ಅಂಗನವಾಡಿ ಮಕ್ಕಳಿಗಾಗಿ ಬಾವಿ ತೋಡಿದ ನೀರೆ | ಸತತ ಶ್ರಮದ ಮೂಲಕ ಗಂಗೆಯನ್ನು ಒಲಿಸಿಕೊಂಡ ಗೌರಿ |

March 7, 2024
6:52 PM

ತಮ್ಮ ಜೀವನ ನಿರ್ವಹಣೆಗಾಗಿ ಛಲತೊಟ್ಟು ಕೆಲಸ ಮಾಡಿ ಸಾಧಿಸಿರುವ ಬಹಳ ಮಂಂದಿಯನ್ನು ನಾವು ನೋಡಿದ್ದೇವೆ. ಆದರೆ ಏಕಾಂಗಿಯಾಗಿ ಬೇರೆಯವರಿಗಾಗಿ ಜೀವನ ಸವೆಸಿದವರು ಕೇವಲ ಬೆರಳೆಣಿಕೆಯವರು ಮಾತ್ರ. ಅಂಥವರಲ್ಲಿ ಉತ್ತರ ಕನ್ನಡದ(Uttara Kannada) ಶಿರಸಿಯ(Sirsi) ಗೌರಿ ಪರಮೇಶ್ವರ್ ನಾಯ್ಕ್(Gowri Parameshwar Naik) ಅವರು ಕೂಡ ಒಬ್ಬರು. ಈಕೆ ಮಾಡಿದ ಸಾಧನೆ ಅಂತಿಂಥದ್ದಲ್ಲ. ಶಿರಸಿಯ ಗಣೇಶ ನಗರದ ಅಂಗನವಾಡಿ ಮಕ್ಕಳಿಗೆ(Anganavadi Children) ಗೌರಿ ಅವರು ಬಾವಿ(Well) ತೋಡಿದ್ದಾರೆ. ಇದೀಗ ತಮ್ಮ ಪ್ರಯತ್ನದ ಫಲವಾಗಿ ಬಾವಿಯಲ್ಲಿ ಗಂಗೆ ಕಂಡು ಗೌರಿ ಖುಷಿಯಿಂದ ಭಾವುಕರಾಗಿದ್ದಾರೆ. ಮಾಮೂಲಿ ಭೂಮಿಯಾಗಿದ್ದ ಜಾಗದಲ್ಲಿ ನಿರಂತರ ಒಂದು ತಿಂಂಗಳ ಗೌರಿ ಪರಮೇಶ್ವರ್ ನಾಯ್ಕ್ ಅವರ ಶ್ರಮದ ಫಲವಾಗಿ ಕುಡಿಯುವ ನೀರಿನ (Water) ಬಾವಿ ಕಾಣುತ್ತಿದೆ.

Advertisement
Advertisement

ನಿರಂತರವಾಗಿ ಬಾವಿ ತೋಡಿದ ಗೌರಿ : ಶಿರಸಿ ಗಣೇಶನಗರದಲ್ಲಿ ನೀರಿನ ಸಮಸ್ಯೆ ಇದೆ. ಅದರಲ್ಲೂ ಈಗ ದಿನ ಕಳೆದು ದಿನಕ್ಕೆ ಬಿಡುತ್ತಿರುವ ನೀರು ಸಣ್ಣ ಮಕ್ಕಳ ಆರೋಗ್ಯಕ್ಕೆ ಆಗಿ ಬರೋದಿಲ್ಲ. ಹೀಗಾಗಿ ಈ ಅಂಗನವಾಡಿಯ ಶಿಕ್ಷಕಿ ತಮ್ಮ ಅಂಗನವಾಡಿಯಿಂದ 100 ಮೀಟರ್ ದೂರದಲ್ಲಿ ಇರುವ ಗೋವಿಂದ ನಾಯ್ಕ್ ಅವರ ಮನೆಯ ಬಾವಿಯಿಂದ ಕ್ಯಾನ್‍ಗಳಲ್ಲಿ ನೀರು ತೆಗೆದುಕೊಂಡು ಬರುತ್ತಿದ್ದರು. ಇದನ್ನು ಕಂಡ ಗೌರಮ್ಮನವರು ಬಾವಿ ತೋಡುವ ದಿಟ್ಟ ನಿರ್ಧಾರ ತೆಗೆದುಕೊಂಡರು. ಜನವರಿ 30 ರಿಂದ ನಿರಂತರವಾಗಿ ಬಾವಿ ತೋಡಿದ್ದಾರೆ. ಯಾವುದೇ ಅಡ್ಡಿ ಬಂದರೂ ಅದಕ್ಕೆ ತಲೆಕೆಡಿಸಿಕೊಂಡಿಲ್ಲ.

Advertisement
ಫೋಟೋ ಕೃಪೆ – ಶಿವಾನಂದ ಕಳವೆ

ನಿಸ್ವಾರ್ಥ ಸೇವೆ : 55 ವರ್ಷದ ಗೌರಿ ಅವರು ಛಲ ಬಿಡದೇ ಮಕ್ಕಳಿಗಾಗಿ 45 ಅಡಿ ಬಾವಿ ತೋಡಿ ನೀರು ತರಿಸಿದ್ದಾರೆ, ನೀರು ಬಂದಿದ್ದು ಕಂಡು ಭಾವುಕರಾಗಿದ್ದಾರೆ. ನಿಸ್ವಾರ್ಥ ಸೇವೆ ಮಾಡಿದ ಗೌರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಗೌರಿ ಪರಮೇಶ್ವರ್ ನಾಯ್ಕ್ ಅವರು ಈ ಹಿಂದೆ ಕೂಡ ಎರಡು ಬಾವಿಯನ್ನು ಏಕಾಂಗಿಯಾಗಿ ತೆಗೆದಿದ್ದರು. 55 ಅಡಿ ಹಾಗೂ 60 ಅಡಿ ಆಳದ ಬಾವಿಯನ್ನು ಇವರು ತಮ್ಮ ತೋಟದ ಬಳಕೆಗೆ ಹಾಗೂ ಸಾರ್ವಜನಿಕರ ಬಳಕೆಗಾಗಿ ತೆಗೆದಿದ್ದರು.

Source : ಅಂತರ್ಜಾಲ ಹಾಗೂ ಶಿವಾನಂದ ಕಳವೆ

Advertisement
Advertisement
Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror