Advertisement
ಸುದ್ದಿಗಳು

ಭೂಮಿತಾಯಿಯ ಕಾಯಕಕ್ಕೆ ಧರ್ಮ ಕಾಯುವವರ ಹೆಗಲು | ಕನ್ನೇರಿಯಲ್ಲೊಂದು ಮಹಾಸಮಾವೇಶ |

Share

ಸಾವಯವ ಬದುಕು(Organic farming) – ಕೃಷಿಯ ಮೌಲ್ಯಗಳನ್ನು ಜನಮಾನಸದಲ್ಲಿ ಬೇರೂರಿಸುವ ಸಂಕಲ್ಪದೊಂದಿಗೆ ಜನವರಿ 12  ಮತ್ತು 13 ರಂದು ಮಹಾಸಮಾವೇಶವು ಕೊಲ್ಹಾಪುರ(Kolhapur) ಸಮೀಪವಿರುವ ಕನ್ನೇರಿಯ(Kanneri) ಶ್ರೀ ಸಿದ್ಧಗಿರಿ ಸಂಸ್ಥಾನದಲ್ಲಿ ನಾಡಿನ ಎಲ್ಲಾ ಮಠಾಧೀಶರ, ಸಂತರ ಹಾಗೂ ಧರ್ಮದರ್ಶಿಗಳ ಮಹಾಸಮಾವೇಶ ನಡೆಯಲಿದೆ.

ಆಧುನಿಕ ಕೃಷಿಯು ಪ್ರಾಕೃತಿಕ ಮೌಲ್ಯಗಳನ್ನು ಪರಂಪರೆಗಳ ಅನುಭವಗಳನ್ನು ಗೌರವಿಸದಿರುವ ಪರಿಣಾಮದ ಗಂಭೀರತೆ ಈಗಾಗಲೇ ಹಲವು ರೀತಿಯಲ್ಲಿ ತಟ್ಟುತ್ತಿದೆ. ಕೃಷಿ ಉತ್ಪಾದನೆ ಕ್ಷೀಣಿಸುತ್ತಿದೆ, ಕೀಟ-ರೋಗದ ನಿಯಂತ್ರಣಕ್ಕೆ ಬಳಸುತ್ತಿರುವ ವಿಷಗಳು ಜೀವಜಾಲಕ್ಕೇ ಮಾರಕವಾಗುತ್ತಿವೆ, ಜನರು – ಜಾನುವಾರುಗಳು ಹೊಸ ಹೊಸ ಖಾಯಿಲೆಗಳಿಂದ ನರಳುವಂತಾಗಿದೆ, ಪುಟ್ಟ ಮಕ್ಕಳಿಗೂ ಕ್ಯಾನ್ಸರ್, ಸಕ್ಕರೆ ಖಾಯಿಲೆಗಳು… ಸಾಮಾಜಿಕ ಕಾರಣಗಳು ಯುವ ಸಮುದಾಯವನ್ನು ಕೃಷಿ ಕ್ಷೇತ್ರದಿಂದ ಬಹುದೂರ ಸರಿಸುತ್ತಿವೆ ರೈತರನ್ನು ಹುಟ್ಟಿಸಲಾಗದೆ ಗ್ರಾಮಗಳು ಬಂಜೆಯಾಗುತ್ತಿವೆ.

‘ರೈತನ ತಾಯಿ’ ಯಾರಾದಾರು ಎಂಬ ಪ್ರಶ್ನೆಗೆ ಉತ್ತರ ಸಿಗದೆ ಕೃಷಿ ಪ್ರಧಾನ ಭಾರತ ನಲುಗಿದೆ. ಆಧುನಿಕ ಶಿಕ್ಷಣದ ಸುನಾಮಿ ಗ್ರಾಮೀಣ ಚೇತನಗಳನ್ನು ನಗರಕ್ಕೆ ಹೊತ್ತೊಯ್ಯುತ್ತಿದೆ. ಈ ಎಲ್ಲಾ ಸಂಕಷ್ಟಗಳಿಗೆ ಪರಿಹಾರ ಹುಡುಕುವ ತವಕದಿಂದ ಆಯೋಜಿಸಿದ ಮಹಾಸಮಾವೇಶ ಇದಾಗಿದೆ.  ಕಾರ್ಯಕ್ರಮದ ಉದ್ದೇಶ  ನಾಡಿನ ಎಲ್ಲಾ ಪ್ರಮುಖರು, ಕೃಷಿಕರ ಆಗಮನದ ಮೂಲಕ – ಆಶೀರ್ವಾದ – ಪ್ರೇರಣೆ ಪಡೆದು ಗ್ರಾಮೀಣ ಬದುಕಿನ ಚಿತ್ರಣ ಸುಂದರಗೊಳಿಸಲು ಅತ್ಯಗತ್ಯ ಇದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

16 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

22 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago