Advertisement
ಅನುಕ್ರಮ

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

Share

ಅಜ್ಜಿಯ ಕೈ ರುಚಿ ಯಾಕೆ ನನ್ನ ಕೈ ಸೇರಲಿಲ್ಲ.? ಅಜ್ಜಿಯ ಸೀರೆ ನನ್ನ ಕೈ ಸೇರಿದಂತೆ , ಅಡುಗೆಯ ಒಳಗುಟ್ಟು ನನಗರಿಯದೇ ಹೋಯಿತಲ್ಲ ಎಂಬ ಬೇಸರ ಯಾವಾಗಲೂ ನನ್ನೊಂದಿಗೆ ಇರುತ್ತದೆ ಎಂಬುದು ಅಕ್ಷರಶಃ ಸತ್ಯ….

ಒಬ್ಬೊಬ್ಬರ ಕೈರುಚಿ ಒಂದೊಂದು ರೀತಿ. ಅಮ್ಮ ಮಾಡಿದ ಅಡುಗೆಯ ರೀತಿ ಮಗಳದಿರದು. ಅಜ್ಜಿ ಮಾಡಿದಂತಹ ಕಾಯಿ ಚಟ್ನಿಯ ಪರಿಮಳ ಅಮ್ಮ ತಯಾರಿಸಿದರೆ ಬರದು. ಸಾರಿನ ಘಮ್ಮ ಎನ್ನುವ ಪರಿಯ ಗುಟ್ಟು ಕನ್ನಡಿಯೊಳಗಿನ ಗಂಟು. ಅದೇನು ರೆಸಿಪಿಯೋ ದೇವರೇ ಬಲ್ಲ. ಅಡುಗೆ ಮನೆಯೊಳಗೆ ಹೊಕ್ಕು ಎಷ್ಟು ಹುಡುಕಿದರೂ ರುಚಿಯ ಗುಟ್ಟು ನಮ್ಮ ಕೈ ಸೇರದು. ಮದುವೆ , ಪೂಜೆ ,ಉಪನಯನಗಳಿಗೆ ಹೋಗಿ ಬಂದ ಮರುದಿನ ನಾನು ತಪ್ಪದೆ ಕೇಳುವ ವಾಕ್ಯವೆಂದರೆ ನಿನ್ನೆ ಸಾರು ರುಚಿ ಇತ್ತು. ಸಾಂಬಾರು ಅಂತೂ ಸೂಪರ್. ಊಟ ಮಾಡಿದ ಕೈ ಎಷ್ಟೋ ಹೊತ್ತು ಅದೇ ಪರಿಮಳ ಸೂಸುತ್ತಿತ್ತು. ಆ ದಿನವಿಡೀ ತೇಗುವಾಗ ಸಾರಿನ ಪರಿಮಳವೇ ಬಂದರೆ ಏನೋ ಒಂದು ತರ ಅನಿಸದೇ ಇರದು. ಊಟ ಮಾಡಿದ ಮೇಲೆ ಪದೇ ಪದೇ ತೇಗು ಬಂದರೆ ಏನೋ ವಿಚಿತ್ರ ಅನ್ನಿಸದೇ ಇರದು. ಯಾಕಾದರೂ ಊಟ ಮಾಡಿದೆನೋ ಅಂತ ಅನಿಸಿ ಬಿಡುವುದು ಸುಳ್ಳಲ್ಲ.

