Advertisement
ಸುದ್ದಿಗಳು

#Success | ಮನಸ್ಸಿದ್ದರೆ ಮಾರ್ಗ | ಹಳ್ಳಿಯಲ್ಲಿ ಬೆಳೆದ ಪಪ್ಪಾಯಿಗೆ ಅಮೇರಿಕಾ, ಅರಬ್‌ ರಾಷ್ಟ್ರಗಳಲ್ಲಿ ಬೇಡಿಕೆ

Share

ಪಪ್ಪಾಯಿ ಬೆಳೆ ಬೆಳೆಯಲು ನಮ್ಮ ಕರಾವಳಿ ಕೂಡ ಸೂಕ್ತ ಪ್ರದೇಶ. ಆದರೆ ಇದನ್ನು ವಾಣಿಜ್ಯ ಬೆಳೆಯಾಗಿ ಬೆಳೆದವರು ವಿರಳ. ಕೇವಲ ಬೆರಳೆಣಿಕೆಯ ಮಂದಿ ಬೆಳೆದದ್ದಿದೆ. ನಮ್ಮ ಅಡಿಕೆ ತೋಟ, ಹಿತ್ತಲಲ್ಲಿ ಕೇವಲ ಅದಾಗಿಯೇ ಬಿದ್ದು ಬೆಳೆಯುವುದು ಬಿಟ್ಟರೆ ವಿಶೇಷ ಕಾಳಜಿ ಕೊಟ್ಟು ಬೆಳೆಯುವುದು ಕಡಿಮೆ. ದಕ್ಷಿಣ ಕನ್ನಡ, ಉತ್ತರ ಕನ್ನಡದ ಭೌಗೋಳಿಕ ಹಾಗೂ ಹವಾಮಾನ ಎಲ್ಲಾ ಒಂದೇ. ಇಲ್ಲೊಬ್ಬರು ಪ್ರಗತಿ ಪರ ರೈತ ವಿದೇಶಿ ತಳಿ ಪಪ್ಪಾಯ ಬೆಳೆದು ಚಿನ್ನದ ಬೆಳೆ ತೆಗೆಯುತ್ತಿದ್ದಾರೆ.

ಹಳ್ಳಿಯಲ್ಲಿ ಬೆಳೆಯೋ ಈ ಹಣ್ಣುಗಳು ಸಮುದ್ರದಾಚೆಗೂ ಮಾರ್ಕೆಟ್‌ #Market ಹೊಂದಿದೆ. ಅರೇಬಿಯಾ ದೇಶದಿಂದ ಹಿಡಿದು ಅಮೆರಿಕಾದವರೆಗೂ ಈ ಹಣ್ಣಿನ ಡಿಮಾಂಡ್ ಇದೆ. ಇದನ್ನು ಬೆಳೆದವರು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಹುಲಿಹೊಂಡ ಗ್ರಾಮದ ಬಸವರಾಜ್ ನಡುವಿನಮನಿ. ಕೆಲವು ವರ್ಷದ ಹಿಂದೆ ಇವರು ತಮ್ಮ ತೋಟದಲ್ಲಿ ತೈವಾನ್‌ ತಳಿಯ ಪಪ್ಪಾಯಿ ಬೆಳೆದು, ಈಗ ಈ ಸಣ್ಣ ಹಳ್ಳಿಯಿಂದ ಸೌದಿ ಅರೇಬಿಯಾ, ಆಸ್ಟ್ರೇಲಿಯಾ, ಅಮೇರಿಕಾದವರೆಗೆ ತನ್ನ ಮಾರ್ಕೆಟ್‌ ವಿಸ್ತರಿಸಿಕೊಂಡಿದ್ಧಾರೆ. ಆ ಮೂಲಕ ವಿದೇಶಗಳಲ್ಲೂ, ಬಸವರಾಜ್‌ ನಡುವಿನಮನಿ ಅವರು ಬೆಳೆದ ಪಪ್ಪಾಯಿಗೆ ಭರ್ಜರಿ ಬೇಡಿಕೆ ಇದೆ.

