Advertisement
MIRROR FOCUS

ಇನ್ನೂ ಬಾರದ ಮಳೆ… | ಬರಗಾಲದ ಹೊಡೆತಕ್ಕೆ ಹಾವೇರಿಯ ಅಡಿಕೆ ಬೆಳೆಗಾರರು ಕಂಗಾಲು |

Share

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಭೀಕರ ಬರ(Drought) ತಲೆದೋರಿದೆ. ಕೆಲವು ಕಡೆ ಪೂರ್ವ ಮುಂಗಾರು ಮಳೆ(Pre Mansoon rain) ಸುರಿದ ಕಾರಣ ರೈತರು(Farmers) ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆಯ(Rain) ಸುಳಿವೇ ಇಲ್ಲ. ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಅದರಲ್ಲೂ ರೈತರ ಪಾಡು ಹೇಳತೀರದು. ಹಾವೇರಿ ಜಿಲ್ಲೆಯಲ್ಲಿ ಅಡಿಕೆ ಬೆಳೆ(Areca crop) ನಂಬಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ತಲೆದೋರಿದೆ. ಕಳೆದ ವರ್ಷ ಬಂದಪ್ಪಳಿಸಿದ ಭೀಕರ ಬರಗಾಲದಿಂದ(Drought Effect) ಅಡಿಕೆ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಇತ್ತ ಹಾವೇರಿ, ರಾಣೆಬೆನ್ನೂರು ತಾಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ.

Advertisement
Advertisement

ಹಾವೇರಿ ಕೃಷಿಕರಿಗೆ ಮೊದಲಿನಿಂದಲೂ ಅಡಿಕೆ ಬೆಳೆ ಬೆಳೆಯುವ ಆಸೆ. ಅದರಲ್ಲೂ ಶಿರಸಿ, ಬನವಾಸಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿನ ಅಡಿಕೆ ತೋಟಗಳನ್ನು ನೋಡುತ್ತಿದ್ದ ಅವರಿಗೆ ತಮ್ಮ ಜಿಲ್ಲೆಯಲ್ಲೂ ಅಡಿಕೆ ಬೆಳೆಯುವ ಹಂಬಲವಿತ್ತು. ಅದರಲ್ಲೂ ಅಡಿಕೆಗೆ ಚಿನ್ನದ ಬೆಲೆ ಬಂದ ಮೇಲಂತೂ ಹಾವೇರಿಯ ರೈತರು ಅಡಿಕೆ ಗಿಡಗಳನ್ನು ನೆಟ್ಟು ತೋಟ ಮಾಡಲಾರಂಭಿಸಿದರು. ಈ ಪ್ರಯತ್ನದಲ್ಲಿ ಸಾಕಷ್ಟು ಮಂದಿ ಯಶಸ್ವಿಯೂ ಆದರು. ತೋಟ ಮಾಡಿ ಆರು ವರ್ಷಕ್ಕೆ ಇಳುವರಿ ಪಡೆಯಲಾರಂಭಿಸಿದರು. 8,000 ಹೆಕ್ಟೇರ್​ ಇದ್ದ ಅಡಿಕೆ ತೋಟಗಳ ವಿಸ್ತೀರ್ಣ ಮೂರು ವರ್ಷಗಳಲ್ಲೇ 14 ಸಾವಿರ ಹೆಕ್ಟೇರ್‌ ತಲುಪಿತ್ತು.

ರಾಜ್ಯ ಸರ್ಕಾರ ಮಲೆನಾಡು ಅಭಿವೃದ್ಧಿ ನಿಗಮಕ್ಕೆ ಬರುವ ಹಾವೇರಿ ಜಿಲ್ಲೆಯ ಹಿರೇಕೆರೂರು, ಶಿಗ್ಗಾಂವ್, ಸವಣೂರು, ಬ್ಯಾಡಗಿ ಮತ್ತು ಹಾನಗಲ್ ತಾಲೂಕುಗಳ ರೈತರಿಗೆ ನರೇಗಾ ಯೋಜನೆಯಲ್ಲಿ ಹಣ ನೀಡಿತು. ಆದರೆ ರಾಣೆಬೆನ್ನೂರು ತಾಲೂಕುಗಳ ಅಡಿಕೆ ರೈತರಿಗೆ ಬಯಲುಸೀಮೆ ಎಂಬ ಕಾರಣಕ್ಕೆ ಸಬ್ಸಿಡಿ ಸಿಗಲಿಲ್ಲ. ಹೀಗಿದ್ದರೂ ತಾಲೂಕಿನಲ್ಲಿ ಅಡಿಕೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಕೊಳವೆ ಬಾವಿ ನೀರಿನ ಲಭ್ಯತೆ ಮೇಲೆ ತಮಗಿರುವ ಜಮೀನಿನಲ್ಲಿ ಎಕರೆಗೆ 600-700 ಅಡಿಕೆ ಗಿಡ ನೆಟ್ಟು ಬೆಳೆಸಿ ಈ ವರ್ಷ ಕೈತುಂಬಾ ಫಸಲಿನ ಕನಸು ಕಂಡಿದ್ದರು.

ಆದರೆ, ಬರ ಬಂದಪ್ಪಳಿಸಿ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಆರಂಭದಲ್ಲಿ ಅಕ್ಕಪಕ್ಕದ ಜಮೀನುಗಳ ರೈತರ ಕೊಳವೆಬಾವಿ ಸಹಾಯದಿಂದ ನೀರುಣಿಸುತ್ತಿದ್ದರು. ಇದೀಗ ನೀರು ನೀಡುತ್ತಿರುವ ರೈತರ ಕೊಳವೆಬಾವಿಗಳಲ್ಲೇ ನೀರಿಲ್ಲ. ಹಾಗಾಗಿ, ಅವರು ತಮ್ಮ ಅಡಿಕೆ ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.

  • ಅಂತರ್ಜಾಲ ಮಾಹಿತಿ
ಪ್ರತಿಕ್ರಿಯಿಸಲು....
ಈ ಕೆಳಗಿನ ಲಿಂಕ್‌ ಮೂಲಕ ನಿಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದು…

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

22 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

23 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

23 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

23 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

1 day ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

1 day ago