ಒಂದೇ ಕುಂಟುಂಬದಿಂದ ಹಲವೆಡೆ ಸರಣಿ ಕಳ್ಳತನ ಶಂಕೆ | ಕರಾವಳಿ ಟೆಕ್ಸ್‌ ಟೈಲ್‌ ಎಸೋಸಿಯೇಶನ್‌ನಿಂದ ಪೊಲೀಸರಿಗೆ ದೂರು |

May 8, 2022
5:49 PM

ಕರಾವಳಿ ಭಾಗದ ಎಲ್ಲಾ ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್‌ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ  ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ವತಿಯಿಂದ  ಎಸೋಸಿಯೇಶನ್‌ ಅಧ್ಯಕ್ಷ , ಆಮ್‌ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್‌ ಕಾಮತ್‌ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.

ಹಲವು ಟೆಕ್ಸ್‌ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್‌ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು  ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್‌ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್‌ವೇರ್ ಡೀಲರ್‍ಸ್ ಎಸೋಸಿಯೆಶನ್  ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ
ಹಂತ ಹಂತವಾಗಿ 16 ಸಾವಿರ ಶಿಕ್ಷಕರ ನೇಮಕ – ಅನುದಾನಿತ ಶಾಲೆಗಳಿಗೂ 6 ಸಾವಿರ ಹುದ್ದೆ – ಸಚಿವ ಮಧು ಬಂಗಾರಪ್ಪ
September 4, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?
September 3, 2026
1:13 PM
by: ಸಾಯಿಶೇಖರ್ ಕರಿಕಳ
ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ
September 3, 2026
7:08 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror