Advertisement
MIRROR FOCUS

ರಾಮಲಲ್ಲಾ ಪ್ರಾಣಪ್ರತಿಷ್ಠೆಯ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಕಾದು ಕುಳಿತ ಇಡೀ ವಿಶ್ವ | ಅಮೆರಿಕ ಸೇರಿದಂತೆ ಎಲ್ಲೆಲ್ಲಿ ನೇರಪ್ರಸಾರವಾಗಲಿದೆ..?

Share

ಮರ್ಯಾದ ಪುರುಷ ರಾಮ ತನ್ನ ಜನ್ಮ ಭೂಮಿ ಅಯೋಧ್ಯೆಯಲ್ಲಿ(Ayodhya) ಜನವರಿ 22ರಂದು ವಿರಾಜಮಾನವಾಗಲಿದ್ದಾನೆ. 22ರಂದು ಐತಿಹಾಸಿಕ ರಾಮಮಂದಿರ ಉದ್ಘಾಟನೆ ನೆರವೇರಲಿದೆ. ಜೊತೆಗೆ ರಾಮಮಂದಿರದ ಗರ್ಭಗುಡಿಯಲ್ಲಿ ಶ್ರೀರಾಮಲಲ್ಲಾನ ಪ್ರಾಣಪ್ರತಿಷ್ಠೆ (Shri Ramalalla Pran-Pratishtha) ನಡೆಯಲಿದೆ. ಈ ಐತಿಹಾಸಿಕ ಕ್ಷಣವನ್ನು ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದುಕುಳಿತಿದೆ.

ಅಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸೇರಿದಂತೆ ಗಣ್ಯಾತಿಗಣ್ಯರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಳ್ಳಲು ವಿದೇಶಗಳಲ್ಲೂ ನೇರ ಪ್ರಸಾರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ವಿಶ್ವದ ದೊಡ್ಡಣ್ಣ ಎಂದೇ ಕರೆಸಿಕೊಳ್ಳುವ ಅಮೆರಿಕ (USA) ಸಹ ನ್ಯೂಯಾರ್ಕ್ ನಗರದ ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ (Times Square) ಲೈವ್‌ಸ್ಟ್ರೀಮ್ ಮಾಡಲಿದೆ. ಜೊತೆಗೆ ಅಮೆರಿಕದಲ್ಲಿರುವ ವಿವಿಧ ಭಾರತೀಯ ರಾಯಭಾರಿ ಕಚೇರಿಗಳು ನೇರಪ್ರಸಾರ ಮಾಡುವ ಮೂಲಕ ಶ್ರೀರಾಮನ ಕೀರ್ತಿಯನ್ನು ಪಸರಿಸಲು ಸಜ್ಜಾಗಿವೆ ಎಂದು ಮೂಲಗಳು ತಿಳಿಸಿವೆ.

