ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು, ಮುಂಗಾರು ಹಾಗೂ ಹಿಂಗಾರಿನಲ್ಲಿ ಸರಾಸರಿ ಶೇಕಡ 20ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿದ್ದಾರೆ.
ಮಳೆ ಹಾನಿ ಕುರಿತು ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಮಳೆ ಸಂಬಂಧಿಸಿದ ಅವಘಡಗಳಿಂದ 133 ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷದಂತೆ ಈವರೆಗೆ 6.64 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಾನುವಾರು ಪ್ರಾಣ ಹಾನಿ ಕಡಿಮೆ ಇದೆ. ಆದರೂ 714 ಸಣ್ಣ, ದೊಡ್ಡ ಜಾನುವಾರುಗಳು ಪ್ರಾಣ ಕಳೆದುಕೊಂಡಿದ್ದು, ಅವುಗಳ ವಾರಸುದಾರರಿಗೆ 1.2 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು. ಮುಂಗಾರಿನಲ್ಲಿ 1 ಲಕ್ಷದ 59 ಸಾವಿರದ 718 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 94,94 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಹಿಂಗಾರಿನಲ್ಲಿ 1 ಲಕ್ಷ 45 ಸಾವಿರ 254 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 112 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. 20 ಸಾವಿರದ 893 ಮನೆಗಳು ಹಾನಿಯಾಗಿದ್ದು, 82.80 ಕೋಟಿ ರೂಪಾಯಿ ಪರಿಹಾರ ನೀಡಿದ್ದು, ಈ ವರ್ಷ ಒಟ್ಟಾರೆ 297 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಎಂದರು.
ರಸ್ತೆ, ಶಾಲೆ, ಅಂಗನವಾಡಿ ಕೊಠಡಿಗಳು ವಿದ್ಯುತ್, ಮೂಲಸೌಕರ್ಯಕ್ಕೂ ಹಾನಿಯಾಗಿದೆ. ತುರ್ತು ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 579 ಕೋಟಿ ರೂಪಾಯಿ ಹಣ ಇದೆ. ಪ್ರಕೃತಿ ವಿಕೋಪಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆನ್ನುವ ಬೇಡಿಕೆಯಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದು, ರಾಜಕಾಲುವೆ ಅಭಿವೃದ್ಧಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಸದನಕ್ಕೆ ವಿವರವಾಗಿ ಮಾಹಿತಿ ನೀಡಿದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…