ಕರಾವಳಿ ಭಾಗದ ಎಲ್ಲಾ ಟೆಕ್ಸ್ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ ಟೆಕ್ಸ್ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್ವೇರ್ ಡೀಲರ್ಸ್ ಎಸೋಸಿಯೆಶನ್ ವತಿಯಿಂದ ಎಸೋಸಿಯೇಶನ್ ಅಧ್ಯಕ್ಷ , ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಹಲವು ಟೆಕ್ಸ್ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್ವೇರ್ ಡೀಲರ್ಸ್ ಎಸೋಸಿಯೆಶನ್ ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…