Advertisement
MIRROR FOCUS

ಮುಳ್ಳಯ್ಯನ ಗಿರಿ ತಪ್ಪಲಿನ ಗ್ರಾಮವೊಂದರಲ್ಲಿ 45 ದಿನದಿಂದ ಕರೆಂಟ್ ಇಲ್ಲ | ಮೂಲೆ ಸೇರಿದ ಮೊಬೈಲ್‌ಗಳು..!

Share

ಮುಂಗಾರು ಮಳೆ ಅಬ್ಬರಿಸಿ ಬೊಬ್ಬಿರಿಯುತ್ತಿದೆ. ಇದರ ಆರ್ಭಟಕ್ಕೆ ಮಲೆನಾಡು  ಹಾಗೂ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಮಳೆಯ ಹೊಡೆತಕ್ಕೆ ಕೆಲವು ಗ್ರಾಮಗಳು ನೆರೆಯ ಹೊಡೆತಕ್ಕೆ ನಲುಗಿವೆ. ಇನ್ನು ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ತಪ್ಪಲಿನಲ್ಲಿರುವ ಅತ್ತಿಗುಂಡಿ ಕುಗ್ರಾಮ ಕಳೆದ 45 ದಿನಗಳಿಂದ ಕರೆಂಟ್ ಇಲ್ಲದೆ ಕತ್ತಲಲ್ಲಿ ಬದುಕುವಂತಾಗಿದೆ. ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ಇರುವ ಈ ಕುಗ್ರಾಮದ ಸುತ್ತಮುತ್ತ ಕಳೆದ ಒಂದೂವರೆ ತಿಂಗಳಿನಿಂದಲೂ ಧಾರಾಕಾರ ಮಳೆ ಸುರಿಯುತ್ತಿದೆ.

ಕರ್ನಾಟಕದ ಅತ್ಯಂತ ಎತ್ತರದ ಪ್ರದೇಶ ಎಂಬ ಖ್ಯಾತಿಗೆ ಪಾತ್ರವಾಗಿರುವ ಮುಳ್ಳಯ್ಯನಗಿರಿಯ ಮಳೆಗೆ ಮಲೆನಾಡು ಅಕ್ಷರಶಃ ಕಂಗಾಲಾಗಿದೆ. ಅತ್ತಿಗುಂಡಿ ಮಾರ್ಗದಲ್ಲಿ ಹತ್ತಾರು ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಭಾರೀ ಮಳೆ ಗಾಳಿಯಿಂದ ಮುರಿದುಬಿದ್ದ ವಿದ್ಯುತ್ ತಂತಿ ಹಾಗೂ ಕಂಬಗಳನ್ನ ದುರಸ್ತಿ ಮಾಡುವುದು ಅಸಾಧ್ಯವಾಗಿದೆ. ಜೊತೆಗೆ ಮೇಲಿಂದ ಮೇಲೆ ವಿದ್ಯುತ್ ತಂತಿಗಳು ಹಾಗೂ ಕಂಬಗಳು ಮುರಿದು ಬಿದ್ದ ಪರಿಣಾಮ ಮೆಸ್ಕಾಂ ಸಿಬ್ಬಂದಿಗೆ ಲೈನ್ ದುರಸ್ತಿ ಮಾಡುವುದು ಕೂಡ ಅಸಾಧ್ಯವಾಗಿದೆ. ಹಾಗಾಗಿ, ಕಳೆದ ಒಂದೂವರೆ ತಿಂಗಳಿಂದಲೂ ಕೂಡ ಈ ಗ್ರಾಮ ಕತ್ತಲಲ್ಲಿ ಕಾಲ ಕಳೆಯುವಂತಾಗಿದೆ. ಮೊಬೈಲ್ ಚಾರ್ಜ್ ಕೂಡ ಮಾಡಿಕೊಳ್ಳಲಾಗಿದೆ ಗ್ರಾಮಸ್ಥರು ಮೊಬೈಲ್‌ಗಳನ್ನ ಮೂಲೆಗೆ ಎಸೆದಿದ್ದಾರೆ ಎಂದು ಪಬ್ಲಿಕ್‌ ಟಿವಿ ವರದಿ ಮಾಡಿದೆ.

ಗ್ರಾಮದ ಯುವಕರು ಹಾಗೂ ಪುರುಷರು ಬೈಕಿನಲ್ಲಿ ನಗರಕ್ಕೆ ಬಂದಂತಹ ವೇಳೆಯಲ್ಲಿ ಮೊಬೈಲ್ ಚಾರ್ಜ್ ಮಾಡಿಕೊಂಡು ಕಾಲ ಕಳೆಯುತ್ತಿದ್ದಾರೆ. ಈ ಮಧ್ಯೆ ನಗರದಿಂದ ಅತ್ತಿಗುಂಡಿ ಹಾಗೂ ದತ್ತಪೀಠಕ್ಕೆ ನಿತ್ಯ ಸರ್ಕಾರಿ ಹಾಗೂ ಖಾಸಗಿ ಬಸ್ ಕೂಡ ಸಂಚಾರ ಮಾಡುತ್ತಿದ್ದವು. ಆದರೆ, ಭಾರಿ ಗಾಳಿ ಮಳೆಯಿಂದ ಗುಡ್ಡಗಳು ಜರುಗಿತು. ರಸ್ತೆ ಕುಸಿದ ಪರಿಣಾಮ ಕಳೆದ 45 ದಿನಗಳಿಂದ ಈ ಭಾಗಕ್ಕೆ ಬಸ್ ಸಂಚಾರ ಕೂಡ ಸ್ಥಗಿತಗೊಂಡಿದೆ. ಮುಳ್ಳಯ್ಯನಗಿರಿ ತಪ್ಪಲಿನ ಹತ್ತಕ್ಕೂ ಹೆಚ್ಚಿನ ಹಳ್ಳಿಯ ಜನರ ಬದುಕು ಇದೇ ರೀತಿ ಇದೆ. ಹಾಗಾಗಿ ಇಲ್ಲಿನ ಜನ ಒಂದೆಡೆ ಕರೆಂಟ್ ಇಲ್ಲ ಮತ್ತೊಂದೆಡೆ ಬಸ್ ಇಲ್ಲ, ಕೂಲಿಯೂ ಇಲ್ಲ. ಮನೆಯಿಂದ ಹೊರ ಬಂದರೆ ಮಳೆ. ಇಲ್ಲವಾದರೆ ಅಕ್ಕ ಪಕ್ಕದವರು ಕಾಣದಂತಹ ಮಂಜು. ಹಾಗಾಗಿ, ಇಲ್ಲಿನ ಜನ ಕಳೆದ ಒಂದೂವರೆ ತಿಂಗಳಿನಿಂದಲೂ ಕೂಡ ಒಂದು ರೀತಿಯ ನಾಗರಿಕ ಪ್ರಪಂಚದ ಸಂಪರ್ಕವೇ ಇಲ್ಲದಂತೆ ಕಾಲ ಕಳೆಯುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

7 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

14 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

14 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

22 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

22 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago