Advertisement
MIRROR FOCUS

ಅಂಗನವಾಡಿ ಮಕ್ಕಳಿಗಾಗಿ ಬಾವಿ ತೋಡಿದ ನೀರೆ | ಸತತ ಶ್ರಮದ ಮೂಲಕ ಗಂಗೆಯನ್ನು ಒಲಿಸಿಕೊಂಡ ಗೌರಿ |

Share

ತಮ್ಮ ಜೀವನ ನಿರ್ವಹಣೆಗಾಗಿ ಛಲತೊಟ್ಟು ಕೆಲಸ ಮಾಡಿ ಸಾಧಿಸಿರುವ ಬಹಳ ಮಂಂದಿಯನ್ನು ನಾವು ನೋಡಿದ್ದೇವೆ. ಆದರೆ ಏಕಾಂಗಿಯಾಗಿ ಬೇರೆಯವರಿಗಾಗಿ ಜೀವನ ಸವೆಸಿದವರು ಕೇವಲ ಬೆರಳೆಣಿಕೆಯವರು ಮಾತ್ರ. ಅಂಥವರಲ್ಲಿ ಉತ್ತರ ಕನ್ನಡದ(Uttara Kannada) ಶಿರಸಿಯ(Sirsi) ಗೌರಿ ಪರಮೇಶ್ವರ್ ನಾಯ್ಕ್(Gowri Parameshwar Naik) ಅವರು ಕೂಡ ಒಬ್ಬರು. ಈಕೆ ಮಾಡಿದ ಸಾಧನೆ ಅಂತಿಂಥದ್ದಲ್ಲ. ಶಿರಸಿಯ ಗಣೇಶ ನಗರದ ಅಂಗನವಾಡಿ ಮಕ್ಕಳಿಗೆ(Anganavadi Children) ಗೌರಿ ಅವರು ಬಾವಿ(Well) ತೋಡಿದ್ದಾರೆ. ಇದೀಗ ತಮ್ಮ ಪ್ರಯತ್ನದ ಫಲವಾಗಿ ಬಾವಿಯಲ್ಲಿ ಗಂಗೆ ಕಂಡು ಗೌರಿ ಖುಷಿಯಿಂದ ಭಾವುಕರಾಗಿದ್ದಾರೆ. ಮಾಮೂಲಿ ಭೂಮಿಯಾಗಿದ್ದ ಜಾಗದಲ್ಲಿ ನಿರಂತರ ಒಂದು ತಿಂಂಗಳ ಗೌರಿ ಪರಮೇಶ್ವರ್ ನಾಯ್ಕ್ ಅವರ ಶ್ರಮದ ಫಲವಾಗಿ ಕುಡಿಯುವ ನೀರಿನ (Water) ಬಾವಿ ಕಾಣುತ್ತಿದೆ.

ನಿರಂತರವಾಗಿ ಬಾವಿ ತೋಡಿದ ಗೌರಿ : ಶಿರಸಿ ಗಣೇಶನಗರದಲ್ಲಿ ನೀರಿನ ಸಮಸ್ಯೆ ಇದೆ. ಅದರಲ್ಲೂ ಈಗ ದಿನ ಕಳೆದು ದಿನಕ್ಕೆ ಬಿಡುತ್ತಿರುವ ನೀರು ಸಣ್ಣ ಮಕ್ಕಳ ಆರೋಗ್ಯಕ್ಕೆ ಆಗಿ ಬರೋದಿಲ್ಲ. ಹೀಗಾಗಿ ಈ ಅಂಗನವಾಡಿಯ ಶಿಕ್ಷಕಿ ತಮ್ಮ ಅಂಗನವಾಡಿಯಿಂದ 100 ಮೀಟರ್ ದೂರದಲ್ಲಿ ಇರುವ ಗೋವಿಂದ ನಾಯ್ಕ್ ಅವರ ಮನೆಯ ಬಾವಿಯಿಂದ ಕ್ಯಾನ್‍ಗಳಲ್ಲಿ ನೀರು ತೆಗೆದುಕೊಂಡು ಬರುತ್ತಿದ್ದರು. ಇದನ್ನು ಕಂಡ ಗೌರಮ್ಮನವರು ಬಾವಿ ತೋಡುವ ದಿಟ್ಟ ನಿರ್ಧಾರ ತೆಗೆದುಕೊಂಡರು. ಜನವರಿ 30 ರಿಂದ ನಿರಂತರವಾಗಿ ಬಾವಿ ತೋಡಿದ್ದಾರೆ. ಯಾವುದೇ ಅಡ್ಡಿ ಬಂದರೂ ಅದಕ್ಕೆ ತಲೆಕೆಡಿಸಿಕೊಂಡಿಲ್ಲ.

ಫೋಟೋ ಕೃಪೆ – ಶಿವಾನಂದ ಕಳವೆ

ನಿಸ್ವಾರ್ಥ ಸೇವೆ : 55 ವರ್ಷದ ಗೌರಿ ಅವರು ಛಲ ಬಿಡದೇ ಮಕ್ಕಳಿಗಾಗಿ 45 ಅಡಿ ಬಾವಿ ತೋಡಿ ನೀರು ತರಿಸಿದ್ದಾರೆ, ನೀರು ಬಂದಿದ್ದು ಕಂಡು ಭಾವುಕರಾಗಿದ್ದಾರೆ. ನಿಸ್ವಾರ್ಥ ಸೇವೆ ಮಾಡಿದ ಗೌರಿಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಗೌರಿ ಪರಮೇಶ್ವರ್ ನಾಯ್ಕ್ ಅವರು ಈ ಹಿಂದೆ ಕೂಡ ಎರಡು ಬಾವಿಯನ್ನು ಏಕಾಂಗಿಯಾಗಿ ತೆಗೆದಿದ್ದರು. 55 ಅಡಿ ಹಾಗೂ 60 ಅಡಿ ಆಳದ ಬಾವಿಯನ್ನು ಇವರು ತಮ್ಮ ತೋಟದ ಬಳಕೆಗೆ ಹಾಗೂ ಸಾರ್ವಜನಿಕರ ಬಳಕೆಗಾಗಿ ತೆಗೆದಿದ್ದರು.

Source : ಅಂತರ್ಜಾಲ ಹಾಗೂ ಶಿವಾನಂದ ಕಳವೆ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅರಣ್ಯ ಭೂಮಿಯನ್ನು ಕೃಷಿ ಭೂಮಿಯನ್ನಾಗಿ ಪರಿವರ್ತನೆ : ಸಚಿವ ಕೃಷ್ಣ ಬೈರೇಗೌಡ

ಕೃಷಿ ಭೂಮಿಯ ಲಭ್ಯತೆ ಕಡಿಮೆಯಾಗಿ ಸಂಕಷ್ಟದಲ್ಲಿರುವ ರೈತರಿಗಾಗಿ ಸರ್ಕಾರವು ಅರಣ್ಯ ಭೂಮಿಯನ್ನು ಕೃಷಿ…

10 hours ago

ದೇಹವು ಆರೋಗ್ಯವಾಗಿದೆ ಎನ್ನಲು ಈ ಸಂಕೇತವೇ ಸಾಕು..

ಯಾವುದೇ ಕಾಯಿಲೆಗಳಿಲ್ಲದೆ ಆರೋಗ್ಯವಂತರಾಗಿರಲು ಎಲ್ಲರೂ ಇಷ್ಟಪಡುತ್ತಾರೆ. ಒಂದು ವೇಳೆ ಆರೋಗ್ಯ ಕೆಟ್ಟರೆ ಜೀವನವೇ…

10 hours ago

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭ | 2026 ಮಾರ್ಚ್ ವರೆಗೆ ಅವಕಾಶ

ಹೊಸ ರೇಷನ್ ಕಾರ್ಡ್ ಅನುಮೋದನೆ ಪ್ರಾರಂಭವಾಗಿದ್ದು 2026 ಮಾರ್ಚ್ ವರೆಗೆ ಅವಕಾಶ ಕರ್ನಾಟಕ…

10 hours ago

ಸ್ವಾವಲಂಬಿ ಸಾರಥಿ ಯೋಜನೆ | ಆಟೋ ಗೂಡ್ಸ್ ವಾಹನ ಖರೀದಿಗೆ ರೂ.4 ಲಕ್ಷ ಸಹಾಯಧನ

ಟ್ಯಾಕ್ಸಿ, ಆಟೋ ಟ್ಯಾಕ್ಟರ್, ಗೂಡ್ಸ್ ವಾಹನದ ಡ್ರೈವರ್ ಆಗಿದ್ದರೂ ಸ್ವಂತ ವಾಹನವಿಲ್ಲ ಎಂಬ…

10 hours ago

ಕ್ಯಾನ್ಸರ್ ಗುಣಪಡಿಸಲು ಗೋವಿನ ಉತ್ಪನ್ನಗಳು | ಮಧ್ಯಪ್ರದೇಶ ಸರ್ಕಾರ ಸಂಶೋಧನೆಗೆ 3.5 ಕೋಟಿ ಖರ್ಚು ಮಾಡಿದ ಹಣ ಎಲ್ಲಿ?

ಮಧ್ಯಪ್ರದೇಶ ಸರ್ಕಾರದಿಂದ ಅನುದಾನಿತ ಸಂಶೋಧನಾ ಉಪಕ್ರಮವು, ಸಾಂಪ್ರದಾಯಿಕ ಹಸು ಆಧಾರಿತ ಸಿದ್ಧತೆಗಳನ್ನು ಬಳಸಿಕೊಂಡು…

10 hours ago