Advertisement
ಅನುಕ್ರಮ

ಮನ ಗೆಲ್ಲುವ ಕೈರುಚಿ, ಸುಲಭದಲ್ಲಿ ಕೈಸೆರೆಯಾಗದೇಕೆ..?

Share

ಅಜ್ಜಿಯ ಕೈ ರುಚಿ ಯಾಕೆ ನನ್ನ ಕೈ ಸೇರಲಿಲ್ಲ.? ಅಜ್ಜಿಯ ಸೀರೆ ನನ್ನ ಕೈ ಸೇರಿದಂತೆ , ಅಡುಗೆಯ ಒಳಗುಟ್ಟು ನನಗರಿಯದೇ ಹೋಯಿತಲ್ಲ ಎಂಬ ಬೇಸರ ಯಾವಾಗಲೂ ನನ್ನೊಂದಿಗೆ ಇರುತ್ತದೆ ಎಂಬುದು ಅಕ್ಷರಶಃ ಸತ್ಯ….

ಒಬ್ಬೊಬ್ಬರ ಕೈರುಚಿ ಒಂದೊಂದು ರೀತಿ. ಅಮ್ಮ ಮಾಡಿದ ಅಡುಗೆಯ ರೀತಿ ಮಗಳದಿರದು. ಅಜ್ಜಿ ಮಾಡಿದಂತಹ ಕಾಯಿ ಚಟ್ನಿಯ ಪರಿಮಳ ಅಮ್ಮ ತಯಾರಿಸಿದರೆ ಬರದು. ಸಾರಿನ ಘಮ್ಮ ಎನ್ನುವ ಪರಿಯ ಗುಟ್ಟು ಕನ್ನಡಿಯೊಳಗಿನ ಗಂಟು. ಅದೇನು ರೆಸಿಪಿಯೋ ದೇವರೇ ಬಲ್ಲ. ಅಡುಗೆ ಮನೆಯೊಳಗೆ ಹೊಕ್ಕು ಎಷ್ಟು ಹುಡುಕಿದರೂ ರುಚಿಯ ಗುಟ್ಟು ನಮ್ಮ ಕೈ ಸೇರದು. ಮದುವೆ , ಪೂಜೆ ,ಉಪನಯನಗಳಿಗೆ ಹೋಗಿ ಬಂದ ಮರುದಿನ ನಾನು ತಪ್ಪದೆ ಕೇಳುವ ವಾಕ್ಯವೆಂದರೆ ನಿನ್ನೆ ಸಾರು ರುಚಿ ಇತ್ತು. ಸಾಂಬಾರು ಅಂತೂ ಸೂಪರ್. ಊಟ ಮಾಡಿದ ಕೈ ಎಷ್ಟೋ ಹೊತ್ತು ಅದೇ ಪರಿಮಳ ಸೂಸುತ್ತಿತ್ತು. ಆ ದಿನವಿಡೀ ತೇಗುವಾಗ ಸಾರಿನ ಪರಿಮಳವೇ ಬಂದರೆ ಏನೋ ಒಂದು ತರ ಅನಿಸದೇ ಇರದು. ಊಟ ಮಾಡಿದ ಮೇಲೆ ಪದೇ ಪದೇ ತೇಗು ಬಂದರೆ ಏನೋ ವಿಚಿತ್ರ ಅನ್ನಿಸದೇ ಇರದು. ಯಾಕಾದರೂ ಊಟ ಮಾಡಿದೆನೋ ಅಂತ ಅನಿಸಿ ಬಿಡುವುದು ಸುಳ್ಳಲ್ಲ.

ಮನೆಯಲ್ಲಿ ಮಾಡಿದರೆ ಯಾಕೆ ಆ ರುಚಿ , ಪರಿಮಳ ಬರುದಿಲ್ಲ,ಎಂದು ನನ್ನ ಮುಖ ನೋಡಿದರೆ ಸುಮ್ಮನೆ ನಗುವುದಷ್ಟೇ ನನ್ನ ಉತ್ತರ. ಮನೆಯಲ್ಲಿ ಮಾಡಿದ ಅಡುಗೆ ಉಂಡರೆ ಹೊಟ್ಟೆ ಉಬ್ಬರಿಸದು, ಉಂಡು ಎರಡು ಮೂರು ಗಂಟೆಗಳಲ್ಲಿ ಮತ್ತೆ ಹಸಿವಾಗುತ್ತದೆ . ಆದರೆ ಕೆಲವು ಕಾರ್ಯಕ್ರಮಗಳಲ್ಲಿ, ಹೋಟೆಲ್ಲುಗಳಲ್ಲಿ ಊಟ ಮಾಡಿದರೆ ಹಸಿವೇ ಆಗುದಿಲ್ಲ, ಜೊತೆಗೆ ತಿಂದ ಯಾವುದೋ ಪದಾರ್ಥದ್ದೇ ಪರಿಮಳಯುಕ್ತ ತೇಗು ಉಚಿತ. ಹೊಟ್ಟೆ ಸರಿಯಾಗಲು ಎರಡು ದಿನ ಬೇಕೇ ಬೇಕು. ಸರಣಿ ಕಾರ್ಯಕ್ರಮಗಳಿದ್ದರೆ ಕಷ್ಟವೋ ಕಷ್ಟ. ಇತ್ತೀಚೆಗಂತೂ ಸರಳವಾದ ಆತಿಥ್ಯ ದುರ್ಲಭವೇ ಸರಿ. ತಾನು ಮೇಲು , ತನ್ನ ಆತಿಥ್ಯವೇ ಶ್ರೇಷ್ಠ ,ಯಾರಿಗೂ ನನ್ನ ನ್ನು ಮೀರಿಸಲು ಆಗಬಾರದು ಎಂಬ ಭಾವ. ನಮ್ಮ ಮನೆಯೂಟ ಒಂದು ಹೊತ್ತಿಗಾದರೂ ಹಾಗಾದದ್ದು ಉಂಟಾ?

ಮನೆಯಲ್ಲಿ ಮಾಡಿದ ಮಸಾಲೆ ಸಾಂಬಾರಾದರೂ. ಊಟ ಮಾಡುವಾಗ ಮಾತ್ರ ಪರಿಮಳ ಬರಬಹುದಷ್ಟೇ. ಉಂಡು ಎಷ್ಟೋ ಹೊತ್ತಾದ ಮೇಲೆ ತೇಗು ಬರುವಾಗ ಆಹಾರದ ಘಮಲು ಬರುವುದು ಬಹಳ ಅಪರೂಪ. ಗೇರು ಹಣ್ಣು, ಲಕ್ಷ್ಮಣ ಫಲ ಮೊದಲಾದ ಹಣ್ಣುಗಳನ್ನು ತಿಂದರೆ ನಮ್ಮ ಬೆವರು ಅದೇ ಪರಿಮಳ ಬರುತ್ತದೆ. ಕೆಲವೊಂದು ಆಹಾರಗಳು ನಮ್ಮನ್ನು ಸಾತ್ವಿಕರನ್ನಾಗಿಯೂ ಪರಿವರ್ತಿಸುತ್ತವೆ. ಹೀಗೆ ನಮ್ಮ ಆಚಾರ , ವಿಚಾರಗಳ ಮೇಲೆ ನಾವು ತೆಗೆದು ಕೊಳ್ಳುವ ಆಹಾರದ ಗಾಢ ಪ್ರಭಾವ ಇದ್ದೇ ಇರುತ್ತದೆ. ನಾವು ಹೇಗೆ ಬಾಳುತ್ತೇವೆ ಎಂಬುದು ನಿರ್ಧಾರಿತವಾಗುತ್ತದೆ. ನಮ್ಮ ಯೋಚನೆಗಳು, ಯೋಜನೆಗಳು , ನಿರ್ಧಾರಗಳೆಲ್ಲವೂ ಆಹಾರ, ನಮ್ಮ ಪರಿಸರದ ಪ್ರಭಾವದಿಂದ ತಪ್ಪಿಸಿ ಕೊಳ್ಳಲು ಸಾಧ್ಯವೇ ಇಲ್ಲ ವಿಷಯವೇ ಕುತೂಹಲಕರವಾದುದು ಅಲ್ಲವೇ!?

ಬರಹ :
ಅಶ್ವಿನಿಮೂರ್ತಿ ಅಯ್ಯನಕಟ್ಟೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

ಪತ್ರಿಕೋದ್ಯಮ ಪದವೀಧರೆ, ಲೇಖಕಿ ಗೃಹಿಣಿ,

Published by
ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ

Recent Posts

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

7 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

12 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

12 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

1 day ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

1 day ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago