ಕರಾವಳಿ ಭಾಗದ ಎಲ್ಲಾ ಟೆಕ್ಸ್ಟೈಲ್ಸ್ ಅಂಗಡಿಗಳಲ್ಲಿ ಬಟ್ಟೆ ಕಳ್ಳತನ ಹಾಗೂ ಗ್ರಾಹಕರ ಬ್ಯಾಗ್ನಿಂದ ಮತ್ತು ಮೈಯಲ್ಲಿರುವ ಆಭರಣಗಳ ಕಳ್ಳತನ ಆಗಿರುವ ಹಿನ್ನಲೆಯಿಂದ ಕರಾವಳಿ ಟೆಕ್ಸ್ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್ವೇರ್ ಡೀಲರ್ಸ್ ಎಸೋಸಿಯೆಶನ್ ವತಿಯಿಂದ ಎಸೋಸಿಯೇಶನ್ ಅಧ್ಯಕ್ಷ , ಆಮ್ ಆದ್ಮಿ ಪಾರ್ಟಿ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್ ನೇತೃತ್ವದಲ್ಲಿ ಮಂಗಳೂರು ಪೋಲಿಸ್ ಆಯುಕ್ತರಿಗೆ ದೂರು ನೀಡಲಾಗಿದೆ.
ಹಲವು ಟೆಕ್ಸ್ಟೈಲ್ಸ್ ಅಂಗಡಿಗಳಲ್ಲಿ ಕಳ್ಳತನ ನಡೆದಿರುವುದೆಲ್ಲವೂ ಸಿ.ಸಿ ಟಿ.ವಿ ಪೂಟೇಜ್ನಲ್ಲಿ ದಾಖಲಾಗಿದ್ದು, ಇದನ್ನು ಪ್ರತ್ಯೇಕ ಕಳ್ಳತನವೆಂದು ಭಾವಿಸಿದ್ದೆವು. ಈ ಬಗ್ಗೆ ಎಲ್ಲೆಡೆಯೂ ಕೂಲಂಕುಶವಾಗಿ ಪರಿಶೀಲನೆ ಮಾಡಿದಾಗ ಒಂದೇ ಕುಟುಂಬದವರು ಈ ಕೃತ್ಯದಲ್ಲಿ ಭಾಗಿಯಾಗಿದ್ದಾರೆ ಎಂಬ ಸಂಶಯ ಮೂಡಿದೆ.ಸುಮಾರು 30 ವರ್ಷಗಳಿಂದ ಕಳ್ಳತನ ಮಾಡುವುದೇ ಇವರ ಚಟುವಟಿಕಯಾಗಿದೆ ಎಂಬುದೂ ಈಗ ಸಂದೇಹಕ್ಕೆ ಎಡೆಮಾಡಿದೆ. ಆದುದರಿಂದ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಕಳ್ಳತನ ಮಾಡುವವರ ವಿರುದ್ಧ ಸೂಕ್ತ ರೀತಿಯ ಕಾನೂನು ಕ್ರಮ ಜರಗಿಸಬೇಕಾಗಿದೆ ಎಂದು ಕರಾವಳಿ ಭಾಗದ ಟೆಕ್ಸ್ಟೈಲ್ಸ್, ರೆಡಿಮೇಡ್ಸ್ ಮತ್ತು ಫೂಟ್ವೇರ್ ಡೀಲರ್ಸ್ ಎಸೋಸಿಯೆಶನ್ ಮಂಗಳೂರು ಪೋಲಿಸ್ ಆಯುಕ್ತರಿಗೆ ನೀಡಿದ ದೂರಿನಲ್ಲಿ ಒತ್ತಾಯಿಸಿದ್ದಾರೆ.
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…