ಅಯೋಧ್ಯೆ ರಾಮ ಮಂದಿರ(Ayodhya Ram Mandir) ಪೂರ್ಣಗೊಂಡು ರಾಮನ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನ ರಾಮನ ಪ್ರತಿಮೆಯನ್ನು ಕೆತ್ತುವ ಕೆಲಸದ್ದೇ ಸುದ್ದಿ. ದೇಶದಾದ್ಯಂತ ಮೂವರನ್ನು ಆಯ್ಕೆ ಮಾಡಲಾಗಿತ್ತು. ಮೂವರು ರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ್ದರು. ಆದರೆ ಪ್ರಾಣಪತಿಷ್ಠಾಪನೆ ಭಾಗ್ಯ ಒದಗಿ ಬಂದಿದ್ದು ಮೈಸೂರಿನ ಅರುಣ್ ಯೋಗಿರಾಜ್(Arun Yogiraj ಅವರು ಕೆತ್ತಿದ ಅಂದದ ಮೂರ್ತಿಗೆ.
ಉತ್ತರ ಕನ್ನಡ ಜಿಲ್ಲೆಯ ಶಿಲ್ಪಿ ಗಣೇಶ್ ಭಟ್ ಮತ್ತು ರಾಜಸ್ಥಾನದ ಶಿಲ್ಪಿ ಸತ್ಯ ನಾರಾಯಣ ಪಾಂಡೆ ಕೆತ್ತಿದ ಬಾಲರಾಮನ ಮೂರ್ತಿಗಳನ್ನು ಏನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿದೆ. ಈ ಎರಡು ಮೂರ್ತಿಗಳ ಬಗ್ಗೆ ಟ್ರಸ್ಟ್ ಶೀಘ್ರ ತೀರ್ಮಾನ ತೆಗೆದುಗೊಳ್ಳಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ರಾಮಮಂದಿರದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ನಿರ್ಮಾಣವಾಗಲಿರುವ ಗುಡಿಯಲ್ಲಿ ಎರಡು ಮೂರ್ತಿಗಳನ್ನು ಇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮೂಲಕ ಮೂರು ಮೂರ್ತಿಗಳಿಗೂ ಅಯೋಧ್ಯೆ ರಾಮಮಂದಿರದಲ್ಲಿ ಪೂಜೆ, ಆರಾಧನೆ ನಡೆಯಲಿದೆ. ಭಕ್ತರಿಗೆ ದರ್ಶನ ಮಾಡುವ ಅವಕಾಶ ಸಿಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಜ.22 ರಂದು ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಜರುಗಿತು.
Source : ಅಂತರ್ಜಾಲ ಮಾಹಿತಿ
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…
ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…
ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…
ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…
ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…