MIRROR FOCUS

ಇನ್ನೂ ಬಾರದ ಮಳೆ… | ಬರಗಾಲದ ಹೊಡೆತಕ್ಕೆ ಹಾವೇರಿಯ ಅಡಿಕೆ ಬೆಳೆಗಾರರು ಕಂಗಾಲು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಭೀಕರ ಬರ(Drought) ತಲೆದೋರಿದೆ. ಕೆಲವು ಕಡೆ ಪೂರ್ವ ಮುಂಗಾರು ಮಳೆ(Pre Mansoon rain) ಸುರಿದ ಕಾರಣ ರೈತರು(Farmers) ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆಯ(Rain) ಸುಳಿವೇ ಇಲ್ಲ. ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಅದರಲ್ಲೂ ರೈತರ ಪಾಡು ಹೇಳತೀರದು. ಹಾವೇರಿ ಜಿಲ್ಲೆಯಲ್ಲಿ ಅಡಿಕೆ ಬೆಳೆ(Areca crop) ನಂಬಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ತಲೆದೋರಿದೆ. ಕಳೆದ ವರ್ಷ ಬಂದಪ್ಪಳಿಸಿದ ಭೀಕರ ಬರಗಾಲದಿಂದ(Drought Effect) ಅಡಿಕೆ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಇತ್ತ ಹಾವೇರಿ, ರಾಣೆಬೆನ್ನೂರು ತಾಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ.

Advertisement
Advertisement

ಹಾವೇರಿ ಕೃಷಿಕರಿಗೆ ಮೊದಲಿನಿಂದಲೂ ಅಡಿಕೆ ಬೆಳೆ ಬೆಳೆಯುವ ಆಸೆ. ಅದರಲ್ಲೂ ಶಿರಸಿ, ಬನವಾಸಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿನ ಅಡಿಕೆ ತೋಟಗಳನ್ನು ನೋಡುತ್ತಿದ್ದ ಅವರಿಗೆ ತಮ್ಮ ಜಿಲ್ಲೆಯಲ್ಲೂ ಅಡಿಕೆ ಬೆಳೆಯುವ ಹಂಬಲವಿತ್ತು. ಅದರಲ್ಲೂ ಅಡಿಕೆಗೆ ಚಿನ್ನದ ಬೆಲೆ ಬಂದ ಮೇಲಂತೂ ಹಾವೇರಿಯ ರೈತರು ಅಡಿಕೆ ಗಿಡಗಳನ್ನು ನೆಟ್ಟು ತೋಟ ಮಾಡಲಾರಂಭಿಸಿದರು. ಈ ಪ್ರಯತ್ನದಲ್ಲಿ ಸಾಕಷ್ಟು ಮಂದಿ ಯಶಸ್ವಿಯೂ ಆದರು. ತೋಟ ಮಾಡಿ ಆರು ವರ್ಷಕ್ಕೆ ಇಳುವರಿ ಪಡೆಯಲಾರಂಭಿಸಿದರು. 8,000 ಹೆಕ್ಟೇರ್​ ಇದ್ದ ಅಡಿಕೆ ತೋಟಗಳ ವಿಸ್ತೀರ್ಣ ಮೂರು ವರ್ಷಗಳಲ್ಲೇ 14 ಸಾವಿರ ಹೆಕ್ಟೇರ್‌ ತಲುಪಿತ್ತು.

ರಾಜ್ಯ ಸರ್ಕಾರ ಮಲೆನಾಡು ಅಭಿವೃದ್ಧಿ ನಿಗಮಕ್ಕೆ ಬರುವ ಹಾವೇರಿ ಜಿಲ್ಲೆಯ ಹಿರೇಕೆರೂರು, ಶಿಗ್ಗಾಂವ್, ಸವಣೂರು, ಬ್ಯಾಡಗಿ ಮತ್ತು ಹಾನಗಲ್ ತಾಲೂಕುಗಳ ರೈತರಿಗೆ ನರೇಗಾ ಯೋಜನೆಯಲ್ಲಿ ಹಣ ನೀಡಿತು. ಆದರೆ ರಾಣೆಬೆನ್ನೂರು ತಾಲೂಕುಗಳ ಅಡಿಕೆ ರೈತರಿಗೆ ಬಯಲುಸೀಮೆ ಎಂಬ ಕಾರಣಕ್ಕೆ ಸಬ್ಸಿಡಿ ಸಿಗಲಿಲ್ಲ. ಹೀಗಿದ್ದರೂ ತಾಲೂಕಿನಲ್ಲಿ ಅಡಿಕೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಕೊಳವೆ ಬಾವಿ ನೀರಿನ ಲಭ್ಯತೆ ಮೇಲೆ ತಮಗಿರುವ ಜಮೀನಿನಲ್ಲಿ ಎಕರೆಗೆ 600-700 ಅಡಿಕೆ ಗಿಡ ನೆಟ್ಟು ಬೆಳೆಸಿ ಈ ವರ್ಷ ಕೈತುಂಬಾ ಫಸಲಿನ ಕನಸು ಕಂಡಿದ್ದರು.

ಆದರೆ, ಬರ ಬಂದಪ್ಪಳಿಸಿ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಆರಂಭದಲ್ಲಿ ಅಕ್ಕಪಕ್ಕದ ಜಮೀನುಗಳ ರೈತರ ಕೊಳವೆಬಾವಿ ಸಹಾಯದಿಂದ ನೀರುಣಿಸುತ್ತಿದ್ದರು. ಇದೀಗ ನೀರು ನೀಡುತ್ತಿರುವ ರೈತರ ಕೊಳವೆಬಾವಿಗಳಲ್ಲೇ ನೀರಿಲ್ಲ. ಹಾಗಾಗಿ, ಅವರು ತಮ್ಮ ಅಡಿಕೆ ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

13 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

13 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

2 days ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

2 days ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

2 days ago