Advertisement
ಮಾಹಿತಿ

ಬಾಲರಾಮನ ಮೂರು ಮೂರ್ತಿಗಳಿಗೂ ಮಂದಿರದೊಳಗೆ ಪ್ರತಿಷ್ಠಾಪನೆ ಭಾಗ್ಯ…? | ಮೂರೂ ಮೂರ್ತಿಗಳಿಗೂ ಪೂಜೆ, ಆರಾಧನೆಯ ಚಿಂತನೆ |

Share

ಅಯೋಧ್ಯೆ ರಾಮ ಮಂದಿರ(Ayodhya Ram Mandir) ಪೂರ್ಣಗೊಂಡು ರಾಮನ ಮೂರ್ತಿ ಪ್ರತಿಷ್ಠಾಪನೆಗೆ ಮುನ್ನ ರಾಮನ ಪ್ರತಿಮೆಯನ್ನು ಕೆತ್ತುವ ಕೆಲಸದ್ದೇ ಸುದ್ದಿ. ದೇಶದಾದ್ಯಂತ ಮೂವರನ್ನು ಆಯ್ಕೆ ಮಾಡಲಾಗಿತ್ತು. ಮೂವರು ರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ್ದರು. ಆದರೆ ಪ್ರಾಣಪತಿಷ್ಠಾಪನೆ ಭಾಗ್ಯ ಒದಗಿ ಬಂದಿದ್ದು ಮೈಸೂರಿನ ಅರುಣ್‌ ಯೋಗಿರಾಜ್‌(Arun Yogiraj ಅವರು ಕೆತ್ತಿದ ಅಂದದ ಮೂರ್ತಿಗೆ.

ಉತ್ತರ ಕನ್ನಡ ಜಿಲ್ಲೆಯ ಶಿಲ್ಪಿ ಗಣೇಶ್ ಭಟ್ ಮತ್ತು ರಾಜಸ್ಥಾನದ ಶಿಲ್ಪಿ ಸತ್ಯ ನಾರಾಯಣ ಪಾಂಡೆ ಕೆತ್ತಿದ ಬಾಲರಾಮನ ಮೂರ್ತಿಗಳನ್ನು ಏನು ಮಾಡುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿದೆ. ಈ ಎರಡು ಮೂರ್ತಿಗಳ ಬಗ್ಗೆ ಟ್ರಸ್ಟ್ ಶೀಘ್ರ ತೀರ್ಮಾನ ತೆಗೆದುಗೊಳ್ಳಲಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ರಾಮಮಂದಿರದ ಮೊದಲ ಮತ್ತು ಎರಡನೇ ಮಹಡಿಯಲ್ಲಿ ನಿರ್ಮಾಣವಾಗಲಿರುವ ಗುಡಿಯಲ್ಲಿ ಎರಡು ಮೂರ್ತಿಗಳನ್ನು ಇರಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಮೂಲಕ ಮೂರು ಮೂರ್ತಿಗಳಿಗೂ ಅಯೋಧ್ಯೆ ರಾಮಮಂದಿರದಲ್ಲಿ ಪೂಜೆ, ಆರಾಧನೆ ನಡೆಯಲಿದೆ. ಭಕ್ತರಿಗೆ ದರ್ಶನ ಮಾಡುವ ಅವಕಾಶ ಸಿಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಜ.22 ರಂದು ರಾಮಮಂದಿರದಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ಗರ್ಭಗುಡಿಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಜರುಗಿತು.

Source : ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?

ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…

3 minutes ago

ಜಾಗತಿಕ ಮಾರುಕಟ್ಟೆಯಲ್ಲಿ ರಬ್ಬರ್‌ಗೆ ಐತಿಹಾಸಿಕ ದರ – ಕೆಜಿಗೆ ₹300 ಗಡಿ ದಾಟಿದ ಬೆಲೆ, ಭಾರತದಲ್ಲಿ RSS-4 ರಬ್ಬರ್‌ ಗೆ ಏರಿಕೆ

ಜಾಗತಿಕ ಮಾರುಕಟ್ಟೆಯಲ್ಲಿ ನೈಸರ್ಗಿಕ ರಬ್ಬರ್ ಬೆಲೆ ಮೊದಲ ಬಾರಿಗೆ ಕೆಜಿಗೆ ₹300 ಗಡಿ…

6 hours ago

ಹಣ್ಣುಗಳಲ್ಲಿ ಕೀಟನಾಶಕ ಅವಶೇಷಗಳ ಭಯವೇ? ನೈಸರ್ಗಿಕವಾಗಿ ಸ್ವಚ್ಛಗೊಳಿಸುವ ಸರಳ ವಿಧಾನಗಳು

ಬೇಸಿಗೆಯ ಹಣ್ಣುಗಳನ್ನು ತಿನ್ನುವ ಮೊದಲು ಹರಿಯುವ ನೀರು, ಬೇಕಿಂಗ್ ಸೋಡಾ ಅಥವಾ ವಿನೆಗರ್…

6 hours ago

Facebook, Instagram ಏಕಾಏಕಿ ಸ್ಥಗಿತ – ಜಾಗತಿಕವಾಗಿ ಲಕ್ಷಾಂತರ ಬಳಕೆದಾರರಿಗೆ ತೊಂದರೆ

ಮೆಟಾ ಒಡೆತನದ Facebook, Instagram ಮತ್ತು Messenger ಸೇವೆಗಳು ಜಾಗತಿಕ ಮಟ್ಟದಲ್ಲಿ ತಾಂತ್ರಿಕ…

17 hours ago

ಉತ್ತರ ಪ್ರದೇಶದಲ್ಲಿ ಅಡಿಕೆ ಮೇಲಿನ ಮಂಡಿ ತೆರಿಗೆ ರದ್ದುಪಡಿಸಿ – ಯೋಗಿ ಆದಿತ್ಯನಾಥ್‌ಗೆ ಕ್ಯಾಂಪ್ಕೊ ಮನವಿ

ಉತ್ತರ ಪ್ರದೇಶದಲ್ಲಿ ಅಡಿಕೆ ವ್ಯಾಪಾರದ ಮೇಲೆ ವಿಧಿಸಲಾಗುತ್ತಿರುವ ಮಂಡಿ ತೆರಿಗೆಯನ್ನು ರದ್ದುಗೊಳಿಸುವಂತೆ ಕ್ಯಾಂಪ್ಕೊ…

18 hours ago