Advertisement
ಸುದ್ದಿಗಳು

#Drought | ಬರದ ಛಾಯೆ |ಊರಿಗೆ ಊರೇ ಖಾಲಿ | ಮನೆ ಕಾಯುತ್ತಿದ್ದಾರೆ ಹಿರಿ ಜೀವಗಳು| ಮಳೆನೂ ಇಲ್ಲ, ಗುಳೆ ಹೋದವರು ಬಂದಿಲ್ಲ

Share

ಇಡೀ ಊರಿಗೆ ಊರೇ ಖಾಲಿ ಖಾಲಿಯಾಗಿದೆ. ಊರಿಡೀ ಹುಡಿಕಿದ್ರೂ ಕಾನ ಸಿಗೋಗು ಅಲ್ಲಿ ಇಲ್ಲಿ ನಿಧಾನಕ್ಕೆ ಓಡಾಡುವ ಹಿರಿ ಜೀವಗಳು ಮಾತ್ರ. ಊರು ಕೇರಿ ಗಲಾಟೆ ಎಬ್ಬಿಸುತ್ತಾ ಓಡಾಡುವ ಮಕ್ಕಳು, ಅದು ಇದು ಕೆಲಸದಲ್ಲಿ ನಿರತಾರಾಗಿರುವ ಮಹಿಳೆಯರು, ರಸ್ತೆಯಲ್ಲಿ ಅಡ್ಡಾಡುವ ಪುರುಷರು ಯಾರೂ ಇಲ್ಲಿ ಕಾಣ ಸಿಗುವುದಿಲ್ಲ. ಹೆಚ್ಚಿನ ಮನೆಗಳಿಗೆ ಬೀಗ ಜಡಿಯಲಾಗಿದೆ. ಇದು ಮುಂಗಾರು #Mansoon ಬಾರದ ಹಿನ್ನೆಲೆ ಆವರಿಸಿಕೊಂಡ ಬರ #Drought ದ ಛಾಯೆಯ ಚಿತ್ರಣ

Advertisement
Advertisement

ಬರಪೀಡಿತ ಜಿಲ್ಲೆ ಅಂತಾನೇ ಹಣೆಪಟ್ಟಿ ಕಟ್ಟಿಕೊಂಡಿರೋ ಜಿಲ್ಲೆಗಳ್ಲಿ ಬಾಗಕೋಟೆ ಕೂಡ. ಈ ಜಿಲ್ಲೆಯಾದ್ಯಂತ ಬಿರು ಬಿಸಿಲಿಗೆ ಒಣಗಿ ಬಾಯಿಬಟ್ಟಿರೋ ಹೊಲ, ಕೆರೆಗಳು.. ಉದ್ಯೋಗ ಅರಿಸಿ ಗುಳೆಹೋಗಿ ಖಾಲಿ ಹೊಡೆಯುತ್ತಿರೋ ತಾಂಡಾಗಳು. ರಣ ರಣ ಬಿಸಿಲಿನಲ್ಲಿ ಬದುಕನ್ನರಿಸಿ ಹೊರ ಹೋಗಲಾಗದೆ ಆಕಾದತ್ತ ಮುಖ ಮಾಡಿ ಮಳೆಗಾಗಿ ಕಾಯುತ್ತಿರುವ ಹಿರಿ ಜೀವಗಳು..

ಕಿತ್ತೂರು ಕರ್ನಾಟಕ ಭಾಗದಲ್ಲಿ ಮುಂಗಾರು ಕೈ ಕೊಟ್ಟಿದೆ. ಇದರಿಂದ ಕೂಲಿ ಕೆಲಸ ಸಿಗದ ಕಾರಣ ಇಡೀ ಊರಿಗೆ ಊರೇ ಗುಳೆ ಹೋಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮ ಖಾಲಿ ಖಾಲಿ ಹೊಡೆಯುತ್ತಿದೆ. ಲಿಂಗಾಪುರದ ಬೋರ್ವೆಲ್ಗಳಲ್ಲಿ ಇದ್ದ ಅಲ್ಪಸ್ವಲ್ಪ ನೀರು ಬತ್ತಿ ಹೋಗುತ್ತಿವೆ. ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಹತ್ತಿರ ಯಾವುದೇ ಕೈಗಾರಿಕೆಗಳು ಸಹ ಇಲ್ಲ. ನರೇಗಾ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಸಿಕ್ಕರೂ ಸರಿಯಾದ ಸಮಯಕ್ಕೆ ಕೂಲಿ ಕೈಸೇರಲ್ಲ. ಇದರಿಂದ ಗ್ರಾಮದ ಶೇಕಡಾ 80ರಷ್ಟು ಮನೆಗಳಿಗೆ ಬೀಗಮುದ್ರೆ ಬಿದ್ದಿದೆ.

ಲಿಂಗಾಪುರ ಗ್ರಾಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಮನೆಗಳಿವೆ. ಶೇಕಡಾ 80 ರಷ್ಟು ಕುಟುಂಬಗಳು ಮನೆಗಳಿಗೆ ಬೀಗ ಹಾಕಿ ಕೂಲಿ ಕೆಲಸಕ್ಕಾಗಿ ಮಂಗಳೂರು, ಗೋವಾಕೆ ಹೋಗಿವೆ. ನೀವೇನಾದ್ರೂ ಈ ಗ್ರಾಮದಲ್ಲಿ ಹೋದ್ರೆ ಕೇವಲ ವಯಸ್ಸಾದ ವೃದ್ಧರು ಮಾತ್ರ ಇರುವ ಮ್ಯೂಸಿಯಂಗೆ ಹೋದಂತೆ ಭಾಸವಾಗುತ್ತೆ. ಇನ್ನಾದ್ರೂ ಬೇಗ ಮಳೆ ಬರಲಿ, ಕೆರೆ-ಬಾವಿಗಳು ತುಂಬಲಿ, ಜನರು ಊರಿಗೆ ಮರಳಲಿ..

  • ಅಂತರ್ಜಾಲ ಸಂಗ್ರಹ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

14 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

15 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

15 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

15 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

23 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

24 hours ago