ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು, ಮುಂಗಾರು ಹಾಗೂ ಹಿಂಗಾರಿನಲ್ಲಿ ಸರಾಸರಿ ಶೇಕಡ 20ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಮಳೆ ಹಾನಿ ಕುರಿತು ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಮಳೆ ಸಂಬಂಧಿಸಿದ ಅವಘಡಗಳಿಂದ 133 ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷದಂತೆ ಈವರೆಗೆ 6.64 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಾನುವಾರು ಪ್ರಾಣ ಹಾನಿ ಕಡಿಮೆ ಇದೆ. ಆದರೂ 714 ಸಣ್ಣ, ದೊಡ್ಡ ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದು, ಅವುಗಳ ವಾರಸುದಾರರಿಗೆ 1.2 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು. ಮುಂಗಾರಿನಲ್ಲಿ 1 ಲಕ್ಷದ 59 ಸಾವಿರದ 718 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 94,94 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಹಿಂಗಾರಿನಲ್ಲಿ 1 ಲಕ್ಷ 45 ಸಾವಿರ 254 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 112 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. 20 ಸಾವಿರದ 893 ಮನೆಗಳು ಹಾನಿಯಾಗಿದ್ದು, 82.80 ಕೋಟಿ ರೂಪಾಯಿ ಪರಿಹಾರ ನೀಡಿದ್ದು, ಈ ವರ್ಷ ಒಟ್ಟಾರೆ 297 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಎಂದರು.
ರಸ್ತೆ, ಶಾಲೆ, ಅಂಗನವಾಡಿ ಕೊಠಡಿಗಳು ವಿದ್ಯುತ್, ಮೂಲಸೌಕರ್ಯಕ್ಕೂ ಹಾನಿಯಾಗಿದೆ. ತುರ್ತು ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 579 ಕೋಟಿ ರೂಪಾಯಿ ಹಣ ಇದೆ. ಪ್ರಕೃತಿ ವಿಕೋಪಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆನ್ನುವ ಬೇಡಿಕೆಯಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದು, ರಾಜಕಾಲುವೆ ಅಭಿವೃದ್ಧಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಸದನಕ್ಕೆ ವಿವರವಾಗಿ ಮಾಹಿತಿ ನೀಡಿದರು.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…