ತೋಟಗಾರಿಕಾ ಬೆಳೆ : ಎಂಟು ವರ್ಷದ ಹಿಂದೆ ಸರ್ಕಾರಿ ಹುದ್ದೆಗಾಗಿ ಓದಿಕೊಂಡಿದ್ದ ಬಸವರಾಜ್‌, ಸಾಂಪ್ರದಾಯಿಕ ಕೃಷಿಯ ಕಡೆ ಮುಖ ಮಾಡಿ ಊರಿನ ಪ್ರಗತಿಪರ ಕೃಷಿಕ ಎನ್ನಿಸಿಕೊಂಡರು. ಹುಲಿಹೊಂಡದ ಇವರ ಜಮೀನಿನಲ್ಲಿ ಅಡಿಕೆ, ತೆಂಗು, ಕಾಳುಮೆಣಸು, ಕಾಫಿ ಸೇರಿದಂತೆ ವಾಣಿಜ್ಯ ಬೆಳೆಗಳು, ಬಾಳೆ, ಪಪ್ಪಾಯಿ, ಪೇರಲು, ಗೇರು ಹಲವು ಗಿಡ ಮರಗಳಿವೆ. ಅದರಲ್ಲೂ ಅರಣ್ಯ ಕೃಷಿಗೆ ಆದ್ಯತೆ ನೀಡಿ ಶ್ರೀಗಂಧ, ಬೀಟೆ, ಹತ್ತಿ ಬೆಳೆಯುತ್ತಿದ್ದಾರೆ‌.‌ ಸುಮಾರು 3500ರಷ್ಟು ರಕ್ತಚಂದನ ಗಿಡ ಬೆಳೆಸುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಇವರ ಪಪ್ಪಾಯಿ ಕೃಷಿ ವಿಶೇಷವಾಗಿದೆ.

ವಿದೇಶದಲ್ಲೂ ಬೇಡಿಕೆ : 2500 ಪಪ್ಪಾಯಿ ಗಿಡ ಹೊಂದಿರುವ ಇವರು ಟನ್ ಗಟ್ಟಲೇ ಪಪ್ಪಾಯಿ ವ್ಯಾಪಾರ ಮಾಡುತ್ತಾರೆ. ಟ್ರೋಪಿಕಾಲ್ ಎಂಬ ಸಂಸ್ಥೆಯೊಂದಿಗೆ ಕೈ ಜೋಡಿಸಿರುವ ಇವರು ಪಪ್ಪಾಯಿಯು ಸೌದಿ ಅರೇಬಿಯಾ, ಇರಾಕ್, ಇರಾನ್ ಸೇರಿದಂತೆ ಅರಬ್ ದೇಶಗಳಲ್ಲಿ, ಆಸ್ಟ್ರೇಲಿಯಾ, ಅಮೇರಿಕಾಗಳಲ್ಲಿ ಮಾರಾಟವಾಗುತ್ತದೆ.

ತೈವಾನ್ ರೆಡ್ ಲೇಡಿ ಹೆಸರಿನ ಈ ಹಣ್ಣನ್ನು ಕಳೆದ ಮೂರು ವರ್ಷದಿಂದ ಬೆಳೆಯುತ್ತಾ ಬಂದಿದ್ದಾರೆ. ಒಂದು ಗಿಡ 120 ಕೆಜಿ ತೂಕದ ಹಣ್ಣನ್ನು ತಂದುಕೊಡುತ್ತದೆ. ಮೂರು ತಿಂಗಳಿನ ಈ ಬೆಳೆಯಲ್ಲಿ 2500 ಗಿಡಗಳಿಂದ ಸುಮಾರು 300 ಟನ್ ನಷ್ಟು ಪಪ್ಪಾಯಿಯನ್ನು ಇವರು ಬೆಳೆಯುತ್ತಿದ್ದಾರೆ. ಇನ್ನು ನವೆಂಬರ್, ಡಿಸೆಂಬರ್ ನಲ್ಲಂತೂ ಕಟಾವಿನ ಸಮಯವಾಗಿದ್ದು, ಇವರ ತೋಟಕ್ಕೆ ಬಂದರೆ ಪಪ್ಪಾಯಿ ಜಗತ್ತಿಗೆ ಬಂದ ಅನುಭವ ಕೊಡುತ್ತೆ. ಒಟ್ಟಿನಲ್ಲಿ ಬಸವರಾಜ್‌ ನಡುವಿನಮನಿ ಅವರ ಕೃಷಿ ಸಾಧನೆ  ನಿಜಕ್ಕೂ ಶ್ಲಾಘನೀಯ.

(ಕೃಪೆ : ಅಂತರ್ಜಾಲ ) 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

4 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

5 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

5 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

13 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

17 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

17 hours ago