Advertisement
MIRROR FOCUS

ಮಾತೃಭಾಷೆಗೆ ಪರ್ಯಾಯ ಇಲ್ಲ: ರಾಘವೇಶ್ವರ ಶ್ರೀ

Share

ಅಮ್ಮನ ಸಂಬಂಧ ಮತ್ತು ಉಪ್ಪಿನ ರುಚಿಗೆ ಪರ್ಯಾಯ ಇಲ್ಲ; ಅಂತೆಯೇ ಎಷ್ಟೇ ಭಾಷೆಗಳಿದ್ದರೂ ಮಾತೃಭಾಷೆಗೆ ಪರ್ಯಾಯವಾಗಲಾರದು ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ನುಡಿದರು.

ಅಶೋಕೆಯಲ್ಲಿ ಸ್ವಭಾಷಾ ಚಾತುಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 44ನೇ ದಿನವಾದ ಶುಕ್ರವಾರ ಉಪ್ಪಿನಂಗಡಿ ಮಂಡಲದ ಪುತ್ತೂರು, ಬೆಟ್ಟಂಪಾಡಿ, ಪಂಜ, ಚೊಕ್ಕಾಡಿ, ಬೆಳ್ಳಾರೆ ಮತ್ತು ಧರ್ಬೆ ವಲಯಗಳ ಶಿಷ್ಯರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ಅನುಗ್ರಹಿಸಿದರು. ವಿಶ್ವದ ಯಾವುದೇ ಭಾಷೆಗಳಿಗಿಂತ ಸಮೃದ್ಧ ಭಾಷೆ ಕನ್ನಡ. ಕನ್ನಡದಲ್ಲಿ ಶಬ್ದ ದಾರಿದ್ರ್ಯ ಅಥವಾ ಶಬ್ದಗಳಿಗೆ ಬಡತನ ಇಲ್ಲ. ಆದಾಗ್ಯೂ ಪರಕೀಯ ಶಬ್ದಗಳಿಂದ ನಮ್ಮ ತಾಯ್ನುಡಿಯನ್ನು ಕಲುಷಿತಗೊಳಿಸದೇ ಭಾಷೆಯ ಶುದ್ಧತೆಯನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಹೊಣೆ ಎಂದು ಹೇಳಿದರು.

ಭಾರತೀಯ ಭಾಷೆಗಳು ವಾಗ್ದೇವತೆ ಸರಸ್ವತಿಯ ಪ್ರೇರಣೆಯಿಂದ ಬಂದದ್ದು. ತಾಯಿ, ತಾಯ್ನಾಡು ಮತ್ತು ವಾಗ್ದೇವತೆಗೆ ಗೌರವ ನೀಡುವುದು ನಮ್ಮ ಕರ್ತವ್ಯ. ನಮ್ಮ ಭಾಷೆಯ ಪಾವಿತ್ರ್ಯವನ್ನು ನಾವು ಕಾಪಾಡಿಕೊಳ್ಳಬೇಕು. ಆದ್ದರಿಂದ ಇದೇ ಪರಕೀಯ ಶಬ್ದಗಳನ್ನು ವಿಸರ್ಜಿಸುವ ಪ್ರತಿಜ್ಞೆ ಕೈಗೊಂಡು ಭಾಷೆಯ ಶುದ್ಧತೆಗೆ ಗಮನ ಹರಿಸೋಣ ಎಂದು ಕರೆ ನೀಡಿದರು. ಶಂಕರರು ಸಹಸ್ರ ವರ್ಷಗಳ ಹಿಂದೆ ಬೆಳಗಿದ ದೀಪದ ಬೆಳಕಿನಲ್ಲಿ ನಮ್ಮತನದತ್ತ ಮರಳೋಣ. ಪರಕೀಯತೆ ಬಿಟ್ಟು ಸ್ವಂತಿಕೆಯತ್ತ ನಡೆಯೋಣ ಎಂದು ಆಶಿಸಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿ ಮತ್ತು ನ್ಯೂಸ್ ಎಲರ್ಟ್ ಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ ಸೇರಿಕೊಳ್ಳಿ….

ದಿನಕ್ಕೊಂದು ಆಂಗ್ಲಪದ ತ್ಯಾಗ ಅಭಿಯಾನದಲ್ಲಿ ಇಂದು ವ್ಯಾಪಕವಾಗಿ ಬಳಕೆಯಲ್ಲಿರುವ ಸರ್, ಮೇಡಂ ಪದಗಳನ್ನು ಬಿಡೋಣ. ಇದು ಗುಲಾಮಗಿರಿಯ ಸಂಕೇತ. ಕನ್ನಡದಲ್ಲಿ ಗೌರವಸೂಚಕ, ಸಂಬಂಧ ಸೂಚಕ ಪದಗಳು ಹೇರಳವಾಗಿದ್ದು, ಅದನ್ನು ಮತ್ತೆ ಚಾಲ್ತಿಗೆ ತರೋಣ ಎಂದರು. ಗೌರವಾನ್ವಿತರನ್ನು ಮಹೋದಯ, ಮಹಾನುಭಾವ ಎಂದು ಸಂಬೋಧಿಸಬೇಕು. ಅಂತೆಯೇ ನಮ್ಮ ಆಡು ಭಾಷೆಯಲ್ಲಿ ಬಂದ ಅತಿಥಿಗಳ ವಯಸ್ಸನ್ನು ನೋಡಿಕೊಂಡು ಅಣ್ಣ, ಅಕ್ಕ, ತಮ್ಮ, ತಂಗಿ, ಅಜ್ಜ, ಮಾವ, ಭಾವ ಹೀಗೆ ಆತ್ಮೀಯತೆಯನ್ನು ಸೂಚಿಸುವ ಹಲವು ಪದಗಳನ್ನು ಬಳಸುತ್ತೇವೆ. ಮಕ್ಕಳನ್ನು ಕೂಡಾ ಪುಟ್ಟ, ಪುಟ್ಟಿ, ಮಗ, ಮಗಳು ಎಂದು ಸಂಬೋಧಿಸುವ ಕ್ರಮ ಇದೆ. ಆದರೆ ಇಂಗ್ಲಿಷ್‍ನ ಅಂಕಲ್, ಆಂಟಿ ಎಂಬ ಪದಗಳು ಎಲ್ಲ ಸಂಬಂಧಗಳನ್ನು ನುಂಗಿಹಾಕುವಂಥವು. ಸಂಬಂಧ ಸೂಚಕ, ವೈವಿಧ್ಯಮಯ ಪದಗಳನ್ನು ಬಳಸುವ ಮೂಲಕ ಸಂಬಂಧ ಬೆಸೆಯುವ ಕಾರ್ಯ ಮಾಡೋಣ ಎಂದು ಸೂಚಿಸಿದರು.

ದಕ್ಷಿಣ ಕನ್ನಡ ಬಿಜೆಪಿಯ ಹಿರಿಯ ಮುಖಂಡರಾದ ಮುರಳಿ ಹಸಂತಡ್ಕ, ಅರುಣ್ ಕುಮಾರ್ ಪುತ್ತಿಲ ಶ್ರೀಗಳಿಂದ ಆಶೀರ್ವಾದ ಪಡೆದರು.  ಹವ್ಯಕ ಮಹಾಮಂಡಲ ಅಧ್ಯಕ್ಷ ಹರಿಪ್ರಸಾದ್ ಪೆರಿಯಪ್ಪು, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಉಪ್ಪಿನಂಗಡಿ ಮಂಡಲ ಅಧ್ಯಕ್ಷ ಅರವಿಂದ ಧರ್ಬೆ, ಚಾತುರ್ಮಾಸ್ಯ ತಂಡದ ಮಂಜುನಾಥ ಸುವರ್ಣಗದ್ದೆ, ಶ್ರೀಕಾಂತ ಪಂಡಿತ, ಎನ್.ಆರ್.ರಾಘವೇಂದ್ರ, ಎಂಜಿನಿಯರ್ ವಿಷ್ಣು ಬನಾರಿ, ವೇದಮೂರ್ತಿ ಗುರು ಭಟ್ಟರು, ಜಿ.ಎಲ್.ಹೆಗಡೆ ಮತ್ತಿತರರು ಉಪಸ್ಥಿತರಿದ್ದರು. ವೇದಮೂರ್ತಿ ಪರಮೇಶ್ವರ ಮಾರ್ಕಂಡೆಯವರ ಅಧ್ವರ್ಯದಲ್ಲಿ ಗೋಕರ್ಣದ ಭದ್ರಕಾಳಿ ಮಂದಿರದಲ್ಲಿ ಚಂಡಿಕಾ ಹವನ ನಡೆಯಿತು. ಬಳಿಕ ಶ್ರೀಗಳು ಭದ್ರಕಾಳಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…

2 minutes ago

ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ

ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…

8 minutes ago

ಬ್ರಿಟನ್‌ನಲ್ಲಿ ಉರಿ ಬಿಸಿಲು – ಎರಡು ತಿಂಗಳಲ್ಲಿ 2,700ಕ್ಕೂ ಹೆಚ್ಚು ಸಾವು..! ಹವಾಮಾನ ಬದಲಾವಣೆಯಿಂದ ಶೇ.40ಕ್ಕೂ ಹೆಚ್ಚು ಜೀವಹಾನಿ ಎಂದ ಅಧ್ಯಯನ

ಬ್ರಿಟನ್‌ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…

14 minutes ago

ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ

ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…

8 hours ago

ಬಾಂಗ್ಲಾದೇಶದಲ್ಲಿ ಭೀಕರ ಪ್ರವಾಹ – ಭಾರಿ ಮಳೆಯಿಂದ 50 ಕ್ಕೂ ಅಧಿಕ ಮಂದಿ ಸಾವು ; 10 ಲಕ್ಷಕ್ಕೂ ಹೆಚ್ಚು ಜನರಿಗೆ ಸಂಕಷ್ಟ

ಬಾಂಗ್ಲಾದೇಶದಲ್ಲಿ ಭಾರೀ ಮಳೆಯಿಂದ 44 ಮಂದಿ ಮೃತಪಟ್ಟಿದ್ದು, 10 ಲಕ್ಷಕ್ಕೂ ಹೆಚ್ಚು ಜನರು…

9 hours ago

ಹವಾಮಾನ ವರದಿ |13-07-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಜೋರು ಮಳೆ ಇಲ್ಲ

ರಾಜ್ಯದಲ್ಲಿ ಮುಂದಿನ 10 ದಿನಗಳವರೆಗೆ ಜೋರು ಮಳೆಯ ಸಾಧ್ಯತೆಗಳು ಕಾಣುತ್ತಿಲ್ಲ. ಕರಾವಳಿಯಲ್ಲಿ ಜುಲೈ…

16 hours ago