Advertisement
Opinion

ಹಲಸು ಮೇಳಗಳ ಫಲಪ್ರದದ ಹಿಂದಿನ ಶ್ರಮದ ಕಥಾನಕ “ಫಲಪ್ರದ” ಪುಸ್ತಕ |

Share

ಪುತ್ತೂರಲ್ಲಿ(Puttur) ಹಲಸು ಮೇಳದ ಉದ್ಘಾಟನಾ ಸಮಾರಂಭದಲ್ಲಿ ಹಲಸು ಮೇಳಗಳ ಹಿನ್ನೋಟದ ಪುಸ್ತಕ ಬಿಡುಗಡೆ ಇತ್ತು. ಹಲಸು ಮೇಳಗಳ ಫಲಪ್ರದದ ಹಿಂದಿನ ಶ್ರಮದ ಕಥಾನಕಗಳ ದಾಖಲೀಕರಣದ ಬಗ್ಗೆ ಮಾಹಿತಿಯೇ “ಫಲಪ್ರದ” ಪುಸ್ತಕ. ದಾಖಲಿಸಿ ಪುಸ್ತಕ ರೂಪಕ್ಕೆ ತಂದವರು ನಾ ಕಾರಂತ ಪೆರಾಜೆ.

Advertisement
Advertisement

ಅದೇ ದಿನ ಕೊಂಡು ತಂದ ಪುಸ್ತಕವನ್ನು ಮೂರು ದಿನಗಳಲ್ಲಿ ಓದಿ ಮುಗಿಸಿದೆ. ಓದಿ ಮುಗಿಯುವ ಹೊತ್ತಿಗೆ ಪುತ್ತೂರಿನ ಹಲಸು ಮೇಳವನ್ನು ಸಂಘಟಿಸಿದವರಲ್ಲಿ ಕೇಳಿದಾಗ ಹೆಚ್ಚುಕಮ್ಮಿ 10 ಟನ್ನಿನಷ್ಟು ಹಲಸು ಮೂರು ದಿನದ ಮೇಳದಲ್ಲಿ ವ್ಯಾಪಾರವಾಗಿದೆ ಎಂದರು. ( ಐದು ಟನ್ನಿನಷ್ಟು ಹಲಸಾಗಿ ಉಳಿದದ್ದು ಖಾದ್ಯಗಳ ರೂಪದಲ್ಲಿ )

Advertisement

ಪ್ರಕೃತಿ ಕೊಟ್ಟ ಅಮೂಲ್ಯ ಫಲವಸ್ತು ಹಲಸು ಹೊಲಸೆಂದು ಉಪೇಕ್ಷೆಗೆ ಒಳಗಾಗಿ ಅಲ್ಲಲ್ಲಿಯೇ ಮರಗಳಲ್ಲಿ ಕೊಳೆತು ಉದುರಿ ಹೋಗುತ್ತಿದ್ದ ಕಾಲ ಒಂದಿತ್ತು. ಅಂತಹ ಸಂದರ್ಭದಲ್ಲಿ ಹಲಸಿಗೊಂದು ಮಾನ ತಂದು ಕೊಡುವಲ್ಲಿ ಶ್ರಮಿಸಿದವರು ಹಲಸು ಸ್ನೇಹಿಕೂಟ ಮತ್ತು ಅಡಿಕೆ ಪತ್ರಿಕೆ. ಮಾರ್ಗದರ್ಶಿ:ಹಲಸು ರಾಯಭಾರಿ ಬಿರುದಾಂಕಿತ ಶ್ರೀ ಪಡ್ರೆಯವರು.

ಭವ್ಯ ದಿವ್ಯವಾದ ಕಟ್ಟಡವೊಂದು ಎದ್ದು ನಿಲ್ಲಬೇಕಾದರೆ ಉತ್ತಮ ಅಡಿಪಾಯದೊಂದಿಗೆ ಪಂಚಾಂಗ ಬೇಕು. ಪಂಚಾಂಗ ಕಟ್ಟಬೇಕಾದರೆ ಅನೇಕ ಅಡ್ಡಿ ಆತಂಕಗಳನ್ನು ಎದುರಿಸಿ ನಿರ್ಮಾಣವಾಗಿರುತ್ತದೆ. ಪಂಚಾಂಗದ ಮೇಲೆ ಭವ್ಯ ಕಟ್ಟಡ ಬಂದಾಗ ಕಟ್ಟಡವನ್ನು ವೀಕ್ಷಿಸಿ ಭಲೇ ಶಹಭಾಷ್ ಅಂತ ಅನ್ನುವವರು ಬಹಳಷ್ಟು ಮಂದಿ ಇದ್ದಾರೆ. ಪಂಚಾಂಗ ಕಟ್ಟಿದ ಶ್ರಮದ ಬಗ್ಗೆ ಅರಿವು ಅನೇಕರಿಗೆ ಗೊತ್ತಿರುವುದಿಲ್ಲ. 

