ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ ಮೂಡಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಪತ್ರಕರ್ತರಿಗೆ ಹೃದಯ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ಯಾರೂ ಅನಗತ್ಯ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ. ಐ.ಸಿ.ಎಂ.ಆರ್. ಸೇರಿದಂತೆ ಅನೇಕ ಸಂಸ್ಥೆಗಳು ಅಧ್ಯಯನ ಕೈಗೊಂಡಿದ್ದು, ಎಲ್ಲಿಯೂ ಕೋವಿಡ್ ಲಸಿಕೆಯಿಂದ ಹೃದಯಾಘಾತದ ಬಗ್ಗೆ ಸಾಕ್ಷ್ಯ ಸಿಕ್ಕಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಯಾರಾದರೂ ಹೃದಯಾಘಾತದಿಂದ ಮೃತಪಟ್ಟಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುವುದು. ಇದರಿಂದ ಸಾವಿಗೆ ನಿಖರ ಕಾರಣ ತಿಳಿದು ಬರಲಿದೆ ಎಂದು ಹೇಳಿದ್ದಾರೆ. ಹಾಸನದಲ್ಲಿ ಹೃದಯಾಘಾತದ ಪ್ರಕರಣ ಹೆಚ್ಚಾಗಿ ಕಂಡುಬಂದ ಹಿನ್ನೆಲೆಯಲ್ಲಿ ತಜ್ಞರ ಸಮಿತಿ ರಚಿಸಿದ್ದು, ವರದಿ ಬಂದ ನಂತರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…