Advertisement
MIRROR FOCUS

ನೂರಾರು ವರ್ಷಗಳಿಂದ ಬರಗಾಲವಿದೆ | ಅಂದಿನ ರೈತ ಬಲಿಷ್ಠನಾಗಿದ್ದ | ಈಗಿನ ರೈತರು ಹತಾಶರಾಗಿದ್ದಾರೆ

Share

ಬರಗಾಲ(Drought) ಎಂಬುದು ನೂರಾರು ವರ್ಷಗಳಿಂದ ಹಿಂದೆ ಇತ್ತು. ಈಗಲೂ ಕೂಡ ಇದೆ ಬರಗಾಲ ಪರಿಸ್ಥಿತಿ ರೈತರಿಗೆ(farmer) ಹೊಸದಲ್ಲ. ಆದರೆ ಅಂದು ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸುವ ಅಥವಾ ಎದುರಿಸುವ ಶಕ್ತಿಯನ್ನು ರೈತರು ಹೊಂದಿದ್ದರು, ಇಂದು ರೈತರು ಹೆಚ್ಚು ಬೆಳೆ ಬೆಳೆಯುವ ಭರಾಟೆಯಲ್ಲಿ ರೈತ ಹವಾಮಾನ ವೈಪರೀತ್ಯ(Weather extremes) ಮತ್ತು ಮಾರುಕಟ್ಟೆ ಏರು ಪೇರುಗಳನ್ನು ಸಹಿಸಿಕೊಳ್ಳಲಾಗದೇ ರೈತ ಹತಾಶನಾಗಿ ಆತ್ಮಹತ್ಯೆಗೆ(suicide) ಶರಣಾಗುವ ಸ್ಥಿತಿಗೆ ಬಂದಿದ್ದಾನೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಎಚ್.ಆರ್. ಬಸವರಾಜಪ್ಪ ಹೇಳಿದರು.

ಮಾದನಬಾವಿ ಗ್ರಾಮದಲ್ಲಿ ಶ್ರೀ ಗವಿಸಿದ್ದೇಶ್ವರ ಸೇವಾ ಸಮಿತಿ ಟ್ರಸ್ಟ್ ನ ಹಳ್ಳಿ ಕಟ್ಟೆಮನೆ ದೊಡ್ಡಕಲ್ಲುಕಟ್ಟೆ ಮಾದನಬಾವಿ ಹಮ್ಮಿಕೊಂಡಿದ್ದ ಪ್ರಕೃತಿ ವೈಫಲ್ಯದ ಸಮನ್ಯಯ ಸಾಂಗತ್ಯ ಕೃಷಿ ಎಂಬ ಶೀರ್ಷಿಕೆಯಡಿ ಅ. 25 ರಿಂದ 27ರವರೆಗೆ ಹಮ್ಮಿಕೊಂಡಿರುವ ರಾಜ್ಯ ದಸರಾ ಬನ್ನಿ ಕೃಷಿ ಮೇಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸರ್ಕಾರ ಅನೇಕ ವೈಜ್ಞಾನಿಕ ತಂತ್ರಗಳನ್ನು ಅಳವಡಿಸಿಕೊಂಡಿದ್ದರೂ, ಬರಗಾಲ ಬಂದಿದೆ. ಒಟ್ಟಾರೆಯಾಗಿ ದೇಶಕ್ಕೆ ಅನ್ನ ಕೊಡುವ ಧಾವಂತದಲ್ಲಿ ಹೆಚ್ಚು ಬೆಳೆದರೆ ಹಣವಂತರಾಗುತ್ತಾರೆ ಎಂಬ ಭ್ರಮೆಯಲ್ಲಿ ರೈತರು ಸಾಲಬಾಧೆಯ ಸುಳಿಗೆ ಸಿಲುಕಿ ಕಷ್ಟ ಅನುಭವಿಸುಂತಾಗಿದೆ.

ಹಿಂದಿನ ಕಾಲದಲ್ಲಿ ಬರಗಾಲದಲ್ಲೂ ಸಾವಯವ ಮತ್ತು ಸ್ವಾವಲಂಬಿ ಕೃಷಿ ಪದ್ದತಿಗಳ ಮೂಲಕ ರೈತರು ಸರ್ಕಾರದಿಂದ ಯಾವುದೇ ಸಹಾಯ ಬೇಡದೆ ಜೀವನ ನಡೆಸುತ್ತಿದ್ದರು ಆದರೆ ಇಂದಿನ ಬರಗಾಲ ಪ್ರತಿಯೊಂದಕ್ಕೂ ಸರ್ಕಾರದ ಸಹಾಯ ಬೇಡುವ ಪರಿಸ್ಥಿತಿಯಲ್ಲಿ ರೈತರಿದ್ದಾರೆ ಎಂದು ಹೇಳಿದರು.

ಇಂದಿನ ಬರಗಾಲ ಪರಿಸ್ಥಿತಿಗೆ ರೈತರು ಕಾರಣರೋ ಸರ್ಕಾರ ಮತ್ತು ಜನ ಕಾರಣರೋ ಎಂದು ಗಂಭೀರ ಚಿಂತನೆ ಮಾಡಬೇಕಿದೆ. ಅದಕ್ಕೆ ಕಾರಣ ಮನುಷ್ಯ ಅತೀ ದುರಾಸೆಗೆ ಬಲಿಯಾಗಿರುವುದು. ಅದಕ್ಕಾಗಿ ಜಲ ಸಂಪನ್ಮೂಲಗಳು, ಕೃಷಿ ಭೂಮಿ, ಪರಿಸರ ಕಾಡು ಎಲ್ಲವನ್ನೂ ಮನುಷ್ಯ ಹಾಳು ಮಾಡುತ್ತಿದ್ದಾನೆ ಇದರ ಪರಿಣಾಮ ಕೂಡ ಮನುಷ್ಯನೆ ಅನುಭವಿಸಬೇಕಾಗಿದೆ ಎಂದು ಹೇಳಿದರು.

Drought existed hundreds of years ago and still exists. Drought situation is not new to farmers but then farmers had the power to effectively handle or face the drought situation. Today, in the rush to grow more crops, farmers are unable to bear the extreme weather and market pressure. Karnataka State Farmers Union State President H.R. Basavarajappa said.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

23 hours ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

1 day ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

2 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

3 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

3 days ago

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

3 days ago