Advertisement
ಪ್ರಮುಖ

‘ದಿ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೆಳ್ಳಿಗೆ ಸರಕಾರಿ ನೌಕರಿ: ಪ್ರಾಣಿ ಪ್ರಿಯೆಗೆ ಇಳಿವಯಸ್ಸಿನಲ್ಲಿ ಕೆಲಸ ನೀಡಿದ ತಮಿಳುನಾಡು ಸರಕಾರ

Share

ಸರ್ಕಾರ ಕೆಲಸ ಸಿಗಬೇಕಾದ್ರೆ ಯೋಗ ಬೇಕು. ಅಂಥ ಯೋಗ ಈಗ ಬೆಳ್ಳಿಗೆ ಒಲಿದು ಬಂದಿದೆ. ಅದು ನಿವೃತ್ತಿ ತೆಗೆದುಕೊಳ್ಳುವ ವಯಸ್ಸಿನಲ್ಲಿ. ಯಾರು ಈ ಬೆಳ್ಳಿ..? ಇತ್ತೀಚೆಗೆ ತೆರೆಗೆ ಬಂದ ‘ದಿ ಎಲಿಫೆಂಟ್ ವಿಸ್ಪರರ್ಸ್’ಸಿನಿಮಾದ ಮೂಲಕ ಜಗತ್ತಿಗೆ ಪರಿಚಯವಾಗಿದ್ದ ಬೊಮ್ಮನ್ ಮತ್ತು ಬೆಳ್ಳಿಯ ಮುಖದಲ್ಲಿ ಮಂದಹಾಸ ಮೂಡಿಸಿದೆ ತಮಿಳುನಾಡು ಸರಕಾರ. ಆರ್ಥಿಕ ಸಂಕಷ್ಟದಿಂದ  ಈ ದಂಪತಿ ಬಳಲುತ್ತಿದ್ದರು ಎನ್ನುವ ಮಾಹಿತಿ ಸಿಕ್ಕ ತಕ್ಷಣವೇ ಬೆಳ್ಳಿಗೆ ಸರಕಾರಿ ನೌಕರಿಯನ್ನು ನೀಡಿದೆ ಸರಕಾರ. ಮೊದಲ ಸರಕಾರಿ ಕಾವಡಿಯಾಗಿ ಬೆಳ್ಳಿ ಇದೀಗ ನೇಮಕಗೊಂಡಿದ್ದಾರೆ.

ದಿ ಎಲಿಫೆಂಟ್ ವಿಸ್ಪರರ್ಸ್ ಡಾಕ್ಯುಮೆಂಟರಿ ಆಸ್ಕರ್ ಅವಾರ್ಡ್ ಗೆಲ್ಲುವ ಮೂಲಕ ಭಾರತೀಯರು ಹೆಮ್ಮೆಪಡುವಂತೆ ಮಾಡಿತ್ತು. ಇದರಲ್ಲಿ ಪ್ರಮುಖವಾಗಿ ನಟಿಸಿದ್ದ ಬೊಮ್ಮನ್- ಬೆಳ್ಳಿ ಅವರಿಗೆ ಈ ಹಿಂದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಸನ್ಮಾನ ಮಾಡಿದ್ದರು. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಕೂಡ ಭೇಟಿ ಮಾಡಿ ಅಭಿನಂದಿಸಿದ್ದರು.

ಬೊಮ್ಮನ್-ಬೆಳ್ಳಿ ಅವರು ತಮಿಳುನಾಡಿನ ಮುದುಮಲೈ ಹುಲಿ ಸಂರಕ್ಷಿತ ಅರಣ್ಯದ ತೆಪ್ಪಕಾಡು ಆನೆ ಶಿಬಿರದಲ್ಲಿ ವಾಸವಾಗಿದ್ದಾರೆ. ಇಲ್ಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 9ರಂದು ಭೇಟಿ ನೀಡಿದ್ದರು. ಬೆಳ್ಳಿ ಮತ್ತು ಬೊಮ್ಮನ್ ದಂಪತಿ ಜೊತೆ ಭೇಟಿಯಾದ ಮೋದಿ ಅವರ ಫೋಟೋ ಸಖತ್ ವೈರಲ್ ಆಗಿತ್ತು. ಈ ವರ್ಷದ 95ನೇ ಸಾಲಿನ ಅಕಾಡೆಮಿ ಅವಾರ್ಡ್‌ನಲ್ಲಿ ‘ದಿ ಎಲಿಫೆಂಟ್ ವಿಸ್ಪರರ್ಸ್ʼ ಸಾಕ್ಷ್ಯಚಿತ್ರ ಆಸ್ಕರ್ ಪ್ರಶಸ್ತಿ ಗೆದ್ದಿತು. ದೀಪಿಕಾ ಪಡುಕೋಣೆ ಅವರು ಭಾರತವನ್ನು ಪ್ರತಿನಿಧಿಸಿದ ಆಸ್ಕರ್ ಅಂಗಳದಲ್ಲಿ ನಿರೂಪಣೆ ಮಾಡಿದ್ದರು. ಆಸ್ಕರ್ ಪ್ರಶಸ್ತಿಯ ಬಳಿಕ ಬೊಮ್ಮನ್- ಬೆಳ್ಳಿ ಜನಪ್ರಿಯತೆ ಪಡೆದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

2 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

2 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

13 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

24 hours ago

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

1 day ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

1 day ago