋಗಿವೆ. ನೀವೇನಾದ್ರೂ ಈ ಗ್ರಾಮದಲ್ಲಿ ಹೋದ್ರೆ ಕೇವಲ ವಯಸ್ಸಾದ ವೃದ್ಧರು ಮಾತ್ರ ಇರುವ ಮ್ಯೂಸಿಯಂಗೆ ಹೋದಂತೆ ಭಾಸವಾಗುತ್ತೆ. ಇನ್ನಾದ್ರೂ ಬೇಗ ಮಳೆ ಬರಲಿ, ಕೆರೆ-ಬಾವಿಗಳು ತುಂಬಲಿ, ಜನರು ಊರಿಗೆ ಮರಳಲಿ..

  • ಅಂತರ್ಜಾಲ ಸಂಗ್ರಹ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯಾವುದೇ ಕ್ಷಣದಲ್ಲಿ ಕೆ.ಆರ್.ಎಸ್. ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಸಾಧ್ಯತೆ

ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…

5 hours ago

ಕೃಷಿಗೆ ತಂತ್ರಜ್ಞಾನ ಏಕೆ ಬೇಕು..? | ಗ್ರಾಮೀಣ ಭಾಗದ ಈ ಕೃಷಿ ಕಾರ್ಮಿಕ ನೀಡಿದ ಸಂದೇಶ

ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…

7 hours ago

ಮಿಜೋರಾಂನಲ್ಲಿ ಅಡಿಕೆ ಬೆಳೆಗೆ ಉತ್ತೇಜನ | ಅಡಿಕೆ ಸಂಸ್ಕರಣಾ ಘಟಕಗಳ ಸ್ಥಾಪನೆಗೆ ಆದ್ಯತೆ | ರೈತರಿಂದ ಪೊರಕೆ ಕಡ್ಡಿ ಖರೀದಿಸುವ ಸರ್ಕಾರ |

ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…

12 hours ago

ಹವಾಮಾನ ವರದಿ | 21-06-2025 | ಹೇಗೆ ಸಾಗುತ್ತಿದೆ ಮಳೆಯ ದಾರಿ..? | ಜೂ.28 ರವರೆಗೆ ಮಳೆಯೋ..? ಬಿಸಿಲೋ..?

ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…

13 hours ago

ಬಂಡೆ ತೆರವು | ಶಿರಾಡಿಯಲ್ಲಿ ರೈಲು ಸಂಚಾರ ಆರಂಭ |

ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ  ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…

18 hours ago

ಅಡಿಕೆ ಬೆಳೆ ಸಮಸ್ಯೆ ನಮ್ಮಲ್ಲಿ ಮಾತ್ರವಲ್ಲ.. ಭೂತಾನ್‌ನಲ್ಲೂ ಇದೆ..! ಕಳೆದ 3 ವರ್ಷಗಳಿಂದ ಅಲ್ಲಿ ಏನಾಗುತ್ತಿದೆ..?

ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…

20 hours ago