ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು, ಮುಂಗಾರು ಹಾಗೂ ಹಿಂಗಾರಿನಲ್ಲಿ ಸರಾಸರಿ ಶೇಕಡ 20ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಮಳೆ ಹಾನಿ ಕುರಿತು ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಮಳೆ ಸಂಬಂಧಿಸಿದ ಅವಘಡಗಳಿಂದ 133 ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷದಂತೆ ಈವರೆಗೆ 6.64 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಾನುವಾರು ಪ್ರಾಣ ಹಾನಿ ಕಡಿಮೆ ಇದೆ. ಆದರೂ 714 ಸಣ್ಣ, ದೊಡ್ಡ ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದು, ಅವುಗಳ ವಾರಸುದಾರರಿಗೆ 1.2 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು. ಮುಂಗಾರಿನಲ್ಲಿ 1 ಲಕ್ಷದ 59 ಸಾವಿರದ 718 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 94,94 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಹಿಂಗಾರಿನಲ್ಲಿ 1 ಲಕ್ಷ 45 ಸಾವಿರ 254 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 112 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. 20 ಸಾವಿರದ 893 ಮನೆಗಳು ಹಾನಿಯಾಗಿದ್ದು, 82.80 ಕೋಟಿ ರೂಪಾಯಿ ಪರಿಹಾರ ನೀಡಿದ್ದು, ಈ ವರ್ಷ ಒಟ್ಟಾರೆ 297 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಎಂದರು.
ರಸ್ತೆ, ಶಾಲೆ, ಅಂಗನವಾಡಿ ಕೊಠಡಿಗಳು ವಿದ್ಯುತ್, ಮೂಲಸೌಕರ್ಯಕ್ಕೂ ಹಾನಿಯಾಗಿದೆ. ತುರ್ತು ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 579 ಕೋಟಿ ರೂಪಾಯಿ ಹಣ ಇದೆ. ಪ್ರಕೃತಿ ವಿಕೋಪಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆನ್ನುವ ಬೇಡಿಕೆಯಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದು, ರಾಜಕಾಲುವೆ ಅಭಿವೃದ್ಧಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಸದನಕ್ಕೆ ವಿವರವಾಗಿ ಮಾಹಿತಿ ನೀಡಿದರು.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…