Advertisement
ಸುದ್ದಿಗಳು

ಭೂಮಿತಾಯಿಯ ಕಾಯಕಕ್ಕೆ ಧರ್ಮ ಕಾಯುವವರ ಹೆಗಲು | ಕನ್ನೇರಿಯಲ್ಲೊಂದು ಮಹಾಸಮಾವೇಶ |

Share

ಸಾವಯವ ಬದುಕು(Organic farming) – ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12  ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ನಾಡಿನ ಎಲ್ಲಾ ಮಠಾಧೀಶರ, ಸಂತರ ಹಾಗೂ ಧರ್ಮದರ್ಶಿಗಳ ಮಹಾಸಮಾವೇಶ ನಡೆಯಲಿದೆ.

ಆಧುನಿಕ ಕೃಷಿಯು ಪ್ರಾಕೃತಿಕ ಮೌಲ್ಯಗಳನ್ನು ಪರಂಪರೆಗಳ ಅನುಭವಗಳನ್ನು ಗೌರವಿಸದಿರುವ ಪರಿಣಾಮದ ಗಂಭೀರತೆ ಈಗಾಗಲೇ ಹಲವು ರೀತಿಯಲ್ಲಿ ತಟ್ಟುತ್ತಿದೆ. ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ, ಕೀಟ-ರೋಗದ ನಿಯಂತ್ರಣಕ್ಕೆ ಬಳಸುತ್ತಿರುವ ವಿಷಗಳು ಜೀವಜಾಲಕ್ಕೇ ಮಾರಕವಾಗುತ್ತಿವೆ, ಜನರು – ಜಾನುವಾರುಗಳು ಹೊಸ ಹೊಸ ಖಾಯಿಲೆಗಳಿಂದ ನರಳುವಂತಾಗಿದೆ, ಪುಟ್ಟ ಮಕ್ಕಳಿಗೂ ಕ್ಯಾನ್ಸರ್, ಸಕ್ಕರೆ ಖಾಯಿಲೆಗಳು… ಸಾಮಾಜಿಕ ಕಾರಣಗಳು ಯುವ ಸಮುದಾಯವನ್ನು ಕೃಷಿ ಕ್ಷೇತ್ರದಿಂದ ಬಹುದೂರ ಸರಿಸುತ್ತಿವೆ ರೈತರನ್ನು ಹುಟ್ಟಿಸಲಾಗದೆ ಗ್ರಾಮಗಳು ಬಂಜೆಯಾಗುತ್ತಿವೆ.

Advertisement

‘ರೈತನ ತಾಯಿ’ ಯಾರಾದಾರು ಎಂಬ ಪ್ರಶ್ನೆಗೆ ಉತ್ತರ ಸಿಗದೆ ಕೃಷಿ ಪ್ರಧಾನ ಭಾರತ ನಲುಗಿದೆ. ಆಧುನಿಕ ಶಿಕ್ಷಣದ ಸುನಾಮಿ ಗ್ರಾಮೀಣ ಚೇತನಗಳನ್ನು ನಗರಕ್ಕೆ ಹೊತ್ತೊಯ್ಯುತ್ತಿದೆ. ಈ ಎಲ್ಲಾ ಸಂಕಷ್ಟಗಳಿಗೆ ಪರಿಹಾರ ಹುಡುಕುವ ತವಕದಿಂದ ಆಯೋಜಿಸಿದ ಮಹಾಸಮಾವೇಶ ಇದಾಗಿದೆ.  ಕಾರ್ಯಕ್ರಮದ ಉದ್ದೇಶ  ನಾಡಿನ ಎಲ್ಲಾ ಪ್ರಮುಖರು, ಕೃಷಿಕರ ಆಗಮನದ ಮೂಲಕ – ಆಶೀರ್ವಾದ – ಪ್ರೇರಣೆ ಪಡೆದು ಗ್ರಾಮೀಣ ಬದುಕಿನ ಚಿತ್ರಣ ಸುಂದರಗೊಳಿಸಲು ಅತ್ಯಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪೆಟ್ರೋಲ್-ಡೀಸೆಲ್ ದರ ಇಳಿಕೆಯಾಗುತ್ತಾ? ಕೇಂದ್ರ ಸಚಿವರ ಸುಳಿವಿನಿಂದ ವಾಹನ ಸವಾರರಿಗೆ ಹೊಸ ನಿರೀಕ್ಷೆ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಕಳೆದ ಕೆಲವು ದಿನಗಳಿಂದ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ…

3 hours ago

ನಿರಂತರ ಮಳೆ ಹಿನ್ನೆಲೆ ಜುಲೈ 3ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆ ಹಾಗೂ ಭಾರತೀಯ ಹವಾಮಾನ ಇಲಾಖೆಯ…

3 hours ago

ಗ್ರಾಮಸಭೆಗೆ ಜನ ಯಾಕೆ ಬರುತ್ತಿಲ್ಲ? ಗ್ರಾಮಸಭೆಗಳು ಔಪಚಾರಿಕತೆಗೆ ಸೀಮಿತವೇ?

ಜೀವನೋಪಾಯದ ಒತ್ತಡದಿಂದ ಗ್ರಾಮಸಭೆಗೆ 55.5% ಗ್ರಾಮೀಣರು ಹಾಜರಾಗುತ್ತಿಲ್ಲ ಎಂದು ರಾಷ್ಟ್ರೀಯ ಅಧ್ಯಯನ ತಿಳಿಸಿದೆ.…

14 hours ago

ದೇಶಾದ್ಯಂತ ಚುರುಕುಗೊಂಡ ನೈಋತ್ಯ ಮುಂಗಾರು – ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆ ಮುಂದುವರಿಕೆ

ದೇಶದ ಬಹುತೇಕ ಭಾಗಗಳಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕ ಕರಾವಳಿ ಸೇರಿದಂತೆ ಹಲವು…

1 day ago

ದಕ್ಷಿಣ ಕನ್ನಡದಲ್ಲಿ ಭಾರೀ ಮಳೆ – ಜುಲೈ 2 ರಂದು ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜುಲೈ 2ರಂದು ಅಂಗನವಾಡಿ, ಶಾಲೆ…

1 day ago