ಮನೆಯಲ್ಲಿ ಮಾಡಿದರೆ ಯಾಕೆ ಆ ರುಚಿ , ಪರಿಮಳ ಬರುದಿಲ್ಲ,ಎಂದು ನನ್ನ ಮುಖ ನೋಡಿದರೆ ಸುಮ್ಮನೆ ನಗುವುದಷ್ಟೇ ನನ್ನ ಉತ್ತರ. ಮನೆಯಲ್ಲಿ ಮಾಡಿದ ಅಡುಗೆ ಉಂಡರೆ ಹೊಟ್ಟೆ ಉಬ್ಬರಿಸದು, ಉಂಡು ಎರಡು ಮೂರು ಗಂಟೆಗಳಲ್ಲಿ ಮತ್ತೆ ಹಸಿವಾಗುತ್ತದೆ . ಆದರೆ ಕೆಲವು ಕಾರ್ಯಕ್ರಮಗಳಲ್ಲಿ, ಹೋಟೆಲ್ಲುಗಳಲ್ಲಿ ಊಟ ಮಾಡಿದರೆ ಹಸಿವೇ ಆಗುದಿಲ್ಲ, ಜೊತೆಗೆ ತಿಂದ ಯಾವುದೋ ಪದಾರ್ಥದ್ದೇ ಪರಿಮಳಯುಕ್ತ ತೇಗು ಉಚಿತ. ಹೊಟ್ಟೆ ಸರಿಯಾಗಲು ಎರಡು ದಿನ ಬೇಕೇ ಬೇಕು. ಸರಣಿ ಕಾರ್ಯಕ್ರಮಗಳಿದ್ದರೆ ಕಷ್ಟವೋ ಕಷ್ಟ. ಇತ್ತೀಚೆಗಂತೂ ಸರಳವಾದ ಆತಿಥ್ಯ ದುರ್ಲಭವೇ ಸರಿ. ತಾನು ಮೇಲು , ತನ್ನ ಆತಿಥ್ಯವೇ ಶ್ರೇಷ್ಠ ,ಯಾರಿಗೂ ನನ್ನ ನ್ನು ಮೀರಿಸಲು ಆಗಬಾರದು ಎಂಬ ಭಾವ. ನಮ್ಮ ಮನೆಯೂಟ ಒಂದು ಹೊತ್ತಿಗಾದರೂ ಹಾಗಾದದ್ದು ಉಂಟಾ?

ಮನೆಯಲ್ಲಿ ಮಾಡಿದ ಮಸಾಲೆ ಸಾಂಬಾರಾದರೂ. ಊಟ ಮಾಡುವಾಗ ಮಾತ್ರ ಪರಿಮಳ ಬರಬಹುದಷ್ಟೇ. ಉಂಡು ಎಷ್ಟೋ ಹೊತ್ತಾದ ಮೇಲೆ ತೇಗು ಬರುವಾಗ ಆಹಾರದ ಘಮಲು ಬರುವುದು ಬಹಳ ಅಪರೂಪ. ಗೇರು ಹಣ್ಣು, ಲಕ್ಷ್ಮಣ ಫಲ ಮೊದಲಾದ ಹಣ್ಣುಗಳನ್ನು ತಿಂದರೆ ನಮ್ಮ ಬೆವರು ಅದೇ ಪರಿಮಳ ಬರುತ್ತದೆ. ಕೆಲವೊಂದು ಆಹಾರಗಳು ನಮ್ಮನ್ನು ಸಾತ್ವಿಕರನ್ನಾಗಿಯೂ ಪರಿವರ್ತಿಸುತ್ತವೆ. ಹೀಗೆ ನಮ್ಮ ಆಚಾರ , ವಿಚಾರಗಳ ಮೇಲೆ ನಾವು ತೆಗೆದು ಕೊಳ್ಳುವ ಆಹಾರದ ಗಾಢ ಪ್ರಭಾವ ಇದ್ದೇ ಇರುತ್ತದೆ. ನಾವು ಹೇಗೆ ಬಾಳುತ್ತೇವೆ ಎಂಬುದು ನಿರ್ಧಾರಿತವಾಗುತ್ತದೆ. ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ ಕೊಳ್ಳಲು ಸಾಧ್ಯವೇ ಇಲ್ಲ ವಿಷಯವೇ ಕುತೂಹಲಕರವಾದುದು ಅಲ್ಲವೇ!?

ಬರಹ :
ಅಶ್ವಿನಿಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

8 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

9 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

11 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

11 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

22 hours ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

1 day ago