ಥೈಲ್ಯಾಂಡ್‌ನಲ್ಲೂ ನೇರ ಪ್ರಸಾರ: ಅಯೋಧ್ಯೆಯಲ್ಲಿ  ಶ್ರೀರಾಮನ ಪ್ರತಿಷ್ಠಾಪನೆಗೆ ಸಾಕ್ಷಿಯಾಗುವ 51 ದೇಶಗಳನ್ನು ಗುರುತಿಸಲಾಗಿದೆ. ಈ ಪೈಕಿ ಥೈಲ್ಯಾಂಡ್‌ ಸಹ ಒಂದಾಗಿದ್ದು, ಇಲ್ಲಿನ ರಾಜಧಾನಿ ಬ್ಯಾಂಕಾಕ್‌ನಲ್ಲಿ ರಾಮಲಲ್ಲಾ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ನೇರ ಪ್ರಸಾರವಾಗಲಿದೆ. ಥೈಲ್ಯಾಂಡ್‌ ರಾಜಧಾನಿ ಬ್ಯಾಂಕಾಕ್ ಶ್ರೀಮಂತ ಹಿಂದೂ ಸಾಂಸ್ಕೃತಿಕ ಪರಂಪರೆಗೆ ನೆಲೆಯಾಗಿದೆ. ಭಾರತ ಮತ್ತು ಥೈಲ್ಯಾಂಡ್ ಬಲವಾದ ಸಾಂಸ್ಕೃತಿಕ ಮತ್ತು ಐತಿಹಾಸಿಕ ಸಂಬಂಧಗಳನ್ನು ಹೊಂದಿವೆ. ಥೈಲ್ಯಾಂಡ್‌ನ ಹಲವಾರು ರಾಜರು ರಾಮನ ವಂಶಸ್ಥರ ಭಾಗವಾಗಿದ್ದಾರೆ ಎಂದೇ ಹೇಳಲಾಗುತ್ತದೆ. ಇಲ್ಲಿರುವ ಪ್ರತಿಯೊಬ್ಬ ರಾಜನಿಗೂ ಅವರ ಹೆಸರಿನಲ್ಲಿ ರಾಮನ ಬಿರುದು ಇದೆ, ಇದು ಇಲ್ಲಿನ ಹಳೆಯ ಸಂಪ್ರದಾಯವಾಗಿದೆ ಎಂದು ವಿಶ್ವ ಹಿಂದೂ ಫೌಂಡೇಶನ್ ಸ್ಥಾಪಕ ಮತ್ತು ಜಾಗತಿಕ ಅಧ್ಯಕ್ಷರಾದ ಸ್ವಾಮಿ ವಿಜ್ಞಾನಾನಂದ ತಿಳಿಸಿದ್ದಾರೆ.

ಉತ್ತರ ಪ್ರದೇಶದ ಜೈಲುಗಳಲ್ಲಿ ನೇರಪ್ರಸಾರ: ಉತ್ತರ ಪ್ರದೇಶದ (Uttar Pradesh) ಎಲ್ಲಾ ಜೈಲುಗಳಲ್ಲಿಯೂ ಜನವರಿ 22 ರಂದು ರಾಮಮಂದಿರ ಉದ್ಘಾಟನೆ ಸಮಾರಂಭದ ನೇರಪ್ರಸಾರ ಮಾಡಲಾಗುವುದು ಎಂದು ಸಚಿವ ಧರ್ಮವೀರ್ ಪ್ರಜಾಪತಿ ತಿಳಿಸಿದ್ದಾರೆ. ಕೈದಿಗಳು ಸಹ ಕಾರ್ಯಕ್ರಮದ ನೇರಪ್ರಸಾರ ವೀಕ್ಷಿಸಲು ಸಾಧ್ಯವಾಗುತ್ತದೆ. ಸದ್ಯ ರಾಜ್ಯದಲ್ಲಿ 1.05 ಲಕ್ಷಕ್ಕೂ ಹೆಚ್ಚು ಕೈದಿಗಳಿದ್ದಾರೆ. ಅವರೂ ಈ ದೇಶದ ಪ್ರಜೆಗಳು. ಅವರು ಈ ಸಂದರ್ಭದಿಂದ ದೂರ ಉಳಿಯದಂತೆ ನೋಡಿಕೊಳ್ಳಲು, ರಾಜ್ಯದ ಎಲ್ಲಾ ಜೈಲುಗಳಲ್ಲಿ ಲೈವ್ ಸ್ಟ್ರೀಮಿಂಗ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.

– ಅಂತರ್ಜಾಲ ಮಾಹಿತಿ

Maryada Purusha Rama will abdicate on January 22 in his birthplace Ayodhya. The historic Ram Mandir will be inaugurated on 22nd. In addition, Shri Ramalalla Pran-Pratishtha (Shri Ramalalla Pran-Pratishtha) will be held in the sanctum sanctorum of Ram Mandir. The entire world is waiting to witness this historic moment.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಿಸಿಗಾಳಿಯ ಹೊಡೆತಕ್ಕೆ ತರಕಾರಿ ಬೆಳೆ ನಾಶ – ತರಕಾರಿ ಬೆಲೆ 50% ಏರಿಕೆ – ಮನೆ ಬಜೆಟ್ ತತ್ತರ..!

