Advertisement
ಸುದ್ದಿಗಳು

#Drought | ಬರದ ಛಾಯೆ |ಊರಿಗೆ ಊರೇ ಖಾಲಿ | ಮನೆ ಕಾಯುತ್ತಿದ್ದಾರೆ ಹಿರಿ ಜೀವಗಳು| ಮಳೆನೂ ಇಲ್ಲ, ಗುಳೆ ಹೋದವರು ಬಂದಿಲ್ಲ

Share

ಇಡೀ ಊರಿಗೆ ಊರೇ ಖಾಲಿ ಖಾಲಿಯಾಗಿದೆ. ಊರಿಡೀ ಹುಡಿಕಿದ್ರೂ ಕಾನ ಸಿಗೋಗು ಅಲ್ಲಿ ಇಲ್ಲಿ ನಿಧಾನಕ್ಕೆ ಓಡಾಡುವ ಹಿರಿ ಜೀವಗಳು ಮಾತ್ರ. ಊರು ಕೇರಿ ಗಲಾಟೆ ಎಬ್ಬಿಸುತ್ತಾ ಓಡಾಡುವ ಮಕ್ಕಳು, ಅದು ಇದು ಕೆಲಸದಲ್ಲಿ ನಿರತಾರಾಗಿರುವ ಮಹಿಳೆಯರು, ರಸ್ತೆಯಲ್ಲಿ ಅಡ್ಡಾಡುವ ಪುರುಷರು ಯಾರೂ ಇಲ್ಲಿ ಕಾಣ ಸಿಗುವುದಿಲ್ಲ. ಹೆಚ್ಚಿನ ಮನೆಗಳಿಗೆ ಬೀಗ ಜಡಿಯಲಾಗಿದೆ. ಇದು ಮುಂಗಾರು #Mansoon ಬಾರದ ಹಿನ್ನೆಲೆ ಆವರಿಸಿಕೊಂಡ ಬರ #Drought ದ ಛಾಯೆಯ ಚಿತ್ರಣ

Advertisement
Advertisement

ಬರಪೀಡಿತ ಜಿಲ್ಲೆ ಅಂತಾನೇ ಹಣೆಪಟ್ಟಿ ಕಟ್ಟಿಕೊಂಡಿರೋ ಜಿಲ್ಲೆಗಳ್ಲಿ ಬಾಗಕೋಟೆ ಕೂಡ. ಈ ಜಿಲ್ಲೆಯಾದ್ಯಂತ ಬಿರು ಬಿಸಿಲಿಗೆ ಒಣಗಿ ಬಾಯಿಬಟ್ಟಿರೋ ಹೊಲ, ಕೆರೆಗಳು.. ಉದ್ಯೋಗ ಅರಿಸಿ ಗುಳೆಹೋಗಿ ಖಾಲಿ ಹೊಡೆಯುತ್ತಿರೋ ತಾಂಡಾಗಳು. ರಣ ರಣ ಬಿಸಿಲಿನಲ್ಲಿ ಬದುಕನ್ನರಿಸಿ ಹೊರ ಹೋಗಲಾಗದೆ ಆಕಾದತ್ತ ಮುಖ ಮಾಡಿ ಮಳೆಗಾಗಿ ಕಾಯುತ್ತಿರುವ ಹಿರಿ ಜೀವಗಳು..

Advertisement

ಕಿತ್ತೂರು ಕರ್ನಾಟಕ ಭಾಗದಲ್ಲಿ ಮುಂಗಾರು ಕೈ ಕೊಟ್ಟಿದೆ. ಇದರಿಂದ ಕೂಲಿ ಕೆಲಸ ಸಿಗದ ಕಾರಣ ಇಡೀ ಊರಿಗೆ ಊರೇ ಗುಳೆ ಹೋಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮ ಖಾಲಿ ಖಾಲಿ ಹೊಡೆಯುತ್ತಿದೆ. ಲಿಂಗಾಪುರದ ಬೋರ್ವೆಲ್ಗಳಲ್ಲಿ ಇದ್ದ ಅಲ್ಪಸ್ವಲ್ಪ ನೀರು ಬತ್ತಿ ಹೋಗುತ್ತಿವೆ. ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಹತ್ತಿರ ಯಾವುದೇ ಕೈಗಾರಿಕೆಗಳು ಸಹ ಇಲ್ಲ. ನರೇಗಾ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಸಿಕ್ಕರೂ ಸರಿಯಾದ ಸಮಯಕ್ಕೆ ಕೂಲಿ ಕೈಸೇರಲ್ಲ. ಇದರಿಂದ ಗ್ರಾಮದ ಶೇಕಡಾ 80ರಷ್ಟು ಮನೆಗಳಿಗೆ ಬೀಗಮುದ್ರೆ ಬಿದ್ದಿದೆ.

