MIRROR FOCUS

ಇನ್ನೂ ಬಾರದ ಮಳೆ… | ಬರಗಾಲದ ಹೊಡೆತಕ್ಕೆ ಹಾವೇರಿಯ ಅಡಿಕೆ ಬೆಳೆಗಾರರು ಕಂಗಾಲು |

Share

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಭೀಕರ ಬರ(Drought) ತಲೆದೋರಿದೆ. ಕೆಲವು ಕಡೆ ಪೂರ್ವ ಮುಂಗಾರು ಮಳೆ(Pre Mansoon rain) ಸುರಿದ ಕಾರಣ ರೈತರು(Farmers) ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆಯ(Rain) ಸುಳಿವೇ ಇಲ್ಲ. ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಅದರಲ್ಲೂ ರೈತರ ಪಾಡು ಹೇಳತೀರದು. ಹಾವೇರಿ ಜಿಲ್ಲೆಯಲ್ಲಿ ಅಡಿಕೆ ಬೆಳೆ(Areca crop) ನಂಬಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ತಲೆದೋರಿದೆ. ಕಳೆದ ವರ್ಷ ಬಂದಪ್ಪಳಿಸಿದ ಭೀಕರ ಬರಗಾಲದಿಂದ(Drought Effect) ಅಡಿಕೆ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಇತ್ತ ಹಾವೇರಿ, ರಾಣೆಬೆನ್ನೂರು ತಾಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ.

Advertisement

ಹಾವೇರಿ ಕೃಷಿಕರಿಗೆ ಮೊದಲಿನಿಂದಲೂ ಅಡಿಕೆ ಬೆಳೆ ಬೆಳೆಯುವ ಆಸೆ. ಅದರಲ್ಲೂ ಶಿರಸಿ, ಬನವಾಸಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿನ ಅಡಿಕೆ ತೋಟಗಳನ್ನು ನೋಡುತ್ತಿದ್ದ ಅವರಿಗೆ ತಮ್ಮ ಜಿಲ್ಲೆಯಲ್ಲೂ ಅಡಿಕೆ ಬೆಳೆಯುವ ಹಂಬಲವಿತ್ತು. ಅದರಲ್ಲೂ ಅಡಿಕೆಗೆ ಚಿನ್ನದ ಬೆಲೆ ಬಂದ ಮೇಲಂತೂ ಹಾವೇರಿಯ ರೈತರು ಅಡಿಕೆ ಗಿಡಗಳನ್ನು ನೆಟ್ಟು ತೋಟ ಮಾಡಲಾರಂಭಿಸಿದರು. ಈ ಪ್ರಯತ್ನದಲ್ಲಿ ಸಾಕಷ್ಟು ಮಂದಿ ಯಶಸ್ವಿಯೂ ಆದರು. ತೋಟ ಮಾಡಿ ಆರು ವರ್ಷಕ್ಕೆ ಇಳುವರಿ ಪಡೆಯಲಾರಂಭಿಸಿದರು. 8,000 ಹೆಕ್ಟೇರ್​ ಇದ್ದ ಅಡಿಕೆ ತೋಟಗಳ ವಿಸ್ತೀರ್ಣ ಮೂರು ವರ್ಷಗಳಲ್ಲೇ 14 ಸಾವಿರ ಹೆಕ್ಟೇರ್‌ ತಲುಪಿತ್ತು.

ರಾಜ್ಯ ಸರ್ಕಾರ ಮಲೆನಾಡು ಅಭಿವೃದ್ಧಿ ನಿಗಮಕ್ಕೆ ಬರುವ ಹಾವೇರಿ ಜಿಲ್ಲೆಯ ಹಿರೇಕೆರೂರು, ಶಿಗ್ಗಾಂವ್, ಸವಣೂರು, ಬ್ಯಾಡಗಿ ಮತ್ತು ಹಾನಗಲ್ ತಾಲೂಕುಗಳ ರೈತರಿಗೆ ನರೇಗಾ ಯೋಜನೆಯಲ್ಲಿ ಹಣ ನೀಡಿತು. ಆದರೆ ರಾಣೆಬೆನ್ನೂರು ತಾಲೂಕುಗಳ ಅಡಿಕೆ ರೈತರಿಗೆ ಬಯಲುಸೀಮೆ ಎಂಬ ಕಾರಣಕ್ಕೆ ಸಬ್ಸಿಡಿ ಸಿಗಲಿಲ್ಲ. ಹೀಗಿದ್ದರೂ ತಾಲೂಕಿನಲ್ಲಿ ಅಡಿಕೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಕೊಳವೆ ಬಾವಿ ನೀರಿನ ಲಭ್ಯತೆ ಮೇಲೆ ತಮಗಿರುವ ಜಮೀನಿನಲ್ಲಿ ಎಕರೆಗೆ 600-700 ಅಡಿಕೆ ಗಿಡ ನೆಟ್ಟು ಬೆಳೆಸಿ ಈ ವರ್ಷ ಕೈತುಂಬಾ ಫಸಲಿನ ಕನಸು ಕಂಡಿದ್ದರು.

ಆದರೆ, ಬರ ಬಂದಪ್ಪಳಿಸಿ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಆರಂಭದಲ್ಲಿ ಅಕ್ಕಪಕ್ಕದ ಜಮೀನುಗಳ ರೈತರ ಕೊಳವೆಬಾವಿ ಸಹಾಯದಿಂದ ನೀರುಣಿಸುತ್ತಿದ್ದರು. ಇದೀಗ ನೀರು ನೀಡುತ್ತಿರುವ ರೈತರ ಕೊಳವೆಬಾವಿಗಳಲ್ಲೇ ನೀರಿಲ್ಲ. ಹಾಗಾಗಿ, ಅವರು ತಮ್ಮ ಅಡಿಕೆ ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

2 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

3 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

4 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

4 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

19 hours ago