ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದರ ಆರ್ಭಟಕ್ಕೆ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹೊಡೆತಕ್ಕೆ ಕೆಲವು ಗ್ರಾಮಗಳು ನೆರೆಯ ಹೊಡೆತಕ್ಕೆ ನಲುಗಿವೆ. ಇನ್ನು ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿರುವ ಅತ್ತಿಗುಂಡಿ ಕುಗ್ರಾಮ ಕಳೆದ 45 ದಿನಗಳಿಂದ ಕರೆಂಟ್ ಇಲ್ಲದೆ ಕತ್ತಲಲ್ಲಿ ಬದುಕುವಂತಾಗಿದೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಇರುವ ಈ ಕುಗ್ರಾಮದ ಸುತ್ತಮುತ್ತ ಕಳೆದ ಒಂದೂವರೆ ತಿಂಗಳಿನಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.
ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಎಂಬ ಖ್ಯಾತಿಗೆ ಪಾತ್ರವಾಗಿರುವ ಮುಳ್ಳಯ್ಯನಗಿರಿಯ ಮಳೆಗೆ ಮಲೆನಾಡು ಅಕ್ಷರಶಃ ಕಂಗಾಲಾಗಿದೆ. ಅತ್ತಿಗುಂಡಿ ಮಾರ್ಗದಲ್ಲಿ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಭಾರೀ ಮಳೆ ಗಾಳಿಯಿಂದ ಮುರಿದುಬಿದ್ದ ವಿದ್ಯುತ್ ತಂತಿ ಹಾಗೂ ಕಂಬಗಳನ್ನ ದುರಸ್ತಿ ಮಾಡುವುದು ಅಸಾಧ್ಯವಾಗಿದೆ. ಜೊತೆಗೆ ಮೇಲಿಂದ ಮೇಲೆ ವಿದ್ಯುತ್ ತಂತಿಗಳು ಹಾಗೂ ಕಂಬಗಳು ಮುರಿದು ಬಿದ್ದ ಪರಿಣಾಮ ಮೆಸ್ಕಾಂ ಸಿಬ್ಬಂದಿಗೆ ಲೈನ್ ದುರಸ್ತಿ ಮಾಡುವುದು ಕೂಡ ಅಸಾಧ್ಯವಾಗಿದೆ. ಹಾಗಾಗಿ, ಕಳೆದ ಒಂದೂವರೆ ತಿಂಗಳಿಂದಲೂ ಕೂಡ ಈ ಗ್ರಾಮ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಮೊಬೈಲ್ ಚಾರ್ಜ್ ಕೂಡ ಮಾಡಿಕೊಳ್ಳಲಾಗಿದೆ ಗ್ರಾಮಸ್ಥರು ಮೊಬೈಲ್ಗಳನ್ನ ಮೂಲೆಗೆ ಎಸೆದಿದ್ದಾರೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…