Advertisement
ಸುದ್ದಿಗಳು

ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆ | ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿಕೆ

Share

ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಪೂರ್ವ ಮುಂಗಾರು, ಮುಂಗಾರು ಹಾಗೂ ಹಿಂಗಾರಿನಲ್ಲಿ ಸರಾಸರಿ ಶೇಕಡ 20ರಷ್ಟು ಹೆಚ್ಚು ಮಳೆಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ವಿಧಾನಸಭೆಯಲ್ಲಿ ಹೇಳಿದ್ದಾರೆ. 

ಮಳೆ ಹಾನಿ ಕುರಿತು ಸ್ವಯಂ ಪ್ರೇರಿತವಾಗಿ ಹೇಳಿಕೆ ನೀಡಿದ ಅವರು, ರಾಜ್ಯದಲ್ಲಿ ಮಳೆ ಸಂಬಂಧಿಸಿದ ಅವಘಡಗಳಿಂದ 133 ಮಂದಿ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೆ ತಲಾ 5 ಲಕ್ಷದಂತೆ ಈವರೆಗೆ 6.64 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಾನುವಾರು ಪ್ರಾಣ ಹಾನಿ ಕಡಿಮೆ ಇದೆ. ಆದರೂ 714  ಸಣ್ಣ, ದೊಡ್ಡ ಜಾನುವಾರುಗಳು  ಪ್ರಾಣ ಕಳೆದುಕೊಂಡಿದ್ದು, ಅವುಗಳ ವಾರಸುದಾರರಿಗೆ 1.2 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಹೇಳಿದರು. ಮುಂಗಾರಿನಲ್ಲಿ 1 ಲಕ್ಷದ 59 ಸಾವಿರದ 718 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 94,94 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಹಿಂಗಾರಿನಲ್ಲಿ 1 ಲಕ್ಷ 45 ಸಾವಿರ 254 ಹೆಕ್ಟೇರ್ ಬೆಳೆ ಹಾನಿಯಾಗಿದ್ದು, 112 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. 20 ಸಾವಿರದ 893 ಮನೆಗಳು ಹಾನಿಯಾಗಿದ್ದು, 82.80 ಕೋಟಿ ರೂಪಾಯಿ ಪರಿಹಾರ ನೀಡಿದ್ದು, ಈ ವರ್ಷ ಒಟ್ಟಾರೆ 297 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಎಂದರು.

ರಸ್ತೆ, ಶಾಲೆ, ಅಂಗನವಾಡಿ ಕೊಠಡಿಗಳು ವಿದ್ಯುತ್, ಮೂಲಸೌಕರ್ಯಕ್ಕೂ ಹಾನಿಯಾಗಿದೆ. ತುರ್ತು ಪರಿಹಾರ ಕಾಮಗಾರಿ ಕೈಗೆತ್ತಿಕೊಳ್ಳಲು ಜಿಲ್ಲಾಧಿಕಾರಿಗಳ ಖಾತೆಯಲ್ಲಿ 579 ಕೋಟಿ ರೂಪಾಯಿ ಹಣ ಇದೆ. ಪ್ರಕೃತಿ ವಿಕೋಪಗಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕೆನ್ನುವ ಬೇಡಿಕೆಯಿದೆ. ಬೆಂಗಳೂರಿನಲ್ಲಿ ಮಳೆಯಿಂದ ಸಾಕಷ್ಟು ಪ್ರಮಾಣದಲ್ಲಿ ಹಾನಿಯಾಗಿದ್ದು, ರಾಜಕಾಲುವೆ ಅಭಿವೃದ್ಧಿ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ ಎಂದು ಸದನಕ್ಕೆ ವಿವರವಾಗಿ ಮಾಹಿತಿ ನೀಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

5 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

9 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

10 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

12 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

13 hours ago

ಮುಂಗಾರು ಬೇಗನೆ ವಿದಾಯ ಹೇಳುತ್ತಿದೆಯೇ..? ಸೆಪ್ಟೆಂಬರ್‌ನಲ್ಲಿ ಮಳೆ ಕಡಿಮೆಯಾಗುವ ಮುನ್ಸೂಚನೆ..?

ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…

1 day ago