Advertisement
MIRROR FOCUS

ಅಯೋಧ್ಯೆಯ ಹೋರಾಟದ ತುಣುಕುಗಳು ಇತಿಹಾಸವನ್ನೇ ಸೃಷ್ಟಿಸಿದೆ | ಅಯೋಧ್ಯೆಯ ಹೋರಾಟವನ್ನು ವಿವರಿಸಿದ ನ. ಸೀತಾರಾಮ |

Share

ಅಯೋಧ್ಯೆಯ ಹೋರಾಟದ ಕಥೆಗಳನ್ನು ಆಲಿಸುವಾಗ ಮನದಲ್ಲಿ ಸಂತಸ ಮೂಡುತ್ತದೆ. ಆದರೆ ರಾಷ್ಟ್ರಗಳ ನಡುವೆ ನಡೆಯುವ ಹೋರಾಟಗಳು ಬೇಸರವೆನಿಸುತ್ತದೆ. ಸನಾತನ ಧರ್ಮವನ್ನು ಗಟ್ಟಿ ಮಾಡುವಂತಹ ಯುದ್ಧದ ವಾರ್ತೆಗಳು ಆತ್ಮಾನಂದದ ಕಡೆಗೆ ಕೊಂಡೊಯ್ಯುತ್ತದೆ. ಪ್ರಭು ಶ್ರೀರಾಮನ ಜನ್ಮಸ್ಥಳದ ಚ್ಯುತಿಗೆ ಇದ್ದ ಸವಾಲುಗಳು ಇಂದು ನಮ್ಮ ಜೀವನಕ್ಕೆ ಸ್ಫೂರ್ತಿ ಹಾಗೂ ವಿಶ್ವಕ್ಕೆ ರಾಮನ ಮೌಲ್ಯಗಳನ್ನು ಸಾರಿ ಹೇಳುತ್ತವೆ. ಹೀಗೆ ಅಯೋಧ್ಯೆಯ ಹೋರಾಟದ ತುಣುಕುಗಳು ಇತಿಹಾಸವನ್ನೇ ಸೃಷ್ಟಿಸಿದೆ ಎಂದು ಕರ್ನಾಟಕ ಪ್ರಾಂತದ ಸಹಸೇವಾ ಪ್ರಮುಖ್ ನ. ಸೀತಾರಾಮ ಹೇಳಿದರು.

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ, ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರ ಐಟಿ ಕ್ಲಬ್, ವ್ಯವಹಾರ ಆಡಳಿತ ಸಂಘ, ನೇಚರ್ ಕ್ಲಬ್, ರೋವರ್ಸ್ ರೇಂಜರ್ಸ್ ಮತ್ತು ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ನಡೆದ ವಿದ್ಯಾರಾಮ ಸ್ಮರಣೆಯ ಜೊತೆಗೆ “ಅಯೋಧ್ಯೆಯ ಹೋರಾಟ” ಎಂಬ ವಿಚಾರವನ್ನು ಪ್ರಸ್ತುತ ಪಡಿಸಿದರು.

ನ.ಸೀತಾರಾಮ

ಭಾರತೀಯರಾದ ನಾವು ನೀರಲ್ಲಿಯೂ ದೈವೀ ಸ್ವರೂಪ ಕಾಣುತ್ತೇವೆಯೇ ಹೊರತು ವೈಜ್ಞಾನಿಕತೆಯನ್ನಲ್ಲ. ರಾಮ ಎಲ್ಲರಲ್ಲಿಯೂ ಇದ್ದಾನೆ. ಪ್ರತೀ ಊರಿನಲ್ಲಿ ಶ್ರೀರಾಮನ ಭಜನಾ ಮಂದಿರ, ದೇವಾಲಯಗಳು ಇದೆ. ಆದರೆ ಈ ಹಿಂದೆ ಶ್ರೀರಾಮನ ಜನ್ಮ ಭೂಮಿಯ ಬಗ್ಗೆ ಪ್ರಶ್ನಿಸಿದರೆ ಯಾರೊಬ್ಬರಿಗೂ ತಿಳಿದಿರಲಿಲ್ಲ. ರಾಮಲಲ್ಲಾನ ಪ್ರಾಣಪ್ರತಿಷ್ಠಾಪನೆಯಲ್ಲಿ ಭಾವಪೂರ್ಣವಾಗಿ ತೊಡಗಿಸಿಕೊಳ್ಳಲು ನಾವು ಪೂರ್ವಜನ್ಮದ ಪುಣ್ಯ ಮಾಡಿದ್ದೇವೆ. ಭವ್ಯ ಭಾರತದ ಸನಾತನ ಹಿಂದೂ ಧರ್ಮವನ್ನು ಸಾರಿ ಹೇಳುವಲ್ಲಿ ಯುವ ಪೀಳಿಗೆಯ ಪಾತ್ರ ಮಹತ್ವದ್ದು. ಅಯೋಧ್ಯೆಗೆ ಕರಸೇವಕರಾಗಿ ತೆರಳಿದ ಮೊಟ್ಟ ಮೊದಲ ತಂಡ ಅದು ನಮ್ಮ ಮಂಗಳೂರು ವಿಭಾಗ ಎಂಬುದು ಹೆಮ್ಮೆಯ ಸಂಗತಿ ಎಂದು ತಮ್ಮ ಕರಸೇವೆಯ ಅನುಭವಗಳನ್ನು ಹಂಚಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪರೀಕ್ಷಾಂಗ ಕುಲಸಚಿವ ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನಿರ್ದೇಶಕ ಡಾ. ಹೆಚ್ ಜಿ ಶ್ರೀಧರ್ ವಹಿಸಿದ್ದರು. ಆಡಳಿತ ಮಂಡಳಿಯ ಸಂಚಾಲಕ ಮುರಳಿ ಕೃಷ್ಣ ಕೆ ಎನ್, ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಷ್ಣು ಗಣಪತಿ ಭಟ್, ವಿಶೇಷ ಅಧಿಕಾರಿ ಹಾಗೂ ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಶ್ರೀಧರ್ ನಾಯಕ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸ್ನೇಹಾ ಸ್ವಾಗತಿಸಿ, ಪ್ರಸಾದಿನಿ ವಂದಿಸಿದರು. ತೃತೀಯ ಬಿಎ ವಿದ್ಯಾರ್ಥಿನಿ ಅನನ್ಯ ಕಾಟೂರು ಕಾರ್ಯಕ್ರಮವನ್ನು ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

18 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

20 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

21 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

21 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

21 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

1 day ago