ಬಿಸಿಗಾಳಿಯಿಂದ ಬೆಳೆ ಹಾನಿಯಾಗಿದ್ದು, ಆಂಧ್ರಪ್ರದೇಶದಲ್ಲಿ ತರಕಾರಿ ಬೆಲೆಗಳು 50% ಏರಿಕೆಯಾಗಿವೆ. ಇದರ ಪರಿಣಾಮವಾಗಿ…

4 minutes ago

ಅಸ್ಸಾಂ ರೈತರು ಕಾಳುಮೆಣಸು ಬೆಳೆ ಕಡೆ ಮುಖ – ಆದಾಯ ಹೆಚ್ಚಿಸುವ ಪ್ರಯೋಗ

ಅಸ್ಸಾಂ ರಾಜ್ಯದಲ್ಲಿ ಚಹಾ ರೈತರು ಹೆಚ್ಚುವರಿ ಆದಾಯಕ್ಕಾಗಿ ಕಪ್ಪು ಮೆಣಸು ಬೆಳೆ ಬೆಳೆಸಲು…

20 minutes ago

ಸುಂಕರಹಿತ ಅಡಿಕೆ ಆಮದು ದಂಧೆಗೆ ಹೈಕೋರ್ಟ್ ಹೊಡೆತ – ₹20 ಕೋಟಿ ಸುಂಕ ವಿವಾದದಲ್ಲಿ ಮೇಲ್ಮನವಿಗಳು ವಜಾ

ಅಡಿಕೆ ಸುಂಕ ರಹಿತ ಆಮದು ದುರುಪಯೋಗ ಪ್ರಕರಣದಲ್ಲಿ ಹೈಕೋರ್ಟ್ ಮೇಲ್ಮನವಿಗಳನ್ನು ವಜಾಗೊಳಿಸಿದೆ. ₹20…

27 minutes ago

ಎತ್ತಿನಹೊಳೆ ಯೋಜನೆಗೆ ಮತ್ತೆ ಚುರುಕು – ಒಂದು ವಾರದಲ್ಲಿ ಕಾಮಗಾರಿ ಆರಂಭಕ್ಕೆ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಸೂಚನೆ

ಎತ್ತಿನಹೊಳೆ ಯೋಜನೆಯ ಕಾಮಗಾರಿಯನ್ನು ಒಂದು ವಾರದಲ್ಲಿ ಪುನರಾರಂಭಿಸಲು ಉಪಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಪ್ರಮುಖ…

7 hours ago

ಕೆಆರ್ಎಸ್ ಡ್ಯಾಂ ಎಚ್ಚರಿಕೆ- 15 ದಿನಗಳಲ್ಲಿ 8 ಅಡಿ ನೀರು ಕುಸಿತ – ಕಾವೇರಿ ಪ್ರದೇಶದಲ್ಲಿ ನೀರಿನ ಅಭಾವ ಭೀತಿ!

ಕೆಆರ್ಎಸ್ ಅಣೆಕಟ್ಟಿನ ನೀರಿನ ಮಟ್ಟ ಕೇವಲ 15 ದಿನಗಳಲ್ಲಿ 8 ಅಡಿ ಕುಸಿದಿದೆ.…

7 hours ago

ತುಮಕೂರಿನಲ್ಲಿ ನವಿಲುಗಳಿಗೆ H5N1 ಸೋಂಕು ದೃಢ: 4 ಗ್ರಾಮಗಳು ಕಂಟೋನ್ಮೆಂಟ್ ವಲಯ ಘೋಷಣೆ, ಕೋಳಿ ಫಾರಂಗಳ ಮೇಲೆ ಕಣ್ಣಿಟ್ಟ ಅಧಿಕಾರಿಗಳು

ತುಮಕೂರಿನಲ್ಲಿ ನವಿಲುಗಳಲ್ಲಿ H5N1 ಸೋಂಕು ದೃಢಪಟ್ಟಿದ್ದು, ನಾಲ್ಕು ಗ್ರಾಮಗಳನ್ನು ಕಂಟೋನ್ಮೆಂಟ್ ವಲಯಗಳಾಗಿ ಘೋಷಿಸಲಾಗಿದೆ.…

7 hours ago