ಅಯೋಧ್ಯೆ ರಾಮ ಮಂದಿರ(Ayodhya Ram Mandir) ಪೂರ್ಣಗೊಂಡು ರಾಮನ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನ ರಾಮನ ಪ್ರತಿಮೆಯನ್ನು ಕೆತ್ತುವ ಕೆಲಸದ್ದೇ ಸುದ್ದಿ. ದೇಶದಾದ್ಯಂತ ಮೂವರನ್ನು ಆಯ್ಕೆ ಮಾಡಲಾಗಿತ್ತು. ಮೂವರು ರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ್ದರು. ಆದರೆ ಪ್ರಾಣಪತಿಷ್ಠಾಪನೆ ಭಾಗ್ಯ ಒದಗಿ ಬಂದಿದ್ದು ಮೈಸೂರಿನ ಅರುಣ್ ಯೋಗಿರಾಜ್(Arun Yogiraj ಅವರು ಕೆತ್ತಿದ ಅಂದದ ಮೂರ್ತಿಗೆ.
ಉತ್ತರ ಕನ್ನಡ ಜಿಲ್ಲೆಯ ಶಿಲ್ಪಿ ಗಣೇಶ್ ಭಟ್ ಮತ್ತು ರಾಜಸ್ಥಾನದ ಶಿಲ್ಪಿ ಸತ್ಯ ನಾರಾಯಣ ಪಾಂಡೆ ಕೆತ್ತಿದ ಬಾಲರಾಮನ ಮೂರ್ತಿಗಳನ್ನು ಏನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿದೆ. ಈ ಎರಡು ಮೂರ್ತಿಗಳ ಬಗ್ಗೆ ಟ್ರಸ್ಟ್ ಶೀಘ್ರ ತೀರ್ಮಾನ ತೆಗೆದುಗೊಳ್ಳಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.
ರಾಮಮಂದಿರದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ನಿರ್ಮಾಣವಾಗಲಿರುವ ಗುಡಿಯಲ್ಲಿ ಎರಡು ಮೂರ್ತಿಗಳನ್ನು ಇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮೂಲಕ ಮೂರು ಮೂರ್ತಿಗಳಿಗೂ ಅಯೋಧ್ಯೆ ರಾಮಮಂದಿರದಲ್ಲಿ ಪೂಜೆ, ಆರಾಧನೆ ನಡೆಯಲಿದೆ. ಭಕ್ತರಿಗೆ ದರ್ಶನ ಮಾಡುವ ಅವಕಾಶ ಸಿಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಜ.22 ರಂದು ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಜರುಗಿತು.
Source : ಅಂತರ್ಜಾಲ ಮಾಹಿತಿ
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…