ಅದೇ ರೀತಿ ಇತ್ತೀಚಿನ ವರ್ಷಗಳಲ್ಲಿ ವಾರಂತ್ಯದಲ್ಲಿ ನಡೆಯುವ ಹಲಸು ಮೇಳಗಳ ಯಶಸ್ಸಿಗೆ ಪಂಚಾಂಗ ಕಟ್ಟಿದವರು ಹಲಸು ಸ್ನೇಹಿಕೂಟ ಉಬರು ಮತ್ತು ಅಡಿಕೆ ಪತ್ರಿಕೆ ಬಳಗ. ಯಾವುದೇ ಸಾಮಾಜಿಕ ಜಾಲತಾಣಗಳಿಲ್ಲದ ಕಾಲದಲ್ಲಿ ಯಾವುದೇ ಅತಿಯಾದ ಪ್ರಚಾರಕ್ಕೂ ಒಳಗಾಗದೆ,ಕೇವಲ ಆಸಕ್ತಿ ಒಂದರಿಂದಲೇ ಪ್ರಚಾರಕ್ಕೆ ಬಂದ ಹಲಸು ಇಂದು ಮಾನವಂತ ಫಲ. ಮುಂದಿನ ದಿನಗಳಲ್ಲಿ ಕೃಷಿಕನಿಗೊಂದು ಉಪ ಆದಾಯವನ್ನು ತಂದು ಕೊಡಬಲ್ಲುದು ಎಂಬುದಕ್ಕೆ ಮೂರು ದಿನದ ಮೇಳದಲ್ಲಿ ಸುಮಾರು 10 ಟನ್ನಿನಷ್ಟು ಹಲಸು ವ್ಯಾಪಾರವೇ ಸಾಕ್ಷಿ. ಹಲಸಿನ ಮಾನದ ಹಿಂದಿನ ಶ್ರಮದ ಕಥಾಗುಚ್ಚವೇ ಫಲಪ್ರದ ಪುಸ್ತಕ. ಎಲ್ಲರೂ ಕೊಂಡು ಓದಿ.
ಬರಹ :
ಎ ಪಿ ಸದಾಶಿವ ಮರಿಕೆ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…
Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯದಲ್ಲಿ ಏರುತ್ತಿರುವ ಡೆಂಗ್ಯು ಪ್ರಕರಣ | ಬರೋಬ್ಬರಿ 7 ಸಾವಿರ ಗಡಿದಾಟಿದ ಕೇಸ್‌ | ಸಾವಿನ ಸಂಖ್ಯೆಯಲ್ಲೂ ಹೆಚ್ಚಳ

ರಾಜ್ಯದ(Karnataka) ಜಿಲ್ಲೆಗಳಲ್ಲಿ ಮುಂಗಾರು ಮಳೆ(Rain) ಜೋರಾಗುತ್ತಿದ್ದಂತೆ ಡೆಂಗ್ಯು ಸೋಂಕಿತರ (Dengue fever) ಸಂಖ್ಯೆಯೂ…

16 hours ago

ನಿಮ್ಮ ಕನಸಿನ ಕೃಷಿ ಭೂಮಿಯ ವಿನ್ಯಾಸ ಮಾಡುವ ಇಚ್ಚೆ ಇದೆಯೇ..? | ಫಾರ್ಮ್ ವಿನ್ಯಾಸದ ಉದ್ದೇಶವೇನು?

ಕೃಷಿ ಜಮೀನು(Farm Land) ಹೊಸದಾಗಿ ಖರೀದಿಸಿರುವ ಮತ್ತು ಕೃಷಿ ಭೂಮಿ ಹೊಂದಿರುವ ಕೃಷಿಕರಿಗೆ(Agriculturist)…

17 hours ago

ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಮಳೆ, ಪ್ರವಾಹ, ಭೂಕುಸಿತ | ಗೋಕಾಕ್ ಫಾಲ್ಸ್‌ನಲ್ಲಿ ಪ್ರವಾಸಿಗರ ಹುಚ್ಚಾಟ | ರಾಜ್ಯದ ಡ್ಯಾಂಗಳ ನೀರಿನ ಲೆಕ್ಕ ಏನು?

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು(Mansoon) ಚುರುಗೊಂಡಿದ್ದು, ವರುಣ(Rain) ಅಬ್ಬರಿಸುತ್ತಿದ್ದಾನೆ. ಹಲವು ಕಡೆ ಸಾಕಷ್ಟು…

18 hours ago

ಹವಾಮಾನ ವರದಿ | 8-7-2024 | ರಾಜ್ಯದ ಬಹುತೇಕ ಕಡೆ ಮಳೆ | ಜು.9 ರಿಂದ ಎರಡು ದಿನಗಳ ಕಾಲ ಮಳೆ ಕಡಿಮೆ ನಿರೀಕ್ಷೆ |

ಈಗಿನಂತೆ ಜುಲೈ 9ರಿಂದ ಎರಡು ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…

18 hours ago