ಕರಾವಳಿ ಭಾಗದ ಎಲ್ಲಾ ಟೆಕ್ಸ್ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ ಟೆಕ್ಸ್ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್ವೇರ್ ಡೀಲರ್ಸ್ ಎಸೋಸಿಯೆಶನ್ ವತಿಯಿಂದ ಎಸೋಸಿಯೇಶನ್ ಅಧ್ಯಕ್ಷ , ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಹಲವು ಟೆಕ್ಸ್ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್ವೇರ್ ಡೀಲರ್ಸ್ ಎಸೋಸಿಯೆಶನ್ ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಾಳೆ ಮಂಡಿಸಲಿರುವ ಕೇಂದ್ರ ಬಜೆಟ್ 2025…
ಬೆಂಗಳೂರಿನ ಯಲಹಂಕ ತಾಲ್ಲೂಕಿನ ಒಟ್ಟು 5678 ಎಕರೆ ಗುಂಟೆ ಪ್ರದೇಶವನ್ನು ಪರಿಸರ ಸಂರಕ್ಷಣೆ…
ಬೆಳೆಗಾರರಿಗೆ ತರಬೇತಿ ನೀಡಲು ತರಬೇತಿ ಕೇಂದ್ರ ಸ್ಥಾಪನೆ ಮಾಡಲಾಗುವುದು ಎಂದು ಕರ್ನಾಟಕ ಕೊಳಚೆ…