‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ: ಪ್ರಾಣಿ ಪ್ರಿಯೆಗೆ ಇಳಿವಯಸ್ಸಿನಲ್ಲಿ ಕೆಲಸ ನೀಡಿದ ತಮಿಳುನಾಡು ಸರಕಾರ

August 4, 2023
8:39 PM
ಆರ್ಥಿಕ ಸಂಕಷ್ಟದಿಂದ  ಬೊಮ್ಮನ್-ಬೆಳ್ಳಿ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.

ಸರ್ಕಾರ ಕೆಲಸ ಸಿಗಬೇಕಾದ್ರೆ ಯೋಗ ಬೇಕು. ಅಂಥ ಯೋಗ ಈಗ ಬೆಳ್ಳಿಗೆ ಒಲಿದು ಬಂದಿದೆ. ಅದು ನಿವೃತ್ತಿ ತೆಗೆದುಕೊಳ್ಳುವ ವಯಸ್ಸಿನಲ್ಲಿ. ಯಾರು ಈ ಬೆಳ್ಳಿ..? ಇತ್ತೀಚೆಗೆ ತೆರೆಗೆ ಬಂದ ‘ದಿ ಎಲಿಫೆಂಟ್ ವಿಸ್ಪರರ್ಸ್’ಸಿನಿಮಾದ ಮೂಲಕ ಜಗತ್ತಿಗೆ ಪರಿಚಯವಾಗಿದ್ದ ಬೊಮ್ಮನ್ ಮತ್ತು ಬೆಳ್ಳಿಯ ಮುಖದಲ್ಲಿ ಮಂದಹಾಸ ಮೂಡಿಸಿದೆ ತಮಿಳುನಾಡು ಸರಕಾರ. ಆರ್ಥಿಕ ಸಂಕಷ್ಟದಿಂದ  ಈ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.

ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಭಾರತೀಯರು ಹೆಮ್ಮೆಪಡುವಂತೆ ಮಾಡಿತ್ತು. ಇದರಲ್ಲಿ ಪ್ರಮುಖವಾಗಿ ನಟಿಸಿದ್ದ ಬೊಮ್ಮನ್- ಬೆಳ್ಳಿ ಅವರಿಗೆ ಈ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸನ್ಮಾನ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಕೂಡ ಭೇಟಿ ಮಾಡಿ ಅಭಿನಂದಿಸಿದ್ದರು.

ಬೊಮ್ಮನ್-ಬೆಳ್ಳಿ ಅವರು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರದಲ್ಲಿ ವಾಸವಾಗಿದ್ದಾರೆ. ಇಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಭೇಟಿ ನೀಡಿದ್ದರು. ಬೆಳ್ಳಿ ಮತ್ತು ಬೊಮ್ಮನ್ ದಂಪತಿ ಜೊತೆ ಭೇಟಿಯಾದ ಮೋದಿ ಅವರ ಫೋಟೋ ಸಖತ್ ವೈರಲ್ ಆಗಿತ್ತು. ಈ ವರ್ಷದ 95ನೇ ಸಾಲಿನ ಅಕಾಡೆಮಿ ಅವಾರ್ಡ್‌ನಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್ʼ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ದೀಪಿಕಾ ಪಡುಕೋಣೆ ಅವರು ಭಾರತವನ್ನು ಪ್ರತಿನಿಧಿಸಿದ ಆಸ್ಕರ್ ಅಂಗಳದಲ್ಲಿ ನಿರೂಪಣೆ ಮಾಡಿದ್ದರು. ಆಸ್ಕರ್ ಪ್ರಶಸ್ತಿಯ ಬಳಿಕ ಬೊಮ್ಮನ್- ಬೆಳ್ಳಿ ಜನಪ್ರಿಯತೆ ಪಡೆದರು.

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 11-01-2026| ಇಂದು ಕೆಲವೆಡೆ ಮಳೆ ನಿರೀಕ್ಷೆ | ಎಲ್ಲೆಲ್ಲಿ ಮಳೆ ಇರಬಹುದು..?
January 11, 2026
2:11 PM
by: ಸಾಯಿಶೇಖರ್ ಕರಿಕಳ
ಬರ ಪ್ರದೇಶ ಕೃಷಿಗೆ ಕಡಿಮೆ ವೆಚ್ಚದ ಪರಿಹಾರ | ಬೀಜ ಸಂಸ್ಕರಣೆಯಲ್ಲಿ ಒಂಟೆ ಮೂತ್ರ ಬಳಕೆ ಪರಿಣಾಮಕಾರಿ – ICAR ಅಧ್ಯಯನ
January 11, 2026
9:58 AM
by: ದ ರೂರಲ್ ಮಿರರ್.ಕಾಂ
ಗ್ರಾಮೀಣ ಉದ್ಯಮಿಗಳಿಂದ ಆರ್ಗ್ಯಾನಿಕ್ ಮಾದರಿ | ‘ಗ್ರೀನ್ ವಿಷನ್’ ವರ್ಮಿ ಕಾಂಪೋಸ್ಟ್ ಯಶೋಗಾಥೆ
January 11, 2026
8:30 AM
by: ದ ರೂರಲ್ ಮಿರರ್.ಕಾಂ
ಬಾಯಿಯ ಕ್ಯಾನ್ಸರ್ ಭೀತಿ ಕಡಿಮೆ ಮಾಡಲಿದೆಯೇ ‘ಇ-ಬೀಮ್’ ತಂತ್ರಜ್ಞಾನ? ಅಡಿಕೆ ಸಂಸ್ಕರಣೆಯಲ್ಲಿ ಹೊಸ ಮನ್ವಂತರ!
January 11, 2026
7:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror