ಸುದ್ದಿಗಳು

ಮನೆ ದರೋಡೆಗೆ ಯತ್ನಿಸಿದ ಕಳ್ಳ ಆಸ್ಪತ್ರೆಗೆ ಸೇರಿದ….! | ಸೂಪರ್ ಸ್ಟಾರ್ ಮಹೇಶ್ ಬಾಬು ಮನೆಯಲ್ಲಿ ಘಟನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳ್ಳನೊಬ್ಬ ಟಾಲಿವುಡ್​ ಸೂಪರ್​ ಸ್ಟಾರ್​ ಮಹೇಶ್​ ಬಾಬು (Mahesh Babu) ಅವರ ಮನೆಯಲ್ಲಿ ಕಳ್ಳತನಕ್ಕೆ ಯತ್ನಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಬೆಳಕಿಗೆ ಬಂದಿದೆ. 

Advertisement
Advertisement

ಮಂಗಳವಾರ ರಾತ್ರಿ ಹೈದರಾಬಾದ್‌ನ   ಜುಬಿಲಿ ಹಿಲ್ಸ್​ನಲ್ಲಿರುವ ಮಹೇಶ್​ ಬಾಬು ಅವರ ಮನೆ ದರೋಡೆಗೆ ಒಡಿಶಾ ಮೂಲಕ ಯುವಕನೊಬ್ಬ ಯತ್ನಿಸಿದ.  ಮಹೇಶ್​ ಬಾಬು ಅವರ ನಿವಾಸದ ಸುತ್ತ ಸುಮಾರು 30 ಅಡಿ ಎತ್ತರವಿರುವ ಕಾಪೌಂಡ್ ಏರಿದ ಖದೀಮ, ಕೆಳಗೆ ಜಿಗಿದು, ಕಾಲು ನೋವು ಮಾಡಿಕೊಂಡು ಒದ್ದಾಡುತ್ತಿದ್ದ. ಸೆಕ್ಯರಿಟಿ ಗಾರ್ಡ್‌ಗೆ   ಶಬ್ಧ ಕೇಳಿ  ಹೋಗಿ ನೋಡಿದಾಗ  ಕಳ್ಳ ಸಿಕ್ಕಿಬಿದ್ದಿದ್ದಾನೆ. ತಕ್ಷಣ ಸೆಕ್ಯುರಿಟಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದನು.ಸ್ಥಳಕ್ಕೆ ಬಂದ ಪೊಲೀಸರು ಖದೀಮನನ್ನು ವಶಕ್ಕೆ ಪಡೆದು, ಆತನನ್ನು ಹೈದರಾಬಾದ್‌ನ ಒಸ್ಮಾನಿಯಾ ಆಸ್ಪತ್ರೆಗೆ ಚಿಕಿತ್ಸೆಗೆಂದು ದಾಖಲಿಸಿದ್ದಾರೆ. ಈ ಕಳ್ಳ  ಮೂರು ದಿನಗಳ ಹಿಂದೆ ಒಡಿಶಾದಿಂದ ಹೈದರಾಬಾದ್​ಗೆ ಬಂದಿದ್ದನು.

ನಟ ಮಹೇಶ್ ಬಾಬು ಅವರ ತಾಯಿ ಇಂದಿರಾ ದೇವಿ ಹೈದರಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಎರಡು ದಿನಗಳ ಹಿಂದೆ ನಿಧನರಾಗಿದ್ದರು. ಹೀಗಾಗಿ ಮನೆ ಆವರಣದಲ್ಲಿ ಸೆಕ್ಯುರಿಟಿ ಗಾರ್ಡ್‌ ಕೂಡಾ ಎಲರ್ಟ್‌ ಆಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ

ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ  ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಾಲಕಿ ಋತ್ವಿ ಯೋಗ…

6 hours ago

ರಾಜ್ಯದ ಮಾವು ಬೆಳೆಗಾರರ ನೆರವಿಗೆ ಮನವಿ | 3 ಲಕ್ಷ ಸಿಬ್ಬಂದಿಗಳಿಗೆ ನಗದುರಹಿತ  ಆರೋಗ್ಯ ಯೋಜನೆ | ರಾಜ್ಯದ ದುರ್ಗಮ ಪ್ರದೇಶಗಳಿಗೆ ಸಂಚಾರಿ ಆರೋಗ್ಯ ಘಟಕ |

ರಾಜ್ಯದ ಮಾವು  ಬೆಳೆಗಾರರು ಸಂಕಷ್ಟದಲ್ಲಿದ್ದು, ಅವರ ನೆರವಿಗೆ   ಧಾವಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ…

7 hours ago

ಭಾರತದ ಕಾಫಿ ರಫ್ತು ಶೇಕಡ 40 ರಷ್ಟು ವೃದ್ಧಿ | ಒಡಿಶಾ, ಈಶಾನ್ಯ ರಾಜ್ಯಗಳಲ್ಲಿ ಕಾಫಿ ಬೆಳೆಯುವ ಬಗ್ಗೆ ಪ್ರಯೋಗ

ಭಾರತದ ಕಾಫಿ ರಫ್ತು ಕಳೆದ 5 ವರ್ಷದಲ್ಲಿ ಗಣನೀಯ ಬೆಳವಣಿಗೆ ಸಾಧಿಸಿದ್ದು, ಶೇಕಡ…

7 hours ago

ಏಕೆ ಕೆಲವು ಹಿಂಡಿ ದನಗಳಿಗೆ ಹಿಡಿಸುವುದಿಲ್ಲ…?

ಮೊನ್ನೆ ತಾನೆ ಆತ್ಮೀಯ ಮಿತ್ರರೊಬ್ಬರ ಮನೆಗೆ ಹೋಗಿದ್ದೆ. ಮನೆಯ ಹಟ್ಟಿಯಲ್ಲಿ ದೇವನಿ ಜಾತಿಯ…

8 hours ago

ಒಂದು ಮೊಟ್ಟೆಯ ಕತೆ | ಮಕ್ಕಳಿಗೆ ಸರ್ಕಾರ ನೀಡುವ ಮೊಟ್ಟೆ ಶಿಕ್ಷಕರಿಗೆ ತಲೆನೋವು ಏಕೆ..?

ಸರ್ಕಾರವು ಶಾಲಾ ಮಕ್ಕಳಿಗೆ ಬಿಸಿಯೂಟದ ಜೊತೆ ನೀಡುವ ಮೊಟ್ಟೆ ಈಗ ಶಿಕ್ಷಕರಿಗೆ ತಲೆನೋವಾಗುತ್ತಿದೆ.…

9 hours ago

ಹೀಗೊಂದು ಸೇವೆ… ನಮಗೂ-ನಿಮಗೂ ಮಾಡಬಹುದು…!

ನಮ್ಮ ಊರಿನಲ್ಲೂ ನಾವು ಮಾಡಬಹುದಾದ ಸೇವಾ ಕಾರ್ಯ ಇದು.  ಊರಿನ ಆಸು ಪಾಸಿನಲ್ಲಿರುವ…

9 hours ago