Advertisement
ಪ್ರಮುಖ

#RSS | ರಾಷ್ಟ್ರೀಯ ಸ್ವಯಂ ಸೇವಕ ಸಂಘಕ್ಕೆ ಮಂಜೂರಾಗಿದ್ದ ಜಮೀನಿಗೆ ಸರ್ಕಾರದಿಂದ ತಡೆ |

Share

ಅಧಿಕಾರಕ್ಕೆ ಬಂದ ಸರ್ಕಾರಗಳು ತಮಗೆ ಬೇಕಾದ ಸಂಘ ಸಂಸ್ಥೆ, ಮಠ ಮಾನ್ಯಗಳಿಗೆ ದೇಣಿಗೆ ನೀಡುವುದು, ಜಮೀನು ಮಂಜೂರು ಮಾಡುವುದು ಸರ್ವೆ ಸಾಮಾನ್ಯ. ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ತನ್ನದೇ ಅಂಹ ಸಂಸ್ಥೆ ಆರೆಸ್ಸೆಸ್ ಗೆ ಜಮೀನು ಮಂಜೂರು ಮಾಡಿದ್ದನ್ನು ಈಗಿನ ಕಾಂಗ್ರೆಸ್ ಸರ್ಕಾರ ತಡೆ ಹಿಡಿದಿದೆ. ಇದು ಬಿಜೆಪಿಗೆ ಭಾರಿ ಮುಖಭಂಗವನ್ನುಂಟು ಮಾಡಿದೆ.

ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ #Basavaraj Bommai ನೇತೃತ್ವದ ರಾಜ್ಯ ಸರ್ಕಾರವು ರಾಷ್ಟ್ರೀಯ ಸ್ವಯಂ ಸೇವಾ ಸಂಘಕ್ಕೆ ಜಮೀನು ಮಂಜೂರು ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ #Siddaramaiah ನೇತೃತ್ವದ ಸರ್ಕಾರ ಅದಕ್ಕೆ ತಡೆ ಹಿಡಿದಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಆಡಳಿತದ ಅವಧಿಯಲ್ಲಿ ಆರೆಸ್ಸೆಸ್‌ ಮೂಲದ ಜನ ಸೇವಾ ಟ್ರಸ್ಟ್ ಗೆ ಬೆಂಗಳೂರಿನ ಕುರುಬರ ಹಳ್ಳಿಯಲ್ಲಿ 35.33 ಎಕರೆ ಭೂಮಿ ಮಂಜೂರು ಮಾಡಿತ್ತು. ಈಗ ಮಂಜೂರಾಗಿದ್ದನ್ನು ಜನ ಸೇವಾ ಟ್ರಸ್ಟ್‌ಗೆ ಮಂಜೂರಾಗಿದ್ದ ಭೂಮಿಯನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.

ಜಮೀನು ತಡೆ ಹಿಡಿದಿರುವ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ವಿಧಾನಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ. ಆ ಮೂಲಕ ಗೋಮಾಳದ ಭೂಮಿಯನ್ನು ಆರೆಸ್ಸೆಸ್‌ ನೀಡಲು ನಿರ್ಧರಿಸಿದ್ದ ಬಿಜೆಪಿಗೆ ಮುಖಭಂಗ ಉಂಟಾಗಿದೆ.
(Source:net)
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಮಾಜಕ್ಕೆ ಸರಿದಾರಿಯನ್ನು ತೋರುವುದು ಗುರುವಿನ ಕಾರ್ಯ : ರಾಘವೇಶ್ವರ ಶ್ರೀ

ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…

9 hours ago

ಅಪೊಲೊ ಫಾರ್ಮಸಿಯಲ್ಲಿ ಉದ್ಯೋಗಾವಕಾಶ : ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ ಸಂದರ್ಶನ

ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್‌ 1ರಂದು ಪುತ್ತೂರಿನಲ್ಲಿ ನೇರ…

9 hours ago

ಹವಾಮಾನ ವರದಿ | 29-07-2026 | ಆ.2 ರಿಂದ ಮಳೆಯ ಸ್ಥಿತಿ ಏನಾಗಬಹುದು..?

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…

1 day ago

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

1 day ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

1 day ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

2 days ago