MIRROR FOCUS

ನೂರಾರು ವರ್ಷಗಳಿಂದ ಬರಗಾಲವಿದೆ | ಅಂದಿನ ರೈತ ಬಲಿಷ್ಠನಾಗಿದ್ದ | ಈಗಿನ ರೈತರು ಹತಾಶರಾಗಿದ್ದಾರೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬರಗಾಲ(Drought) ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು. ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ(farmer) ಹೊಸದಲ್ಲ. ಆದರೆ ಅಂದು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ ಎದುರಿಸುವ ಶಕ್ತಿಯನ್ನು ರೈತರು ಹೊಂದಿದ್ದರು, ಇಂದು ರೈತರು ಹೆಚ್ಚು ಬೆಳೆ ಬೆಳೆಯುವ ಭರಾಟೆಯಲ್ಲಿ ರೈತ ಹವಾಮಾನ ವೈಪರೀತ್ಯ(Weather extremes) ಮತ್ತು ಮಾರುಕಟ್ಟೆ ಏರು ಪೇರುಗಳನ್ನು ಸಹಿಸಿಕೊಳ್ಳಲಾಗದೇ ರೈತ ಹತಾಶನಾಗಿ ಆತ್ಮಹತ್ಯೆಗೆ(suicide) ಶರಣಾಗುವ ಸ್ಥಿತಿಗೆ ಬಂದಿದ್ದಾನೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಹೇಳಿದರು.

Advertisement
Advertisement

ಮಾದನಬಾವಿ ಗ್ರಾಮದಲ್ಲಿ ಶ್ರೀ ಗವಿಸಿದ್ದೇಶ್ವರ ಸೇವಾ ಸಮಿತಿ ಟ್ರಸ್ಟ್ ನ ಹಳ್ಳಿ ಕಟ್ಟೆಮನೆ ದೊಡ್ಡಕಲ್ಲುಕಟ್ಟೆ ಮಾದನಬಾವಿ ಹಮ್ಮಿಕೊಂಡಿದ್ದ ಪ್ರಕೃತಿ ವೈಫಲ್ಯದ ಸಮನ್ಯಯ ಸಾಂಗತ್ಯ ಕೃಷಿ ಎಂಬ ಶೀರ್ಷಿಕೆಯಡಿ ಅ. 25 ರಿಂದ 27ರವರೆಗೆ ಹಮ್ಮಿಕೊಂಡಿರುವ ರಾಜ್ಯ ದಸರಾ ಬನ್ನಿ ಕೃಷಿ ಮೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಅನೇಕ ವೈಜ್ಞಾನಿಕ ತಂತ್ರಗಳನ್ನು ಅಳವಡಿಸಿಕೊಂಡಿದ್ದರೂ, ಬರಗಾಲ ಬಂದಿದೆ. ಒಟ್ಟಾರೆಯಾಗಿ ದೇಶಕ್ಕೆ ಅನ್ನ ಕೊಡುವ ಧಾವಂತದಲ್ಲಿ ಹೆಚ್ಚು ಬೆಳೆದರೆ ಹಣವಂತರಾಗುತ್ತಾರೆ ಎಂಬ ಭ್ರಮೆಯಲ್ಲಿ ರೈತರು ಸಾಲಬಾಧೆಯ ಸುಳಿಗೆ ಸಿಲುಕಿ ಕಷ್ಟ ಅನುಭವಿಸುಂತಾಗಿದೆ.

ಹಿಂದಿನ ಕಾಲದಲ್ಲಿ ಬರಗಾಲದಲ್ಲೂ ಸಾವಯವ ಮತ್ತು ಸ್ವಾವಲಂಬಿ ಕೃಷಿ ಪದ್ದತಿಗಳ ಮೂಲಕ ರೈತರು ಸರ್ಕಾರದಿಂದ ಯಾವುದೇ ಸಹಾಯ ಬೇಡದೆ ಜೀವನ ನಡೆಸುತ್ತಿದ್ದರು ಆದರೆ ಇಂದಿನ ಬರಗಾಲ ಪ್ರತಿಯೊಂದಕ್ಕೂ ಸರ್ಕಾರದ ಸಹಾಯ ಬೇಡುವ ಪರಿಸ್ಥಿತಿಯಲ್ಲಿ ರೈತರಿದ್ದಾರೆ ಎಂದು ಹೇಳಿದರು.

ಇಂದಿನ ಬರಗಾಲ ಪರಿಸ್ಥಿತಿಗೆ ರೈತರು ಕಾರಣರೋ ಸರ್ಕಾರ ಮತ್ತು ಜನ ಕಾರಣರೋ ಎಂದು ಗಂಭೀರ ಚಿಂತನೆ ಮಾಡಬೇಕಿದೆ. ಅದಕ್ಕೆ ಕಾರಣ ಮನುಷ್ಯ ಅತೀ ದುರಾಸೆಗೆ ಬಲಿಯಾಗಿರುವುದು. ಅದಕ್ಕಾಗಿ ಜಲ ಸಂಪನ್ಮೂಲಗಳು, ಕೃಷಿ ಭೂಮಿ, ಪರಿಸರ ಕಾಡು ಎಲ್ಲವನ್ನೂ ಮನುಷ್ಯ ಹಾಳು ಮಾಡುತ್ತಿದ್ದಾನೆ ಇದರ ಪರಿಣಾಮ ಕೂಡ ಮನುಷ್ಯನೆ ಅನುಭವಿಸಬೇಕಾಗಿದೆ ಎಂದು ಹೇಳಿದರು.

Advertisement
Drought existed hundreds of years ago and still exists. Drought situation is not new to farmers but then farmers had the power to effectively handle or face the drought situation. Today, in the rush to grow more crops, farmers are unable to bear the extreme weather and market pressure. Karnataka State Farmers Union State President H.R. Basavarajappa said.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 22.06.2025| ಜೂ.28 ರಿಂದ ಮಳೆ‌ ಕಡಿಮೆಯಾಗಲಿದೆಯಾ ?

23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

14 hours ago

ಇಲ್ಲಿ ರೈತರು ಕೀಟನಾಶಕಗಳ ಬದಲಿಗೆ ಬಾತುಕೋಳಿಗಳನ್ನು ಬಳಸುತ್ತಾರೆ..!

ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…

15 hours ago

ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಠ 1 ಮೀಟರ್ ರಸ್ತೆ  ಬ್ಲಾಕ್ ತೆರವಿಗೆ ಆದೇಶ

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…

16 hours ago

ಕೃಷಿಯಲ್ಲಿ ಹೆಚ್ಚಿನ ಇಳುವರಿಗಾಗಿ ಎಐ ಕೃಷಿ ನೀತಿ | ಅನುಷ್ಠಾನಕ್ಕಾಗಿ ಸರ್ಕಾರ 500 ಕೋಟಿ ಮೀಸಲು

ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್‌ಗಳು ಮತ್ತು…

17 hours ago

ಭರದಿಂದ ನಡೆಯುತ್ತಿದೆ ಎತ್ತಿನಹೊಳೆ ಯೋಜನೆ | 2027ರೊಳಗೆ ಎತ್ತಿನಹೊಳೆ ನೀರು ಕೋಲಾರ ಭಾಗಕ್ಕೆ

ಎತ್ತಿನ ಹೊಳೆ  ಯೋಜನೆಯ  ಮೂಲಕ  ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…

18 hours ago

ಮಕರ ರಾಶಿಯಲ್ಲಿ ಚಂದ್ರ, ಈ 3 ರಾಶಿಗೆ ಯಶಸ್ಸು, ಸಂಪತ್ತು

ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago