Advertisement
ಮಾಹಿತಿ

ಬಾಲರಾಮನ ಮೂರು ಮೂರ್ತಿಗಳಿಗೂ ಮಂದಿರದೊಳಗೆ ಪ್ರತಿಷ್ಠಾಪನೆ ಭಾಗ್ಯ…? | ಮೂರೂ ಮೂರ್ತಿಗಳಿಗೂ ಪೂಜೆ, ಆರಾಧನೆಯ ಚಿಂತನೆ |

Share

ಅಯೋಧ್ಯೆ ರಾಮ ಮಂದಿರ(Ayodhya Ram Mandir) ಪೂರ್ಣಗೊಂಡು ರಾಮನ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನ ರಾಮನ ಪ್ರತಿಮೆಯನ್ನು ಕೆತ್ತುವ ಕೆಲಸದ್ದೇ ಸುದ್ದಿ. ದೇಶದಾದ್ಯಂತ ಮೂವರನ್ನು ಆಯ್ಕೆ ಮಾಡಲಾಗಿತ್ತು. ಮೂವರು ರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ್ದರು. ಆದರೆ ಪ್ರಾಣಪತಿಷ್ಠಾಪನೆ ಭಾಗ್ಯ ಒದಗಿ ಬಂದಿದ್ದು ಮೈಸೂರಿನ ಅರುಣ್‌ ಯೋಗಿರಾಜ್‌(Arun Yogiraj ಅವರು ಕೆತ್ತಿದ ಅಂದದ ಮೂರ್ತಿಗೆ.

ಉತ್ತರ ಕನ್ನಡ ಜಿಲ್ಲೆಯ ಶಿಲ್ಪಿ ಗಣೇಶ್ ಭಟ್ ಮತ್ತು ರಾಜಸ್ಥಾನದ ಶಿಲ್ಪಿ ಸತ್ಯ ನಾರಾಯಣ ಪಾಂಡೆ ಕೆತ್ತಿದ ಬಾಲರಾಮನ ಮೂರ್ತಿಗಳನ್ನು ಏನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿದೆ. ಈ ಎರಡು ಮೂರ್ತಿಗಳ ಬಗ್ಗೆ ಟ್ರಸ್ಟ್ ಶೀಘ್ರ ತೀರ್ಮಾನ ತೆಗೆದುಗೊಳ್ಳಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ರಾಮಮಂದಿರದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ನಿರ್ಮಾಣವಾಗಲಿರುವ ಗುಡಿಯಲ್ಲಿ ಎರಡು ಮೂರ್ತಿಗಳನ್ನು ಇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮೂಲಕ ಮೂರು ಮೂರ್ತಿಗಳಿಗೂ ಅಯೋಧ್ಯೆ ರಾಮಮಂದಿರದಲ್ಲಿ ಪೂಜೆ, ಆರಾಧನೆ ನಡೆಯಲಿದೆ. ಭಕ್ತರಿಗೆ ದರ್ಶನ ಮಾಡುವ ಅವಕಾಶ ಸಿಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಜ.22 ರಂದು ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಜರುಗಿತು.

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

22 hours ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

22 hours ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

1 day ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

2 days ago

“ಕಾಕ್ರೋಚ್‌ ಜನತಾ ಪಾರ್ಟಿ”ಗೆ ಹೊಸ ಎದುರಾಳಿ..! ವೈರಲ್‌ ಆಗುತ್ತಿದೆ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌”

“ಕಾಕ್‌ರೋಚ್‌ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್‌ ಪ್ಯಾರಾಸಿಟಿಕ್‌ ಫ್ರಂಟ್‌” ಎಂಬ ಹೊಸ…

3 days ago