Advertisement
ಸುದ್ದಿಗಳು

ಭೂಮಿತಾಯಿಯ ಕಾಯಕಕ್ಕೆ ಧರ್ಮ ಕಾಯುವವರ ಹೆಗಲು | ಕನ್ನೇರಿಯಲ್ಲೊಂದು ಮಹಾಸಮಾವೇಶ |

Share

ಸಾವಯವ ಬದುಕು(Organic farming) – ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12  ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ನಾಡಿನ ಎಲ್ಲಾ ಮಠಾಧೀಶರ, ಸಂತರ ಹಾಗೂ ಧರ್ಮದರ್ಶಿಗಳ ಮಹಾಸಮಾವೇಶ ನಡೆಯಲಿದೆ.

ಆಧುನಿಕ ಕೃಷಿಯು ಪ್ರಾಕೃತಿಕ ಮೌಲ್ಯಗಳನ್ನು ಪರಂಪರೆಗಳ ಅನುಭವಗಳನ್ನು ಗೌರವಿಸದಿರುವ ಪರಿಣಾಮದ ಗಂಭೀರತೆ ಈಗಾಗಲೇ ಹಲವು ರೀತಿಯಲ್ಲಿ ತಟ್ಟುತ್ತಿದೆ. ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ, ಕೀಟ-ರೋಗದ ನಿಯಂತ್ರಣಕ್ಕೆ ಬಳಸುತ್ತಿರುವ ವಿಷಗಳು ಜೀವಜಾಲಕ್ಕೇ ಮಾರಕವಾಗುತ್ತಿವೆ, ಜನರು – ಜಾನುವಾರುಗಳು ಹೊಸ ಹೊಸ ಖಾಯಿಲೆಗಳಿಂದ ನರಳುವಂತಾಗಿದೆ, ಪುಟ್ಟ ಮಕ್ಕಳಿಗೂ ಕ್ಯಾನ್ಸರ್, ಸಕ್ಕರೆ ಖಾಯಿಲೆಗಳು… ಸಾಮಾಜಿಕ ಕಾರಣಗಳು ಯುವ ಸಮುದಾಯವನ್ನು ಕೃಷಿ ಕ್ಷೇತ್ರದಿಂದ ಬಹುದೂರ ಸರಿಸುತ್ತಿವೆ ರೈತರನ್ನು ಹುಟ್ಟಿಸಲಾಗದೆ ಗ್ರಾಮಗಳು ಬಂಜೆಯಾಗುತ್ತಿವೆ.

‘ರೈತನ ತಾಯಿ’ ಯಾರಾದಾರು ಎಂಬ ಪ್ರಶ್ನೆಗೆ ಉತ್ತರ ಸಿಗದೆ ಕೃಷಿ ಪ್ರಧಾನ ಭಾರತ ನಲುಗಿದೆ. ಆಧುನಿಕ ಶಿಕ್ಷಣದ ಸುನಾಮಿ ಗ್ರಾಮೀಣ ಚೇತನಗಳನ್ನು ನಗರಕ್ಕೆ ಹೊತ್ತೊಯ್ಯುತ್ತಿದೆ. ಈ ಎಲ್ಲಾ ಸಂಕಷ್ಟಗಳಿಗೆ ಪರಿಹಾರ ಹುಡುಕುವ ತವಕದಿಂದ ಆಯೋಜಿಸಿದ ಮಹಾಸಮಾವೇಶ ಇದಾಗಿದೆ.  ಕಾರ್ಯಕ್ರಮದ ಉದ್ದೇಶ  ನಾಡಿನ ಎಲ್ಲಾ ಪ್ರಮುಖರು, ಕೃಷಿಕರ ಆಗಮನದ ಮೂಲಕ – ಆಶೀರ್ವಾದ – ಪ್ರೇರಣೆ ಪಡೆದು ಗ್ರಾಮೀಣ ಬದುಕಿನ ಚಿತ್ರಣ ಸುಂದರಗೊಳಿಸಲು ಅತ್ಯಗತ್ಯ ಇದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

10 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago