ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದರ ಆರ್ಭಟಕ್ಕೆ ಮಲೆನಾಡು ಹಾಗೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹೊಡೆತಕ್ಕೆ ಕೆಲವು ಗ್ರಾಮಗಳು ನೆರೆಯ ಹೊಡೆತಕ್ಕೆ ನಲುಗಿವೆ. ಇನ್ನು ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿರುವ ಅತ್ತಿಗುಂಡಿ ಕುಗ್ರಾಮ ಕಳೆದ 45 ದಿನಗಳಿಂದ ಕರೆಂಟ್ ಇಲ್ಲದೆ ಕತ್ತಲಲ್ಲಿ ಬದುಕುವಂತಾಗಿದೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಇರುವ ಈ ಕುಗ್ರಾಮದ ಸುತ್ತಮುತ್ತ ಕಳೆದ ಒಂದೂವರೆ ತಿಂಗಳಿನಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.
ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಎಂಬ ಖ್ಯಾತಿಗೆ ಪಾತ್ರವಾಗಿರುವ ಮುಳ್ಳಯ್ಯನಗಿರಿಯ ಮಳೆಗೆ ಮಲೆನಾಡು ಅಕ್ಷರಶಃ ಕಂಗಾಲಾಗಿದೆ. ಅತ್ತಿಗುಂಡಿ ಮಾರ್ಗದಲ್ಲಿ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಭಾರೀ ಮಳೆ ಗಾಳಿಯಿಂದ ಮುರಿದುಬಿದ್ದ ವಿದ್ಯುತ್ ತಂತಿ ಹಾಗೂ ಕಂಬಗಳನ್ನ ದುರಸ್ತಿ ಮಾಡುವುದು ಅಸಾಧ್ಯವಾಗಿದೆ. ಜೊತೆಗೆ ಮೇಲಿಂದ ಮೇಲೆ ವಿದ್ಯುತ್ ತಂತಿಗಳು ಹಾಗೂ ಕಂಬಗಳು ಮುರಿದು ಬಿದ್ದ ಪರಿಣಾಮ ಮೆಸ್ಕಾಂ ಸಿಬ್ಬಂದಿಗೆ ಲೈನ್ ದುರಸ್ತಿ ಮಾಡುವುದು ಕೂಡ ಅಸಾಧ್ಯವಾಗಿದೆ. ಹಾಗಾಗಿ, ಕಳೆದ ಒಂದೂವರೆ ತಿಂಗಳಿಂದಲೂ ಕೂಡ ಈ ಗ್ರಾಮ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಮೊಬೈಲ್ ಚಾರ್ಜ್ ಕೂಡ ಮಾಡಿಕೊಳ್ಳಲಾಗಿದೆ ಗ್ರಾಮಸ್ಥರು ಮೊಬೈಲ್ಗಳನ್ನ ಮೂಲೆಗೆ ಎಸೆದಿದ್ದಾರೆ ಎಂದು ಪಬ್ಲಿಕ್ ಟಿವಿ ವರದಿ ಮಾಡಿದೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…