ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ರಾಜ್ಯಾದ್ಯಂತ ಭೀಕರ ಬರ(Drought) ತಲೆದೋರಿದೆ. ಕೆಲವು ಕಡೆ ಪೂರ್ವ ಮುಂಗಾರು ಮಳೆ(Pre Mansoon rain) ಸುರಿದ ಕಾರಣ ರೈತರು(Farmers) ನಿಟ್ಟುಸಿರು ಬಿಟ್ಟಿದ್ದಾರೆ. ಆದರೆ ಕೆಲ ಜಿಲ್ಲೆಗಳಲ್ಲಿ ಮಳೆಯ(Rain) ಸುಳಿವೇ ಇಲ್ಲ. ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಅದರಲ್ಲೂ ರೈತರ ಪಾಡು ಹೇಳತೀರದು. ಹಾವೇರಿ ಜಿಲ್ಲೆಯಲ್ಲಿ ಅಡಿಕೆ ಬೆಳೆ(Areca crop) ನಂಬಿದ್ದ ರೈತರು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ತಲೆದೋರಿದೆ. ಕಳೆದ ವರ್ಷ ಬಂದಪ್ಪಳಿಸಿದ ಭೀಕರ ಬರಗಾಲದಿಂದ(Drought Effect) ಅಡಿಕೆ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಇತ್ತ ಹಾವೇರಿ, ರಾಣೆಬೆನ್ನೂರು ತಾಲೂಕಿನ ರೈತರು ಸಂಕಷ್ಟದಲ್ಲಿದ್ದಾರೆ.
ಹಾವೇರಿ ಕೃಷಿಕರಿಗೆ ಮೊದಲಿನಿಂದಲೂ ಅಡಿಕೆ ಬೆಳೆ ಬೆಳೆಯುವ ಆಸೆ. ಅದರಲ್ಲೂ ಶಿರಸಿ, ಬನವಾಸಿ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿನ ಅಡಿಕೆ ತೋಟಗಳನ್ನು ನೋಡುತ್ತಿದ್ದ ಅವರಿಗೆ ತಮ್ಮ ಜಿಲ್ಲೆಯಲ್ಲೂ ಅಡಿಕೆ ಬೆಳೆಯುವ ಹಂಬಲವಿತ್ತು. ಅದರಲ್ಲೂ ಅಡಿಕೆಗೆ ಚಿನ್ನದ ಬೆಲೆ ಬಂದ ಮೇಲಂತೂ ಹಾವೇರಿಯ ರೈತರು ಅಡಿಕೆ ಗಿಡಗಳನ್ನು ನೆಟ್ಟು ತೋಟ ಮಾಡಲಾರಂಭಿಸಿದರು. ಈ ಪ್ರಯತ್ನದಲ್ಲಿ ಸಾಕಷ್ಟು ಮಂದಿ ಯಶಸ್ವಿಯೂ ಆದರು. ತೋಟ ಮಾಡಿ ಆರು ವರ್ಷಕ್ಕೆ ಇಳುವರಿ ಪಡೆಯಲಾರಂಭಿಸಿದರು. 8,000 ಹೆಕ್ಟೇರ್ ಇದ್ದ ಅಡಿಕೆ ತೋಟಗಳ ವಿಸ್ತೀರ್ಣ ಮೂರು ವರ್ಷಗಳಲ್ಲೇ 14 ಸಾವಿರ ಹೆಕ್ಟೇರ್ ತಲುಪಿತ್ತು.
ರಾಜ್ಯ ಸರ್ಕಾರ ಮಲೆನಾಡು ಅಭಿವೃದ್ಧಿ ನಿಗಮಕ್ಕೆ ಬರುವ ಹಾವೇರಿ ಜಿಲ್ಲೆಯ ಹಿರೇಕೆರೂರು, ಶಿಗ್ಗಾಂವ್, ಸವಣೂರು, ಬ್ಯಾಡಗಿ ಮತ್ತು ಹಾನಗಲ್ ತಾಲೂಕುಗಳ ರೈತರಿಗೆ ನರೇಗಾ ಯೋಜನೆಯಲ್ಲಿ ಹಣ ನೀಡಿತು. ಆದರೆ ರಾಣೆಬೆನ್ನೂರು ತಾಲೂಕುಗಳ ಅಡಿಕೆ ರೈತರಿಗೆ ಬಯಲುಸೀಮೆ ಎಂಬ ಕಾರಣಕ್ಕೆ ಸಬ್ಸಿಡಿ ಸಿಗಲಿಲ್ಲ. ಹೀಗಿದ್ದರೂ ತಾಲೂಕಿನಲ್ಲಿ ಅಡಿಕೆ ಬೆಳೆಯುವವರ ಸಂಖ್ಯೆ ಕಡಿಮೆಯಾಗಿಲ್ಲ. ಕೊಳವೆ ಬಾವಿ ನೀರಿನ ಲಭ್ಯತೆ ಮೇಲೆ ತಮಗಿರುವ ಜಮೀನಿನಲ್ಲಿ ಎಕರೆಗೆ 600-700 ಅಡಿಕೆ ಗಿಡ ನೆಟ್ಟು ಬೆಳೆಸಿ ಈ ವರ್ಷ ಕೈತುಂಬಾ ಫಸಲಿನ ಕನಸು ಕಂಡಿದ್ದರು.
ಆದರೆ, ಬರ ಬಂದಪ್ಪಳಿಸಿ ತೋಟಗಳು ಒಣಗಿವೆ. ಕೊಳವೆ ಬಾವಿಗಳಲ್ಲಿ ನೀರು ಖಾಲಿಯಾಗಿದೆ. ಆರಂಭದಲ್ಲಿ ಅಕ್ಕಪಕ್ಕದ ಜಮೀನುಗಳ ರೈತರ ಕೊಳವೆಬಾವಿ ಸಹಾಯದಿಂದ ನೀರುಣಿಸುತ್ತಿದ್ದರು. ಇದೀಗ ನೀರು ನೀಡುತ್ತಿರುವ ರೈತರ ಕೊಳವೆಬಾವಿಗಳಲ್ಲೇ ನೀರಿಲ್ಲ. ಹಾಗಾಗಿ, ಅವರು ತಮ್ಮ ಅಡಿಕೆ ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…