ಲಿಂಗಾಪುರ ಗ್ರಾಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಮನೆಗಳಿವೆ. ಶೇಕಡಾ 80 ರಷ್ಟು ಕುಟುಂಬಗಳು ಮನೆಗಳಿಗೆ ಬೀಗ ಹಾಕಿ ಕೂಲಿ ಕೆಲಸಕ್ಕಾಗಿ ಮಂಗಳೂರು, ಗೋವಾಕೆ ಹೋಗಿವೆ. ನೀವೇನಾದ್ರೂ ಈ ಗ್ರಾಮದಲ್ಲಿ ಹೋದ್ರೆ ಕೇವಲ ವಯಸ್ಸಾದ ವೃದ್ಧರು ಮಾತ್ರ ಇರುವ ಮ್ಯೂಸಿಯಂಗೆ ಹೋದಂತೆ ಭಾಸವಾಗುತ್ತೆ. ಇನ್ನಾದ್ರೂ ಬೇಗ ಮಳೆ ಬರಲಿ, ಕೆರೆ-ಬಾವಿಗಳು ತುಂಬಲಿ, ಜನರು ಊರಿಗೆ ಮರಳಲಿ..

Advertisement
  • ಅಂತರ್ಜಾಲ ಸಂಗ್ರಹ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-10-2024 | ಗುಡುಗು ಸಹಿತ ಸಾಮಾನ್ಯ ಮಳೆ | ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ

ಈಗಿನಂತೆ ಅಕ್ಟೊಬರ್ 10ರ ವೇಳೆಗೆ ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ…

6 hours ago

ಬಳ್ಪದ ತ್ರಿಶೂಲಿನೀ ದೇವಸ್ಥಾನ | ಕದಂಬರ ಕಾಲದ ದೇವಾಲಯದಲ್ಲಿ ನವರಾತ್ರಿ ಸಂಭ್ರಮ |

ಕದಂಬ, ಚೋಳರ ಕಾಲದಿಂದಲೂ ದೇವಿಯ ಆರಾಧನೆ ನಡೆಯುತ್ತಿತ್ತು. ಕದಂಬರ ಕಾಲದ ದೇವಸ್ಥಾನವೊಂದು ಕಡಬ…

10 hours ago

ರಾಜ್ಯದ  ಚಾರಣ ಪಥಗಳಲ್ಲಿ ದಿನಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ | ಸಚಿವ ಈಶ್ವರ್ ಖಂಡ್ರೆ

ರಾಜ್ಯದ ಎಲ್ಲಾ ಚಾರಣ ಪಥಗಳಲ್ಲಿ ದಿನವೊಂದಕ್ಕೆ ಗರಿಷ್ಠ 300 ಚಾರಣಿಗರಿಗೆ ಮಾತ್ರ ಅವಕಾಶ.

1 day ago

ಹವಾಮಾನ ವರದಿ | 04-10-2024 | ಗುಡುಗು ಸಹಿತ ಮಳೆ ಮುಂದುವರಿಕೆ | ಹಿಂಗಾರು ಮತ್ತಷ್ಟು ವಿಳಂಬ |

ಮಳೆಯು ವಾತಾವರಣದ ಅಧಿಕ ತಾಪಮಾನದಿಂದ ಸ್ಥಳೀಯವಾಗಿ ಉಂಟಾದ ಮೋಡಗಳಿಂದಾಗುತ್ತಿವೆ. ಹಿಂಗಾರು ಮಾರುತಗಳು ಮತ್ತಷ್ಟು…

1 day ago

ಅಡಿಕೆ ಧಾರಣೆ ಇಳಿಕೆ | ಅನಾವಶ್ಯಕ ಗೊಂದಲ ಬೇಡ | ಅಡಿಕೆಗೆ ಬೇಡಿಕೆ ಇದ್ದು ಧಾರಣೆ ಕುಸಿಯುವ ಲಕ್ಷಣವಿಲ್ಲ – ಕಿಶೋರ್‌ ಕುಮಾರ್‌ ಕೊಡ್ಗಿ |

ಅಡಿಕೆ ಧಾರಣೆಗೆ ಸಂಬಂಧಿಸಿದ  ಅನಾವಶ್ಯಕ ಗೊಂದಲಗಳಿಂದ ಕೂಡಿದ, ಆಡಿಕೆ ಬೆಳೆಗಾರರ ಆತ್ಮ ಸೈರ್ಯ ಕುಗ್ಗಿಸುವ…

2 days ago

ಡಾಕ್ಟರೇಟ್ ಪದವಿ ಪಡೆದ ಪುತ್ತೂರಿನ ವಿವೇಕಾನಂದ ಪ್ರಾಧ್ಯಾಪಕಿ ವಿದ್ಯಾ ಎಸ್

ವಿದ್ಯಾ ಎಸ್‌ ಅವರಿಗೆ "ಕರ್ನಾಟಕದ ಹವ್ಯಕ ಸಮುದಾಯ: ಒಂದು ಸಮಾಜಶಾಸ್ತ್ರೀಯ ಅಧ್ಯಯನ" ಎಂಬ…

2 days ago