Advertisement
MIRROR FOCUS

ಮುಳ್ಳಯ್ಯನ ಗಿರಿ ತಪ್ಪಲಿನ ಗ್ರಾಮವೊಂದರಲ್ಲಿ 45 ದಿನದಿಂದ ಕರೆಂಟ್ ಇಲ್ಲ | ಮೂಲೆ ಸೇರಿದ ಮೊಬೈಲ್‌ಗಳು..!

Share

ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದರ ಆರ್ಭಟಕ್ಕೆ ಮಲೆನಾಡು  ಹಾಗೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹೊಡೆತಕ್ಕೆ ಕೆಲವು ಗ್ರಾಮಗಳು ನೆರೆಯ ಹೊಡೆತಕ್ಕೆ ನಲುಗಿವೆ. ಇನ್ನು ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿರುವ ಅತ್ತಿಗುಂಡಿ ಕುಗ್ರಾಮ ಕಳೆದ 45 ದಿನಗಳಿಂದ ಕರೆಂಟ್ ಇಲ್ಲದೆ ಕತ್ತಲಲ್ಲಿ ಬದುಕುವಂತಾಗಿದೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಇರುವ ಈ ಕುಗ್ರಾಮದ ಸುತ್ತಮುತ್ತ ಕಳೆದ ಒಂದೂವರೆ ತಿಂಗಳಿನಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.

ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಎಂಬ ಖ್ಯಾತಿಗೆ ಪಾತ್ರವಾಗಿರುವ ಮುಳ್ಳಯ್ಯನಗಿರಿಯ ಮಳೆಗೆ ಮಲೆನಾಡು ಅಕ್ಷರಶಃ ಕಂಗಾಲಾಗಿದೆ. ಅತ್ತಿಗುಂಡಿ ಮಾರ್ಗದಲ್ಲಿ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಭಾರೀ ಮಳೆ ಗಾಳಿಯಿಂದ ಮುರಿದುಬಿದ್ದ ವಿದ್ಯುತ್ ತಂತಿ ಹಾಗೂ ಕಂಬಗಳನ್ನ ದುರಸ್ತಿ ಮಾಡುವುದು ಅಸಾಧ್ಯವಾಗಿದೆ. ಜೊತೆಗೆ ಮೇಲಿಂದ ಮೇಲೆ ವಿದ್ಯುತ್ ತಂತಿಗಳು ಹಾಗೂ ಕಂಬಗಳು ಮುರಿದು ಬಿದ್ದ ಪರಿಣಾಮ ಮೆಸ್ಕಾಂ ಸಿಬ್ಬಂದಿಗೆ ಲೈನ್ ದುರಸ್ತಿ ಮಾಡುವುದು ಕೂಡ ಅಸಾಧ್ಯವಾಗಿದೆ. ಹಾಗಾಗಿ, ಕಳೆದ ಒಂದೂವರೆ ತಿಂಗಳಿಂದಲೂ ಕೂಡ ಈ ಗ್ರಾಮ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಮೊಬೈಲ್ ಚಾರ್ಜ್ ಕೂಡ ಮಾಡಿಕೊಳ್ಳಲಾಗಿದೆ ಗ್ರಾಮಸ್ಥರು ಮೊಬೈಲ್‌ಗಳನ್ನ ಮೂಲೆಗೆ ಎಸೆದಿದ್ದಾರೆ ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.

ಗ್ರಾಮದ ಯುವಕರು ಹಾಗೂ ಪುರುಷರು ಬೈಕಿನಲ್ಲಿ ನಗರಕ್ಕೆ ಬಂದಂತಹ ವೇಳೆಯಲ್ಲಿ ಮೊಬೈಲ್ ಚಾರ್ಜ್ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ. ಈ ಮಧ್ಯೆ ನಗರದಿಂದ ಅತ್ತಿಗುಂಡಿ ಹಾಗೂ ದತ್ತಪೀಠಕ್ಕೆ ನಿತ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ಕೂಡ ಸಂಚಾರ ಮಾಡುತ್ತಿದ್ದವು. ಆದರೆ, ಭಾರಿ ಗಾಳಿ ಮಳೆಯಿಂದ ಗುಡ್ಡಗಳು ಜರುಗಿತು. ರಸ್ತೆ ಕುಸಿದ ಪರಿಣಾಮ ಕಳೆದ 45 ದಿನಗಳಿಂದ ಈ ಭಾಗಕ್ಕೆ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಮುಳ್ಳಯ್ಯನಗಿರಿ ತಪ್ಪಲಿನ ಹತ್ತಕ್ಕೂ ಹೆಚ್ಚಿನ ಹಳ್ಳಿಯ ಜನರ ಬದುಕು ಇದೇ ರೀತಿ ಇದೆ. ಹಾಗಾಗಿ ಇಲ್ಲಿನ ಜನ ಒಂದೆಡೆ ಕರೆಂಟ್ ಇಲ್ಲ ಮತ್ತೊಂದೆಡೆ ಬಸ್ ಇಲ್ಲ, ಕೂಲಿಯೂ ಇಲ್ಲ. ಮನೆಯಿಂದ ಹೊರ ಬಂದರೆ ಮಳೆ. ಇಲ್ಲವಾದರೆ ಅಕ್ಕ ಪಕ್ಕದವರು ಕಾಣದಂತಹ ಮಂಜು. ಹಾಗಾಗಿ, ಇಲ್ಲಿನ ಜನ ಕಳೆದ ಒಂದೂವರೆ ತಿಂಗಳಿನಿಂದಲೂ ಕೂಡ ಒಂದು ರೀತಿಯ ನಾಗರಿಕ ಪ್ರಪಂಚದ ಸಂಪರ್ಕವೇ ಇಲ್ಲದಂತೆ ಕಾಲ ಕಳೆಯುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

1 hour ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

10 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

10 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

11 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago