ಇಡೀ ಊರಿಗೆ ಊರೇ ಖಾಲಿ ಖಾಲಿಯಾಗಿದೆ. ಊರಿಡೀ ಹುಡಿಕಿದ್ರೂ ಕಾನ ಸಿಗೋಗು ಅಲ್ಲಿ ಇಲ್ಲಿ ನಿಧಾನಕ್ಕೆ ಓಡಾಡುವ ಹಿರಿ ಜೀವಗಳು ಮಾತ್ರ. ಊರು ಕೇರಿ ಗಲಾಟೆ ಎಬ್ಬಿಸುತ್ತಾ ಓಡಾಡುವ ಮಕ್ಕಳು, ಅದು ಇದು ಕೆಲಸದಲ್ಲಿ ನಿರತಾರಾಗಿರುವ ಮಹಿಳೆಯರು, ರಸ್ತೆಯಲ್ಲಿ ಅಡ್ಡಾಡುವ ಪುರುಷರು ಯಾರೂ ಇಲ್ಲಿ ಕಾಣ ಸಿಗುವುದಿಲ್ಲ. ಹೆಚ್ಚಿನ ಮನೆಗಳಿಗೆ ಬೀಗ ಜಡಿಯಲಾಗಿದೆ. ಇದು ಮುಂಗಾರು #Mansoon ಬಾರದ ಹಿನ್ನೆಲೆ ಆವರಿಸಿಕೊಂಡ ಬರ #Drought ದ ಛಾಯೆಯ ಚಿತ್ರಣ
ಬರಪೀಡಿತ ಜಿಲ್ಲೆ ಅಂತಾನೇ ಹಣೆಪಟ್ಟಿ ಕಟ್ಟಿಕೊಂಡಿರೋ ಜಿಲ್ಲೆಗಳ್ಲಿ ಬಾಗಕೋಟೆ ಕೂಡ. ಈ ಜಿಲ್ಲೆಯಾದ್ಯಂತ ಬಿರು ಬಿಸಿಲಿಗೆ ಒಣಗಿ ಬಾಯಿಬಟ್ಟಿರೋ ಹೊಲ, ಕೆರೆಗಳು.. ಉದ್ಯೋಗ ಅರಿಸಿ ಗುಳೆಹೋಗಿ ಖಾಲಿ ಹೊಡೆಯುತ್ತಿರೋ ತಾಂಡಾಗಳು. ರಣ ರಣ ಬಿಸಿಲಿನಲ್ಲಿ ಬದುಕನ್ನರಿಸಿ ಹೊರ ಹೋಗಲಾಗದೆ ಆಕಾದತ್ತ ಮುಖ ಮಾಡಿ ಮಳೆಗಾಗಿ ಕಾಯುತ್ತಿರುವ ಹಿರಿ ಜೀವಗಳು..
ಕಿತ್ತೂರು ಕರ್ನಾಟಕ ಭಾಗದಲ್ಲಿ ಮುಂಗಾರು ಕೈ ಕೊಟ್ಟಿದೆ. ಇದರಿಂದ ಕೂಲಿ ಕೆಲಸ ಸಿಗದ ಕಾರಣ ಇಡೀ ಊರಿಗೆ ಊರೇ ಗುಳೆ ಹೋಗಿದೆ. ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ಗ್ರಾಮ ಖಾಲಿ ಖಾಲಿ ಹೊಡೆಯುತ್ತಿದೆ. ಲಿಂಗಾಪುರದ ಬೋರ್ವೆಲ್ಗಳಲ್ಲಿ ಇದ್ದ ಅಲ್ಪಸ್ವಲ್ಪ ನೀರು ಬತ್ತಿ ಹೋಗುತ್ತಿವೆ. ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಹತ್ತಿರ ಯಾವುದೇ ಕೈಗಾರಿಕೆಗಳು ಸಹ ಇಲ್ಲ. ನರೇಗಾ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಸಿಕ್ಕರೂ ಸರಿಯಾದ ಸಮಯಕ್ಕೆ ಕೂಲಿ ಕೈಸೇರಲ್ಲ. ಇದರಿಂದ ಗ್ರಾಮದ ಶೇಕಡಾ 80ರಷ್ಟು ಮನೆಗಳಿಗೆ ಬೀಗಮುದ್ರೆ ಬಿದ್ದಿದೆ.
ಲಿಂಗಾಪುರ ಗ್ರಾಮದಲ್ಲಿ ಸುಮಾರು 300 ಕ್ಕೂ ಹೆಚ್ಚು ಮನೆಗಳಿವೆ. ಶೇಕಡಾ 80 ರಷ್ಟು ಕುಟುಂಬಗಳು ಮನೆಗಳಿಗೆ ಬೀಗ ಹಾಕಿ ಕೂಲಿ ಕೆಲಸಕ್ಕಾಗಿ ಮಂಗಳೂರು, ಗೋವಾಕೆ ಹೋಗಿವೆ. ನೀವೇನಾದ್ರೂ ಈ ಗ್ರಾಮದಲ್ಲಿ ಹೋದ್ರೆ ಕೇವಲ ವಯಸ್ಸಾದ ವೃದ್ಧರು ಮಾತ್ರ ಇರುವ ಮ್ಯೂಸಿಯಂಗೆ ಹೋದಂತೆ ಭಾಸವಾಗುತ್ತೆ. ಇನ್ನಾದ್ರೂ ಬೇಗ ಮಳೆ ಬರಲಿ, ಕೆರೆ-ಬಾವಿಗಳು ತುಂಬಲಿ, ಜನರು ಊರಿಗೆ ಮರಳಲಿ..
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…