ನೂರಾರು ವರ್ಷಗಳಿಂದ ಬರಗಾಲವಿದೆ | ಅಂದಿನ ರೈತ ಬಲಿಷ್ಠನಾಗಿದ್ದ | ಈಗಿನ ರೈತರು ಹತಾಶರಾಗಿದ್ದಾರೆ

October 26, 2023
10:18 PM

ಬರಗಾಲ(Drought) ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು. ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ(farmer) ಹೊಸದಲ್ಲ. ಆದರೆ ಅಂದು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ ಎದುರಿಸುವ ಶಕ್ತಿಯನ್ನು ರೈತರು ಹೊಂದಿದ್ದರು, ಇಂದು ರೈತರು ಹೆಚ್ಚು ಬೆಳೆ ಬೆಳೆಯುವ ಭರಾಟೆಯಲ್ಲಿ ರೈತ ಹವಾಮಾನ ವೈಪರೀತ್ಯ(Weather extremes) ಮತ್ತು ಮಾರುಕಟ್ಟೆ ಏರು ಪೇರುಗಳನ್ನು ಸಹಿಸಿಕೊಳ್ಳಲಾಗದೇ ರೈತ ಹತಾಶನಾಗಿ ಆತ್ಮಹತ್ಯೆಗೆ(suicide) ಶರಣಾಗುವ ಸ್ಥಿತಿಗೆ ಬಂದಿದ್ದಾನೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಹೇಳಿದರು.

Advertisement
Advertisement

ಮಾದನಬಾವಿ ಗ್ರಾಮದಲ್ಲಿ ಶ್ರೀ ಗವಿಸಿದ್ದೇಶ್ವರ ಸೇವಾ ಸಮಿತಿ ಟ್ರಸ್ಟ್ ನ ಹಳ್ಳಿ ಕಟ್ಟೆಮನೆ ದೊಡ್ಡಕಲ್ಲುಕಟ್ಟೆ ಮಾದನಬಾವಿ ಹಮ್ಮಿಕೊಂಡಿದ್ದ ಪ್ರಕೃತಿ ವೈಫಲ್ಯದ ಸಮನ್ಯಯ ಸಾಂಗತ್ಯ ಕೃಷಿ ಎಂಬ ಶೀರ್ಷಿಕೆಯಡಿ ಅ. 25 ರಿಂದ 27ರವರೆಗೆ ಹಮ್ಮಿಕೊಂಡಿರುವ ರಾಜ್ಯ ದಸರಾ ಬನ್ನಿ ಕೃಷಿ ಮೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಸರ್ಕಾರ ಅನೇಕ ವೈಜ್ಞಾನಿಕ ತಂತ್ರಗಳನ್ನು ಅಳವಡಿಸಿಕೊಂಡಿದ್ದರೂ, ಬರಗಾಲ ಬಂದಿದೆ. ಒಟ್ಟಾರೆಯಾಗಿ ದೇಶಕ್ಕೆ ಅನ್ನ ಕೊಡುವ ಧಾವಂತದಲ್ಲಿ ಹೆಚ್ಚು ಬೆಳೆದರೆ ಹಣವಂತರಾಗುತ್ತಾರೆ ಎಂಬ ಭ್ರಮೆಯಲ್ಲಿ ರೈತರು ಸಾಲಬಾಧೆಯ ಸುಳಿಗೆ ಸಿಲುಕಿ ಕಷ್ಟ ಅನುಭವಿಸುಂತಾಗಿದೆ.

ಹಿಂದಿನ ಕಾಲದಲ್ಲಿ ಬರಗಾಲದಲ್ಲೂ ಸಾವಯವ ಮತ್ತು ಸ್ವಾವಲಂಬಿ ಕೃಷಿ ಪದ್ದತಿಗಳ ಮೂಲಕ ರೈತರು ಸರ್ಕಾರದಿಂದ ಯಾವುದೇ ಸಹಾಯ ಬೇಡದೆ ಜೀವನ ನಡೆಸುತ್ತಿದ್ದರು ಆದರೆ ಇಂದಿನ ಬರಗಾಲ ಪ್ರತಿಯೊಂದಕ್ಕೂ ಸರ್ಕಾರದ ಸಹಾಯ ಬೇಡುವ ಪರಿಸ್ಥಿತಿಯಲ್ಲಿ ರೈತರಿದ್ದಾರೆ ಎಂದು ಹೇಳಿದರು.

Advertisement

ಇಂದಿನ ಬರಗಾಲ ಪರಿಸ್ಥಿತಿಗೆ ರೈತರು ಕಾರಣರೋ ಸರ್ಕಾರ ಮತ್ತು ಜನ ಕಾರಣರೋ ಎಂದು ಗಂಭೀರ ಚಿಂತನೆ ಮಾಡಬೇಕಿದೆ. ಅದಕ್ಕೆ ಕಾರಣ ಮನುಷ್ಯ ಅತೀ ದುರಾಸೆಗೆ ಬಲಿಯಾಗಿರುವುದು. ಅದಕ್ಕಾಗಿ ಜಲ ಸಂಪನ್ಮೂಲಗಳು, ಕೃಷಿ ಭೂಮಿ, ಪರಿಸರ ಕಾಡು ಎಲ್ಲವನ್ನೂ ಮನುಷ್ಯ ಹಾಳು ಮಾಡುತ್ತಿದ್ದಾನೆ ಇದರ ಪರಿಣಾಮ ಕೂಡ ಮನುಷ್ಯನೆ ಅನುಭವಿಸಬೇಕಾಗಿದೆ ಎಂದು ಹೇಳಿದರು.

Drought existed hundreds of years ago and still exists. Drought situation is not new to farmers but then farmers had the power to effectively handle or face the drought situation. Today, in the rush to grow more crops, farmers are unable to bear the extreme weather and market pressure. Karnataka State Farmers Union State President H.R. Basavarajappa said.
Advertisement
Advertisement
Advertisement

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |
April 27, 2024
9:05 PM
by: ದ ರೂರಲ್ ಮಿರರ್.ಕಾಂ
Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |
April 27, 2024
3:21 PM
by: ಸಾಯಿಶೇಖರ್ ಕರಿಕಳ
ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |
April 27, 2024
2:15 PM
by: ದ ರೂರಲ್ ಮಿರರ್.ಕಾಂ
ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?
April 25, 2024
11:48 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror